ಮಾಗಡಿಯಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್‌ ಬ್ಯಾನ್‌ ಆಗಲಿ


Team Udayavani, Jun 15, 2023, 4:14 PM IST

ಮಾಗಡಿಯಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್‌ ಬ್ಯಾನ್‌ ಆಗಲಿ

ಮಾಗಡಿ: ಪಟ್ಟಣವನ್ನು ಪ್ಲಾಸ್ಟಿಕ್‌ ಮುಕ್ತವಾಗಿಸಬೇಕು ಎಂದು ಪುರಸಭೆ ಅಧಿಕಾರಿಗಳಿಗೆ ಶಾಸಕ ಎಚ್‌.ಸಿ.ಬಾಲಕೃಷ್ಣ ತಾಕೀತು ಮಾಡಿದರು.

ಪಟ್ಟಣದ ಪುರಸಭೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ಎಲ್ಲಂದರಲ್ಲಿ ಪ್ಲಾಸ್ಟಿಕ್‌ ಕವರ್‌ಗಳ ರಾಶಿಗಳು ಕಂಡು ಬರುತ್ತಿದೆ. ಹೀಗಾಗಿ ಪಟ್ಟಣದಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್‌ ಬ್ಯಾನ್‌ ಆಗಬೇಕು. ಸ್ವತ್ಛತೆ ಕಾಪಾಡುವ ಮೂಲಕ ತಿಂಗಳೊಳಗೆ ಪ್ಲಾಸ್ಟಿಕ್‌ ಮುಕ್ತ ಮಾಗಡಿಯನ್ನಾಗಿಸಲು ಅಧಿಕಾರಿಗಳು, ಸಿಬ್ಬಂದಿ ವರ್ಗ ಕಾರ್ಯೋನ್ಮಕರಾಗಬೇಕು ಎಂದರು.

ಪಟ್ಟಣದಲ್ಲಿ ಎಷ್ಟು ಮನೆಗಳಿವೆ ಎಂಬುದನ್ನು ಪಟ್ಟಿ ಮಾಡಿ ನಂಬರ್‌ ಪ್ಲೇಟ್‌ ಅಳವಡಿಸಲು ಕ್ರಮ ವಹಿಸಬೇಕು. ಮನಸ್ಸಿಲ್ಲದೆ ಕೆಲಸ ನಿರ್ವಹಿಸಿದರೆ ಕೆಲಸ ಸಮರ್ಪಕವಾಗಿರುವುದಿಲ್ಲ, ಒಳ್ಳೆ ಮನಸ್ಸಿನಿಂದ ಕೆಲಸ ಮಾಡಬೇಕು. ಇಲ್ಲದಿದ್ದರೆ ಅಮಾನತು ಎದುರಿಸಲು ಸಿದ್ಧರಾಗಿ ಎಂದರು.

ಕೆಎಂಆರ್‌ಪಿಯಲ್ಲಿ ಭ್ರಷ್ಟಾಚಾರ: ಪಟ್ಟಣದಲ್ಲಿ ಸುಮಾರು 28 ಕೋಟಿರೂ ವೆಚ್ಚದಲ್ಲಿ ದಿನದ 24/7 ಕುಡಿವ ನೀರಿನ ಪೂರೈಕೆಗೆ ಕಾಮಗಾರಿ ಕೈಗೊಳ್ಳಲಾಗಿದೆ. ಈ ಯೋಜನೆ ಕುರಿತು ಪುರಸಭೆಯಲ್ಲಿ ಮಾಹಿತಿಯೇ ಇಲ್ಲ. ಎಂಜಿನಿಯರ್‌ ಮತ್ತು ಗುತ್ತಿಗೆದಾರರು ಸೇರಿ ನೀರು ಕುಡಿದಂತೆ ಹಣ ನುಂಗಿದ್ದಾರೆಯೇ ಹೊರೆತು, ಮಾಗಡಿ ಜನ ಮಾತ್ರ ದಿನಪೂರ್ತಿ ನೀರು ಕುಡಿಯಲು ಸಾಧ್ಯವಾಗಿಲ್ಲ, ಈ ಯೋಜನೆಯ ಭ್ರಷ್ಟಾಚಾರ ಕುರಿತು ಪುರಸಭೆ ಕಚೇರಿಗೆ ಮುಂದಿನ ಮಂಗಳವಾರ ಆಗಮಿಸಿ ಸಂಪೂರ್ಣ ವರದಿ ನೀಡುವಂತೆ ಉನ್ನತ ಅಧಿಕಾರಿಗಳಿಗೆ ದೂರವಾಣಿ ಮೂಲಕವೇ ಶಾಸಕರು ತರಾಟೆಗೆ ತೆಗೆದುಕೊಂಡರು.

ಪುರಸಭೆ ಅಂಗಡಿ ಮಳಿಗೆ ಬಹಿರಂಗ ಹರಾಜು: ಪಟ್ಟಣದಲ್ಲಿ ಇರುವ ಪುರಸಭೆ ಅಂಗಡಿ ಮಳಿಗೆ ಬಾಡಿಗೆಯ ಅವಧಿ ಮುಗಿದಿದ್ದು, ಬಹಿರಂಗ ಹರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಾಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಇರುವವರನ್ನೇ ಮುಂದುವರಿಸಲು ಅವಕಾಶವಿಲ್ಲ, ಬಹಿರಂಗ ಹರಾಜು ಮೂಲಕವೇ ಮಳಿಗೆ ಪಡೆಯಬಹುದು ಎಂದರು.

ಆಶ್ರಯ ನಿವೇಶನ ಹಂಚಿಕೆ: ಪುರಸಭೆ ನಿರ್ಮಿಸಿರುವ ಸುಮಾರು 500 ಆಶ್ರಯ ನಿವೇಶನಗಳಿದ್ದು, ಹಲವು ವರ್ಷಗಳಿಂದ ಇರುವ ಜನರಿಗೆ ಪಟ್ಟಿ ಮಾಡಿ ಅರ್ಹತೆ ಆಧಾರದ ಮೇಲೆ ನಿವೇಶನ ಹಂಚಿಕೆ ಮಾಡಲು ಕ್ರಮ ವಹಿಸುವಂತೆ ಮುಖ್ಯಾಧಿಕಾರಿಗೆ ಶಾಸಕರು ಸೂಚಿಸಿದರು. ಕುರಿ ಕೋಳಿ ಮಾಂಸದ ಅಂಗಡಿಗಳು ಎಲ್ಲಂದರಲ್ಲಿ ತಲೆ ಎತ್ತುತ್ತಿವೆ ಎಂದು ಸದಸ್ಯರು ಶಾಸಕರ ಗಮನಕ್ಕೆ ತಂದರು.

ಎಲ್ಲ ಒಂದೆಡೆ ಸಿಗುವಂತೆ ಖಸಾಯಿಖಾನೆ ಸ್ಥಾಪಿಸಲು ಕ್ರಮ ವಹಿಸಲು ಯೋಜನೆ ರೂಪಿಸಲಾಗುವುದು. ಕೊಳಚೆ ನಿರ್ಮೂಲನೆ ಮಂಡಲಿ ನಿರ್ಮಿಸಿರುವ ಮನೆ ಇನ್ನೂ ಪೂರ್ಣಗೊಂಡಿಲ್ಲ, ಈಗಾಗಲೇ ಬಹುತೇಕ ಬಡವರಿಗೆ ಮನೆ ಹಂಚಿಕೆಯಾಗಿವೆ. ಆದರೂ, ಪೂರ್ಣಗೊಳ್ಳದ ಕಾರಣ ಬಡವರ ಬದುಕು ಡೋಲಾಯಮಾನವಾಗಿದೆ ಎಂದು ಹತ್ತಾರು ಪಲಾನುಭವಿಗಳು ಶಾಸಕರ ಗಮನಕ್ಕೆ ತಂದರು. ಶೀಘ್ರದಲ್ಲಿಯೇ ಮನೆಗಳನ್ನು ಪೂರ್ಣಗೊಳಿಸುವಂತೆ ಶಾಸಕರು ಮಂಡಳಿ ಅಧಿಕಾರಿ ಕುಮಾರ್‌ ಈಶ್ವರ್‌ಗೆ ತಾಕೀತು ಮಾಡಿದರು.

ಸಿಬ್ಬಂದಿಗಳ ಕೊರತೆಯಿದೆ: ಮುಖ್ಯಾಧಿಕಾರಿ ಕೃಷ್ಣಪ್ರಸಾದ್‌ ಮಾತನಾಡಿ, ಪುರಸಭೆಯಲ್ಲಿ ಎಂಜಿನಿಯರ್‌ ಹಾಗೂ ಸಿಬ್ಬಂದಿಗಳ ಕೊರತೆಯಿದೆ. ಹುದ್ದೆ ಭರ್ತಿಗೆ ಸರ್ಕಾರದಲ್ಲಿ ಚರ್ಚಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು. ಇದಕ್ಕೆ ಸಿಬ್ಬಂದಿಗಳಿಲ್ಲದಿದ್ದರೆ ಹೊರಗುತ್ತಿಗೆ ಆದಾರದ ಮೇಲೆ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಅವಕಾಶವಿದ್ದರೆ ಕ್ರಮ ಜರುಗಿಸಿ ಮೇಲಾಧಿಕಾರಿಗಳಿಗೆ ಶಿಪಾರಸು ಮಾಡಿದರೆ ಚರ್ಚಿಸುವುದಾಗಿ ಶಾಸಕರು ಪ್ರತಿಕ್ರಿಯಿಸಿದರು. ಪುರಸಭಾ ಸದಸ್ಯ ರಂಗಹನುಮಯ್ಯ, ಎಚ್‌. ಜೆ.ಪುರುಷೋತ್ತಮ್‌, ಶಿವಕುಮಾರ್‌,ರಿಯಾಜ್‌, ಭಾಗ್ಯಮ್ಮ ಹೇಮಲತಾ, ಮಮತಾ, ಶಿವರುದ್ರಮ್ಮ, ಅನಿಲ್‌ಕುಮಾರ್‌,ರೇಖಾ, ಎಂಜಿನಿಯರ್‌ ಪ್ರಶಾಂತ್‌ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.