ನೀಲಸಂದ್ರ ಕೆರೆ ಏರಿ ದುರಸ್ತಿಗೆ ಸೂಕ್ತ ಕ್ರಮವಹಿಸಿ


Team Udayavani, May 23, 2022, 4:02 PM IST

ನೀಲಸಂದ್ರ ಕೆರೆ ಏರಿ ದುರಸ್ತಿಗೆ ಸೂಕ್ತ ಕ್ರಮವಹಿಸಿ

ಚನ್ನಪಟ್ಟಣ: ತಾಲೂಕಿನ ನೀಲಸಂದ್ರ ಕೆರೆಯ ಅಪಾಯದ ಅಂಚಿನಲ್ಲಿದ್ದು, ದುರಸ್ತಿಗೊಳಿಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಚನ್ನಪಟ್ಟಣ ತಾಲೂಕು ಪಂಚಾಯ್ತಿ ಇಒ ಚಂದ್ರು ಮತ್ತು ತಹಶೀಲ್ದಾರ್‌ ಹರ್ಷವರ್ಧನ್‌ ಸೂಚನೆ ನೀಡಿದರು.

ನಗರದಲ್ಲಿ ತಾಲೂಕು ಪಂಚಾಯ್ತಿಯಲ್ಲಿ ತಾಪಂ ಆಡಳಿತಾಧಿಕಾರಿ ಪಿ.ರಾಧ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಭಯ ಅಧಿಕಾರಿಗಳು ಮಾತನಾಡಿದರು.

ನೀಲಸಂದ್ರ ಗ್ರಾಮದಲ್ಲಿರುವ ಕೆರೆ ಏರಿ ಹಾಗೂ ಕೋಡಿ ಶಿಥಿಲಗೊಂಡಿದೆ. ಜೋರು ಮಳೆ ಮುಂದುವರೆದರೆ ಇನ್ನಷ್ಟು ಹಾನಿಯಾಗುವ ಸಾಧ್ಯತೆ ಇದೆ, ಹೀಗಾಗಿ ಮುಂಜಾಗ್ರತೆಯಾಗಿ ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ತಾಲೂಕಿನ ಹೊಂಗನೂರು ಗ್ರಾಮದ ಕೆರೆಯಲ್ಲಿ ಮೀನು ಸಾಕಾಣಿಕೆಗೆ ಗುತ್ತಿಗೆ ಪಡೆದಿರುವ ವ್ಯಕ್ತಿ ಸಂಪೂರ್ಣವಾಗಿ ಕೆರೆಯನ್ನು ಸ್ವಾಧೀನಕ್ಕೆ ಪಡೆದಂತೆ ವರ್ತಿಸುತ್ತಿದ್ದಾರೆ.ಕೆರೆಯ ನೀರನ್ನು ತೂಬಿನ ಮೂಲಕ ಹೊರಗೆ ಬಿಡಲು ಬಿಡುತ್ತಿಲ್ಲ. ಇನ್ನು ಕೋಳಿ ತ್ಯಾಜ್ಯಸೇರಿದಂತೆ ಕಲುಷಿತ ವಸ್ತುಗಳನ್ನು ಮೀನಿಗೆ ಆಹಾರ ಎಂದು ಹಾಕಿ ಕೆರೆಯನ್ನು ಮಲಿನ ಗೊಳಿಸುತ್ತಿದ್ದಾರೆ. ಕೆರೆಯಲ್ಲಿ ಮೀನುಸಾಕಾಣಿಕೆ ಮಾಡಲು ಗುತ್ತಿಗೆ ಪಡೆದಿರುವ ವ್ಯಕ್ತಿ ಕೆರೆಯೇ ತನ್ನ ಸ್ವಂತದ್ದು ಎನ್ನುವಂತೆ ವರ್ತಿಸುತ್ತಿದ್ದಾನೆ ಎಂಬ ಆರೋಪಗಳಿವೆ. ಪರಿಶೀಲನೆ ನಡೆಸಿ, ಆರೋಪ ಸತ್ಯವಾಗಿದ್ದರೆ ಇವರಿಗೆ ಕಡಿವಾಣ ಹಾಕಿ ಎಂದು ತಹಶೀಲ್ದಾರ್‌ ಹರ್ಷವರ್ಧನ್‌ ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಳೆಹಾನಿ ಬಗ್ಗೆ ಜಂಟಿ ಸಮೀಕ್ಷೆ: ಮಳೆಯಿಂದ ಬೆಳೆಹಾನಿಯ ಆಗಿರುವ ಬಗ್ಗೆ ಸಭೆಯಲ್ಲಿ ವಿಷಯ ಪ್ರಸ್ತಾಪವಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಇಲಾಖೆ ಸಹಾಯ ನಿರ್ದೇಶಕರು ಮಾತನಾಡಿ, ಅವಧಿ ಪೂರ್ವ ಮುಂಗಾರು ಮಳೆ ವಾಡಿಕೆ ಮಳೆಗಿಂತ ಅಧಿಕವಾಗಿ ಸುರಿದಿದೆ. ಹೀಗಾಗಿ ತಾಲೂಕಿನ ಹಲವೆಡೆ ಬೆಳೆಹಾನಿ ಸಂಭವಿಸಿದೆ. ಮಳೆಯಿಂದ ಸಂಭವಿಸಿರುವ ಬೆಳೆಹಾನಿಯನ್ನು ಅಂದಾಜು ಮಾಡಲು ಕಂದಾಯ ಇಲಾಖೆ ಹಾಗೂ ಕೃಷಿಇಲಾಖೆ ಜೊತೆಗೂಡಿ ಜಂಟಿ ಸಮೀಕ್ಷೆ ನಡೆಸುವುದಾಗಿ ತಿಳಿಸಿದರು.

ನ್ಯಾನೋ ಯೂರಿಯಾ ಬಳಕೆ ಬಗ್ಗೆ ರೈತರಿಗೆ ಅರಿವು: ಮುಂಗಾರು ಮುನ್ನವೇ ತಾಲೂಕಿಗೆ ಅಗತ್ಯವಿರುವ ರಸಗೊಬ್ಬರವನ್ನು ದಾಸ್ತಾನು ಇರಿಸಲಾಗಿದೆ. ಅಗತ್ಯ ಪ್ರಮಾಣದಲ್ಲಿ ಎಲ್ಲಾರಸಗೊಬ್ಬರವನ್ನು ದಾಸ್ತಾನಿರಿಸಿದ್ದು, ತಾಲೂಕಿನಲ್ಲಿ ಹೆಚ್ಚಾಗಿ ಬೆಳೆಯುವ ಹಿಪ್ಪು ನೇರಳೆ,ಬೇಬಿ ಕಾರ್ನ್ ಬೆಳೆಗಳಿಗೆ ಯೂರಿಯಾದಅಗತ್ಯವಿದೆ. ಈ ಬೆಳೆಗಳಿಗೆ ಯೂರಿಯಾಕೊರತೆ ನೀಗಿಸುವ ಉದ್ದೇಶದಿಂದ ನ್ಯಾನೋಯೂರಿಯಾ ಬಳಕೆ ಬಗ್ಗೆ ರೈತರಿಗೆ ಅರಿವುಮೂಡಿಸಲಾಗುತ್ತಿದೆ ಎಂದು ಕೃಷಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.

ರಸ್ತೆ ಗುಂಡಿಗಳ ಬಗ್ಗೆ ಚರ್ಚೆ: ಪಿ.ಡಬ್ಲ್ಯು.ಡಿ ಇಲಾಖೆಯ ಇಂಜಿನಿಯರ್‌ ಅವರು ತಮ್ಮಇಲಾಖೆಯ ಪ್ರಗತಿಯ ಬಗ್ಗೆ ಅಂಕಿ- ಅಂಶಗಳನ್ನು ಮಂಡಿಸಿದಾಗ, ತಾಲೂಕಿನ ರಸ್ತೆಗಳಲ್ಲಿರುವ ಗುಂಡಿಗಳಿಂದಾಗಿ ಅಪಘಾತ ಸಂಭವಿಸಿದರೆ, ಯಾರನ್ನು ಹೊಣೆ ಮಾಡಬೇಕು ಎಂಬವಿಷಯ ಸಭೆಯಲ್ಲಿ ಚರ್ಚೆಗೆ ಗ್ರಾಸವಾಯಿತು. ರಸ್ತೆ ಗುಂಡಿಯಿಂದ ಸಂಭವಿಸುವಅಪಘಾತಕ್ಕೆ ಇಲಾಖೆಯನ್ನೇ ಹೊಣೆಮಾಡಬಹುದೇ ಎಂದು ಸಭೆಯಲ್ಲಿದ್ದ ಕೆಡಿಪಿ ಸದಸ್ಯರು ಪ್ರಶ್ನಿಸಿದರು.

ಗುಂಡಿಗಳಿಂದಾಗಿ ಸಂಭವಿಸುವ ಅಪಘಾತಗಳು ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಿಸಿಕೊಳ್ಳುವುದಿಲ್ಲ ಎಂದು ಕೆಲವರು ಸಭೆಯ ಗಮನ ಸೆಳೆದರು. ಇದಕ್ಕೆ ಪ್ರತಿ ಕ್ರಿಯಿಸಿದ ತಹಶೀಲ್ದಾರರು ದೂರು ಸಲ್ಲಿಸಬಹುದು ಎಂದು ಸ್ಪಷ್ಟಪಡಿಸಿದರು. ತಮ್ಮ ಇಲಾಖೆಗೆ ಹೊಣೆ ಹೊರಿಸುವುದನ್ನುನಿರಾಕರಿಸಿದ ಪಿಡಬ್ಲ್ಯುಡಿ ಇಂಜಿನಿಯರ್‌ಪ್ರದೀಪ್‌, ನಮ್ಮಿಂದ ಗುಂಡಿ ನಿರ್ಮಾಣವಾಗುವುದಿಲ್ಲ, ಮಳೆಯಿಂದಾಗಿ ನಿರ್ಮಾಣವಾಗುತ್ತಿದೆ. ಇಲಾಖೆಗೆ ಸಾಕಷ್ಟು ಅನುದಾನ ಇಲ್ಲದ ಕಾರಣ ಗುಂಡಿಗಳನ್ನುಮುಚ್ಚಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ

ಸರ್ಕಾರವೂ ಹೇಳುತ್ತದೆ ಯಾದರೂ ಗುಂಡಿಗೆಇಲಾಖೆಯೇ ಪೂರ್ಣ ಜವಾಬ್ದಾರಿಯಲ್ಲ ಎಂದು ಸಮಜಾಯಿಷಿ ನೀಡಿದರು.

ಈಗಾಗಲೇ ತಾಲೂಕಿನಲ್ಲಿ ಎಲ್ಲಾ ರಸ್ತೆಗಳ ಗುಂಡಿಗಳನ್ನು ಮುಚ್ಚಲು ಕ್ರಮಕೈಗೊಳ್ಳಲಾಗಿದೆ. ಕಾಂಕ್ರೀಟ್‌ ಹಾಕಿ ರಸ್ತೆ ಗುಂಡಿಯನ್ನು ಮುಚ್ಚುವ ಪ್ರಯತ್ನವನ್ನು ಮಾಡಲಾಗುತ್ತಿದೆ.ಮಳೆಯ ಕಾರಣದಿಂದ ರಸ್ತೆ ಗುಂಡಿಯನ್ನುಮುಚ್ಚಲು ಸಮಸ್ಯೆಯಾಗಿದೆ. ಮಳೆ ನಿಂತಬಳಿಕ ರಸ್ತೆಗುಂಡಿಯನ್ನು ಮುಚ್ಚಲಾಗುವುದು ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಕೆಡಿಪಿ ಸಮಿತಿ ಸದಸ್ಯರಾದ ಶಭೀರ್‌ವುಲ್ಲಾಬೇಗ್‌,ಯೋಗೀಶ್‌, ತಾರಕೇಶ್‌, ರಾಜು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.