ಮಾಧ್ಯಮಗಳನ್ನು ಹೊರಗಿಟ್ಟು ಪ್ರಗತಿ ಪರಿಶೀಲನಾ ಸಭೆ
Team Udayavani, Jun 18, 2022, 2:23 PM IST
ಕನಕಪುರ: ಕ್ಷೇತ್ರದ ಅಭಿವೃದ್ಧಿಯ ಹಾಗುಹೋಗುಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಪಾರ ದರ್ಶಕವಾಗಿ ಆಡಳಿತ ನಡೆಸಬೇಕಾದ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಈ ಬಾರಿಯೂ ಮಾಧ್ಯಮದವರನ್ನು ಹೊರಗಿಟ್ಟು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ತಾಲೂಕಿನ ಹಾರೋಹಳ್ಳಿಯ ಪಪಂ ಕಚೇರಿ ಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ನೇತೃತ್ವದಲ್ಲಿ ತಹಶೀಲ್ದಾರ್ ವಿಶ್ವನಾಥ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಕರೆಯಲಾಗಿತ್ತು. ಶಾಸಕರು ಈ ಬಾರಿಯೂ ಮಾಧ್ಯಮದವರನ್ನು ಹೋರಗಿಟ್ಟು ಸಭೆ ನಡೆಸಿದರು.
ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಶಾಸಕರಾಗಿ ಆಯ್ಕೆಯಾದ ರಾಮ ನಗರ ವಿಧಾನಸಭಾ ಕ್ಷೇತ್ರದ ಭಾಗವಾದ ಹಾರೋಹಳ್ಳಿ, ಮರಳವಾಡಿ ಹೋಬಳಿಗಳ ಅಭಿವೃದ್ಧಿ ಬಗ್ಗೆ ತಿಳಿದುಕೊಳ್ಳುವ ಹಕ್ಕು ಕ್ಷೇತ್ರದ ಮತದಾರರಿಗಿದೆ. ಆದರೆ, ಶಾಸಕರು ಪ್ರತಿಬಾರಿಯೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಧ್ಯಮದವರನ್ನು ಹೊರಗಿಟ್ಟು ಗುಪ್ತವಾಗಿ ಸಭೆ ನಡೆಸುವ ಅಗತ್ಯವೇನಿದೆ. ಪಾರದರ್ಶಕ ಆಡಳಿತ ಎಂಬುದರ ಅರ್ಥವೇನು? ಅಮೂಲ್ಯವಾದ ಮತ ನೀಡಿದ ಜನರ ಪ್ರತಿನಿಧಿ ಯಾಗಿ ಆಯ್ಕೆ ಮಾಡಿದ ಮತದಾರರಿಗೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ತಿಳಿದುಕೊಳ್ಳುವ ಹಕ್ಕಿಲ್ಲವೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ.
ಪ್ರಗತಿ ಪರಿಶೀಲನಾ ಸಭೆ ಬಳಿಕ ಶಾಸಕಿ ಅನಿತಾ ಕುಮಾರಸ್ವಾಮಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಜೆಡಿಎಸ್ ಮುಖಂಡರ ನಡುವೆ ವಾಗ್ವಾದ ನಡೆ ಯಿತು. ಸಭೆ ಬಳಿಕ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಅನೇಕ ಸಾರ್ವಜನಿಕರು, ಶಾಸಕಿ ಅನಿತಾ ಅವರ ಬಳಿ ತಮ್ಮ ಅಹವಾಲು ಸಲ್ಲಿಸಿದರು.
ಶಾಸಕಿ ಅನಿತಾ ಮಾತನಾಡಿ. ರಾಮನಗರ ವಿಧಾನಸಭಾ ಕ್ಷೇತ್ರದ ಕಸಬಾ, ಕೈಲಂಚ, ಹಾರೋ ಹಳ್ಳಿ, ಮರಳವಾಡಿ ಹೋಬಳಿ ವ್ಯಾಪ್ತಿಗೆ 9 ಕೋಟಿ ಅನುದಾನ ತಂದಿದ್ದೇವೆ. ಇನ್ನು 15 ದಿನದೊಳಗೆ ಕೆಲಸ ಆರಂಭವಾಗಲಿದೆ. ಹಾರೋಹಳ್ಳಿ ಭಾಗದಲ್ಲಿ ಒಳ ಚರಂಡಿ ವ್ಯವಸ್ಥೆ ಸಂಪರ್ಕ ಕಾಮಗಾರಿಯಿಂದ ರಸ್ತೆ ಹಾಳಾಗಿದೆ. ಪಪಂ ಅನುದಾನದಲ್ಲಿ ರಸ್ತೆ ಅಭಿವೃದ್ಧಿ, ಮೂಲ ಸೌಲಭ್ಯಕ್ಕೆ ಆದ್ಯತೆ ನೀಡಿದ್ದೇವೆ ಎಂದರು. ಇಒ ಮಧು ಮತ್ತು ವಿವಿಧ ಇಲಾಖೆ ಅಧಿಕಾರಿಗಳು, ಹಾರೋಹಳ್ಳಿ, ಮರಳವಾಡಿ ಹೋಬಳಿಯ ಗ್ರಾಪಂ ಪಿಡಿಒಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ