Progress review meeting: ಪ್ರಗತಿ ಪರಿಶೀಲನಾ ಸಭೆಗೆ ಜಿಲ್ಲಾಧಿಕಾರಿ,ಎಸ್ಪಿ ಗೈರು: ಅಸಮಾಧಾನ
Team Udayavani, Oct 28, 2023, 2:32 PM IST
ರಾಮನಗರ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ರಾಷ್ಟ್ರೀಯ ಆಯೋಗ(ಎನ್ಸಿಎಸ್ಸಿ) ಸದಸ್ಯೆ ಡಾ. ಅಂಜುಬಾಲ ಅವರು ಕರೆದಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಗೆ ಜಿಲ್ಲಾಧಿಕಾರಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೈರಾಗಿದ್ದರಿಂದ ಕುಪಿತ ಗೊಂಡ ಡಾ.ಅಂಜುಬಾಲ ಸಭೆಯನ್ನು ರದ್ದುಪಡಿಸಿ ಹಿಂದಿರುಗಿದ ಘಟನೆ ಇಲ್ಲಿನ ಜಿಪಂ ಸಭಾಂಗಣದಲ್ಲಿ ನಡೆಯಿತು.
ರಾಜ್ಯ ಪ್ರವಾಸ ಕೈಗೊಂಡಿರುವ ಎನ್ಸಿಎಸ್ಸಿ ಸದಸ್ಯೆ ಡಾ.ಅಂಜುಬಾಲ ಅವರು ಗುರುವಾರ ಸಂಜೆ ಜಿಪಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಕರೆದಿದ್ದರು.ಸಭೆಗೆ ಜಿಪಂ ಸಿಇಒ ಹೊರತುಪಡಿಸಿ ಜಿಲ್ಲಾಧಿಕಾರಿ ಡಾ.ಅವಿನಾಶ್ಮೆನನ್ ರಾಜೇಂದ್ರನ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಗೈರಾಗಿದ್ದು, ಅಪರ ಜಿಲ್ಲಾಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಭೆಗೆ ಬಂದಿದ್ದರು. ಜಿಲ್ಲೆಯ ಮುಖ್ಯಸ್ಥರು ಗೈರು ಹಾಜರಾಗಿರುವುದನ್ನು ತಿಳಿಯುತ್ತಿದ್ದಂತೆ ಗರಂ ಆದ ಡಾ.ಅಂಜುಬಾಲ, ಸಮಿತಿಯ ಸಭೆ ಎಂದರೆ ಏನೆಂದುಕೊಂಡಿ ದ್ದೀರಾ? ಅವರನ್ನು ಸಭೆಗೆ ಕರೆಸಿ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಯಾಕೆ ಸಭೆಗೆ ಬಂದಿಲ್ಲ ಎಂದು ಸಭೆಯಲ್ಲಿದ್ದ ಜಿಪಂ ಸಿಇಒ ದಿಗ್ವಿಜಯ್ ಬೋಡ್ಚೆ ಅವರನ್ನು ತರಾಟೆಗೆ ತೆಗೆದುಕೊಂಡರು.
ಇಂತಹ ಬೇಜವಾಬ್ದಾರಿತನವನ್ನು ನಾವೆಲ್ಲೂ ನೋಡಿಲ್ಲ ಎಂದು ಕುರ್ಚಿಯಿಂದ ಎದ್ದು ಹೊರ ನಡೆದರು.
ಡಿಸಿ ವಿರುದ್ಧ ಗರಂ: ಎನ್ಸಿಎಸ್ಸಿ ಸದಸ್ಯರು ಗರಂ ಆಗಿರುವ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ಮತ್ತು ಎಸ್ಪಿ ಕಾರ್ತಿಕ್ರೆಡ್ಡಿ ಆಗಮಿಸಿ ಅವರನ್ನು ಸಮಾಧಾನ ಮಾಡಲು ಮುಂದಾದರಾದರೂ ಇವರ ಮಾತಿಗೆ ಶಾಂತರಾಗದ ಸದಸ್ಯೆ ಡಾ.ಅಂಜುಬಾಲ ನಿಮ್ಮಊರಿಗೆ ನಾನು ಬಂದಿದ್ದೇನೆ, ನನ್ನನ್ನು ನೀವು ಸ್ವಾಗತಿಸಬೇಕೋ, ಇಲ್ಲ ನಿಮ್ಮನ್ನು ನಾನು ಸ್ವಾಗತಿಸಬೇಕೋ ಎಂದು ತರಾಟೆಗೆ ತೆಗೆದುಕೊಂಡರು.
ಕೋರ್ಟ್ ವಿಚಾರಣೆ ಇದಿದ್ದರಿಂದ ಬರಲಾಗಲಿಲ್ಲ ಎಂದು ಜಿಲ್ಲಾಧಿಕಾರಿ ಸಮಜಾಯಿಷಿ ನೀಡಿ ದರಾದರೂ, ಇವರ ಮಾತಿನಿಂದ ಸಮಾಧಾನಗೊಳ್ಳದ ಡಾ.ಅಂಜುಬಾಲ ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಲೇ ಜಿಪಂ ಕಚೇರಿಯಿಂದ ಇಳಿದು ಹೊರಗೆ ಬಂದರು.
ದಲಿತ ಮುಖಂಡರ ಆಕ್ರೋಶ: ಸಭೆ ರದ್ದುಪಡಿಸಿ ಹೋಗುತ್ತಿದ್ದ ಡಾ. ಅಂಜುಬಾಲ ಅವರನ್ನು ಜಿಪಂ ಸಭಾಂಗಣದ ಹೊರಗೆ ಭೇಟಿ ಮಾಡಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ತಮಗೆ ಸಭೆಗೆ ಆಹ್ವಾನ ನೀಡಿಲ್ಲ, ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಹೆಚ್ಚಿನ ದೌರ್ಜನ್ಯವಾಗುತ್ತಿದೆ. ಪೊಲೀಸರು ಇದನ್ನು ನಿಯಂತ್ರಿಸುತ್ತಿಲ್ಲ. ಜಿಲ್ಲಾಡಳಿತ ದಲಿತರ ರಕ್ಷಣೆಗೆ ಮುಂದಾಗುತ್ತಿಲ್ಲ ಎಂದು ದೂರುಗಳ ಸುರಿಮಳೆ ಗರೆದರು. ಸಮಿತಿಯ ಸದಸ್ಯರಿಗೆ ತಮ್ಮ ವಿಸಿಟಿಂಗ್ ಕಾರ್ಡ್ ನೀಡಿ ಏನಾದರು ಸಮಸ್ಯೆಯಾದರೆ ನನ್ನನ್ನು ಸಂಪರ್ಕಿಸಿ ಎಂದು ಹೇಳಿ ಅಲ್ಲಿಂದ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ