ಅರಣ್ಯ ರಕ್ಷಣೆ ಇಲಾಖೆ ಕರ್ತವ್ಯ: ದೇವರಾಜ್‌


Team Udayavani, Feb 15, 2021, 4:02 PM IST

ಅರಣ್ಯ ರಕ್ಷಣೆ ಇಲಾಖೆ ಕರ್ತವ್ಯ: ದೇವರಾಜ್‌

ರಾಮನಗರ: ಅರಣ್ಯ ಬೆಳೆಸುವುದು, ಕಾಡು ಪ್ರಾಣಿ, ಅರಣ್ಯ ವನಗಳ ರಕ್ಷಣೆ ಮಾಡುವುದುಅರಣ್ಯ ಇಲಾಖೆ ಕರ್ತವ್ಯವಾಗಿದೆ ಎಂದು ರಾಮನಗರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ದೇವರಾಜ್‌ ತಿಳಿಸಿದರು.

ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಕಚೇರಿ ಯಲ್ಲಿ ರಾಮನಗರದಿಂದ ಕೋಲಾರ ವಿಭಾ ಗಕ್ಕೆ ವರ್ಗಾವಣೆಗೊಂಡ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ರಾಮಕೃಷ್ಣಪ್ಪ ಅವರಿಗೆ ವಲಯ ಅರಣ್ಯಾಧಿಕಾರಿಗಳು ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಅರಣ್ಯ ರಕ್ಷಣೆ ಜೊತೆಗೆ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದುವುದು ಮುಖ್ಯ. ಇದುಸಾಧ್ಯವಾಗಬೇ ಕಾದರೆ ಪರಸ್ಪರ ಅಧಿಕಾರಿಗಳಲ್ಲಿ ಸಿಬ್ಬಂದಿಗಳಲ್ಲಿ ಸೌಹಾರ್ಧತೆ ಇದ್ದಾಗ ಮಾತ್ರ ಸಾಧ್ಯ.ಈ ವಿಚಾರದಲ್ಲಿ ಎಂ.ರಾಮಕೃಷ್ಣಪ್ಪ ಜಿಲ್ಲೆಯಲ್ಲಿ ಕರ್ತವ್ಯ ವಹಿಸಿ ಕೊಂಡಾಗಿನಿಂದಲೂ ರೈತರು,ಸಾರ್ವಜನಿಕರು, ಅಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅವರ ಸೇವೆಗೆ ಶ್ರೇಯಸ್ಸು ಸಿಗಲಿ ಎಂದು ಶುಭ ಹಾರೈಸಿದರು.

ಚನ್ನಪಟ್ಟಣ ವಲಯ ಅರಣ್ಯಾಧಿಕಾರಿ ಮಹಮ್ಮದ್‌ ಮನ್ಸೂರ್‌ ಮಾತನಾಡಿ, ಎಂ.ರಾಮಕೃಷ್ಣಪ್ಪ ಅವರು ಜಿಲ್ಲೆಯ ರಾಮನಗರ-ಚನ್ನಪಟ್ಟಣ-ಮಾಗಡಿ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಉತ್ತಮ ಸೇವೆ ನೀಡಿದ್ದಾರೆ. ಕಿರಿಯ ಅಧಿಕಾರಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿದ್ದಾರೆ. ಅರಣ್ಯ ಸಂರಕ್ಷಣೆ ಧ್ಯೇಯದಿಂದ ಅನೇಕ ನೆಡುತೋಪು ಬೆಳವಣಿಗೆಗೆ ಹೆಚ್ಚು ಆದ್ಯತೆ ನೀಡಿದ್ದಾರೆ. ರೈತರೊಂದಿಗೆ ಉತ್ತಮ ಸ್ಪಂದನೆ, ಬಾಂಧವ್ಯ ಹೊಂದಿದ್ದರಿಂದ ಅರಣ್ಯ ಇಲಾಖೆಗೆ ಸಾರ್ವಜನಿಕರಿಂದ ಉತ್ತಮ ಸಹಕಾರ ಸಿಗುತ್ತಿದೆ ಎಂದು ತಿಳಿಸಿದರು.

ಕ್ಲಿಷ್ಟಕರ ಸನ್ನಿವೇಶ ನಿಭಾಯಿಸಿದ ಕೀರ್ತಿ: ಜಿಲ್ಲೆಯ ಮೂರು ವಲಯದಲ್ಲಿ ಚಿರತೆ, ಆನೆಗಳ ಉಪಟಳ ಹೆಚ್ಚಿಗಿದೆ. ಮಾಗಡಿ ವಲಯದಲ್ಲಿ ಚಿರತೆ ದಾಳಯಿಂದ ಕಳೆದ ವರ್ಷ ಇಬ್ಬರು ಪ್ರಾಣ ಕಳೆದು ಕೊಳ್ಳು ವಂತಾಗಿತ್ತು. ಇಡೀ ರಾಜ್ಯ ದಲ್ಲಿ ಈ ಘಟ ನೆ ಗಳು ಚರ್ಚೆಯಾಯಿತು. ಅಂತಹ ಕ್ಲಿಷ್ಟಕರ ಸನ್ನಿವೇಶವನ್ನು ಎಂ.ರಾ ಮ ಕೃ ಷ್ಣಪ್ಪ ಅವರು ಜಾಗರೂಕತೆಯಿಂದನಿರ್ವಹಿಸಿ, ವಲಯ ಅರಣ್ಯಾಧಿಕಾರಿಗಳಿಗೆ ಮಾರ್ಗದರ್ಶಕರಾಗಿ ಮೂರ್‍ನಾಲ್ಕು ದಿನಗಳಲ್ಲಿಯೇ ಚಿರತೆ ಸೆರೆ ಹಿಡಿಯು ವಲ್ಲಿ ಯಶಸ್ವಿಯಾದರು ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಎಂ. ರಾಮಕೃಷ್ಣಪ್ಪ, ರಾಮನಗರ ಜಿಲ್ಲಾ ಅರಣ್ಯ ಭಾಗದಲ್ಲಿನ ಮೂರುವರೆ ವರ್ಷದ ಕರ್ತವ್ಯ ತೃಪ್ತಿತಂದಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ, ಮೂರು ವಲಯದ ಅರಣ್ಯ ಅಧಿಕಾರಿಗಳು, ಸಿಬ್ಬಂದಿ ತಮಗೆ ಅಪಾರ ಸಹಕಾರ ನೀಡಿದ್ದಾರೆ. ಎಲ್ಲರನ್ನು ವಿಶ್ವಾ ಸಕ್ಕೆ ತೆಗೆದುಕೊಂಡು ಕರ್ತವ್ಯ ನಿಭಾಯಿಸಿದ್ದೇನೆ. ತಮ್ಮ ಸ್ಥಾನಕ್ಕೆ ಆಗಮಿಸಿರುವ ಸುರೇಂದ್ರ ಅವರಿಗೂ ತಮಗೆ ನೀಡುತ್ತಿದ್ದ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ರಾಮನಗರ ವಲಯ ಅರಣ್ಯಾಧಿಕಾರಿ ಎ.ಕಿರಣ್‌ಕುಮಾರ್‌, ಕನಕಪುರ ವಲಯ ಅರಣ್ಯಾಧಿಕಾರಿ ಎ.ಎಲ್‌.ಧಾಳೇಶ್‌, ಮಾಗಡಿ ವಲಯ ಅರಣ್ಯಾಧಿಕಾರಿ ಪುಷ್ಪಲತ, ಮೂರು ವಲಯಗಳ ಉಪ ವಲಯ ಅರಣ್ಯಾಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.