ಹೋಟೆಲ್ಗಳ ತ್ಯಾಜ್ಯದಿಂದ ಕಾಂಪೋಸ್ಟ್ ಗೊಬ್ಬರ ಉತ್ಪತಿ
Team Udayavani, Oct 12, 2019, 4:53 PM IST
ಕನಕಪುರ: ಮನೆಗಳಲ್ಲಿ ಹೋಟೆಲ್ಗಳು ಬಾರ್ ಅಂಡ್ ರೆಸ್ಟೋರೆಂಟ್ ಕ್ಯಾಟರಿಂಗ್ ಬೀದಿಬದಿಯ ಕ್ಯಾಂಟೀನ್ಗಳು ಉತ್ಪಾದಿಸುವ ತ್ಯಾಜ್ಯವನ್ನು ಹೋಂ ಕಾಂಪೋಸ್ಟ್ ಬಿನ್ ತ್ಯಾಜ್ಯ ಸಂಸ್ಕರಣ ಘಟಕದ ಮೂಲಕ ಗೊಬ್ಬರವನ್ನಾಗಿ ಪರಿವರ್ತಿಸಬಹುದು ಎಂದು ನಗರಸಭೆಯ ಆರೋಗ್ಯಾಧಿಕಾರಿ ಕುಸುಮ ತಿಳಿಸಿದರು.
ನಗರದ ಇಂದಿರಾ ಕ್ಯಾಂಟೀನ್ನಲ್ಲಿ ಪ್ರಯೋಗಿಕವಾಗಿ ಗ್ರೀನ್ ರಿಚ್ ಕಂಪನಿಯ ಹೋಂ ಕಂಪೋಸ್ಟ್ ಬಿನ್ ಎಂಬ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ಖಾಸಗಿ ಹೋಟೆಲ್ ಕಲ್ಯಾಣ ಮಂಟಪ ಬೀದಿಬದಿಯ ಕ್ಯಾಂಟೀನ್ಗಳು ಸೇರಿದಂತೆ ಹೆಚ್ಚು ಘನತ್ಯಾಜ್ಯವನ್ನು ಉತ್ಪಾದಿಸುವ ಸ್ಥಳಗಳಲ್ಲಿ ತ್ಯಾಜ್ಯ ಸಂಸ್ಕರಣ ಘಟಕವನ್ನು ಅನುಷ್ಠಾನಕ್ಕೆ ತರುವ ಉದ್ದೇಶದಿಂದ ಹಾಗೂ ಘನತ್ಯಾಜ್ಯ ವಿಲೇವಾರಿ ಕಾಯ್ದೆ ಪ್ರಕಾರ ಸರಿಯಾಗಿ ತ್ಯಾಜ್ಯ ವಿಲೇವಾರಿ ಮಾಡದೆ ರಸ್ತೆಬದಿಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡುವವರಿಗೆ ದೊಡ್ಡ ಮೊತ್ತದ ದಂಡ ವಿಧಿಸುವ ಅವಕಾಶವಿದ್ದು ಈ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ಹೋಟೆಲ್ ಮಾಲೀಕರಿಗೆ ತ್ಯಾಜ್ಯಾ ಸಂಸ್ಕರಣೆ ಬಗ್ಗೆ ತಿಳುವಳಿಕೆ ಮೂಡಿಸಿ ಪ್ರೋತ್ಸಾಹಿಸುವ ದೃಷ್ಟಿಯಿಂದ ಪ್ರಾಯೋಗಿಕವಾಗಿ ಇಂದಿರಾ ಕ್ಯಾಂಟೀನ್ನಲ್ಲಿ ತ್ಯಾಜ್ಯ ಸಂಸ್ಕರಣ ಘಟಕವನ್ನು ಅಳವಡಿಸಲಾಗಿದೆ
ಹೋಟೆಲ್ಗಳಲ್ಲಿ ಉತ್ಪಾದಿಸುವ ತರಕಾರಿ ಉಳಿದ ಆಹಾರ ಗಳಂತಹ ಹಸಿತ್ಯಾಜ್ಯಕ್ಕೆ ಸಗಣಿ ನೀರು ಅಥವಾ ಕೊಕ್ ಪೌಡರ್ ಮಿಶ್ರಣ ಮಾಡಿ 20 ಕೆಜಿ ಯಷತ್ಯಾಜ್ಯವನ್ನು ಹಾಕಿ ಹದಿನೈದು ದಿನಗಳ ನಂತರ ಉತ್ತಮವಾದ ಸಾವಯವ ಗೊಬ್ಬರವನ್ನೂ ಪಡೆಯಬಹುದು ಸದರಿ ಗೊಬ್ಬರವನ್ನು ಬೆಳೆಗಳಿಗೆ ಬಳಸಬಹುದು ಎಂದರು. ಕರ್ನಾಟಕ ರಾಜ್ಯ ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿ ಸಿದ್ದರಾಮಯ್ಯ ಮತ್ತು ಇಂದಿರಾ ಕ್ಯಾಂಟೀನ್ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ