ಆರು ಮಂದಿ ಜೀತ ಕಾರ್ಮಿಕರ ರಕ್ಷಣೆ


Team Udayavani, Oct 5, 2019, 6:15 PM IST

rn-tdy-2

ರಾಮನಗರ: ರೇಷ್ಮೆ ನೂಲು ಬಿಚ್ಚಾಣಿಕೆ ಘಟಕದಲ್ಲಿ ಆರು ಮಂದಿ ಜೀತ ಕಾರ್ಮಿಕರನ್ನು ತಹಶೀಲ್ದಾರ್‌, ಕಾರ್ಮಿಕ ಇಲಾಖೆ ಅಧಿಕಾರಿಗಳು, ಪೊಲೀಸ್‌ ಇಲಾಖೆ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ.

ಇಂಟರ್‌ ನ್ಯಾಷನಲ್‌ ಜಸ್ಟಿಸ್‌ ಮಿಷನ್‌ (ಐಜೆಎಂ) ಒದಗಿಸಿದ ಮಾಹಿತಿ ಆಧರಿಸಿ, ನಗರದ ರೇಷ್ಮೆ ನೂಲುಬಿಚ್ಚಾಣಿಕೆ ಘಟಕವೊಂದರ ಮೇಲೆ ದಾಳಿ ನಡೆಸಿ ಜೀತ ಕಾರ್ಮಿಕರನ್ನು ರಕ್ಷಿಸಲಾಗಿದೆ. ನಾಲ್ವರು ಪುರುಷರು ಹಾಗೂ ಇಬ್ಬರು ಗರ್ಭಿಣಿಯರು, ನಾಲ್ಕು ವರ್ಷದ ಮಗುವನ್ನು ಅಧಿಕಾರಿಗಳು ರಕ್ಷಿಸಿದ್ದಾರೆ. ಇವರೆ ಲ್ಲ 50 ಸಾವಿರ ದಿಂದ 1.80 ಲಕ್ಷ ರೂಪಾಯಿ ಮುಂಗಡ ಪಡೆದುಕೊಂಡಿದ್ದರು. ಈ ಕಾರ್ಮಿಕರ ಪೈಕಿ ಕೆಲವರು 8 ವರ್ಷಗಳಿಂದ ಹಾಗೂ ಕೆಲ ವರು 8 ತಿಂಗ ಳಿಂದ ರೇಷ್ಮೆ ಘಟಕದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾರ್ಮಿಕರಿಗೆ ಅರ್ಧ ದಿನ ಮಾತ್ರ ರಜೆ: ಬೆಳಗ್ಗೆ 7.30ರಿಂದ ಸಂಜೆ 4 ಗಂಟೆವ ರೆಗೆ ದುಡಿ ಸಿಕೊಳ್ಳುತ್ತಿದ್ದ ಮಾಲೀಕರು, ಎರಡು ವಾರಗಳಲ್ಲಿ ಒಂದು ಶುಕ್ರವಾರದಂದು ಮಾತ್ರ ಅರ್ಧ ದಿನ ರಜೆ ನೀಡುತ್ತಿದ್ದರು. ದಿನ ವೊಂದಕ್ಕೆ ಪುರುಷ ಕಾರ್ಮಿಕರಿಗೆ 250 ರೂ. ಹಾಗೂ ಮಹಿಳಾ ಕಾರ್ಮಿಕರಿಗೆ 220ರೂಪಾಯಿ ಕೂಲಿ ಕೊಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಕರ್ನಾಟಕ ರಾಜ್ಯ ಸರ್ಕಾರದ ಕನಿಷ್ಠ ವೇತನ ಕಾಯ್ದೆಯಡಿ ರೇಷ್ಮೆ ಕಾರ್ಮಿಕರಿಗೆ ದಿನವೊಂದರಲ್ಲಿ 8ಗಂಟೆಗಳ ಕಾಲನಿರ್ವಹಿಸುವ ಕೆಲಸಕ್ಕೆ ನಿಗದಿ ಪಡಿಸಿರುವ ವೇತನ 314.49 ರೂ, ಈ ಘಟಕದಲ್ಲಿ ಕೊಡುತ್ತಿದ್ದ ವೇತನ ಇದಕ್ಕಿಂತ ಕಡಿಮೆಯಾಗಿದೆ. ಜೀತ ಕಾರ್ಮಿಕ ಪದ್ಧತಿ (ನಿರ್ಮೂಲನೆ) ಕಾಯ್ದೆ 1976ರ ಪ್ರಕಾರ, ಮಾಲೀಕರು ಕಾರ್ಮಿಕ ಅಥವಾ ಯಾವುದೇ ವ್ಯಕ್ತಿಗೆ ಸಾಲ ನೀಡಿ ಅಥವಾ ಮುಂಗಡ ಹಣದಂತಹ ಹಂಗು/ಋಣ ಹಿಂದಕ್ಕೆ ಪಡೆಯುವ ಸಲುವಾಗಿ ಕನಿಷ್ಠ ವೇತನಕ್ಕಿಂತ ಕಡಿಮೆ ಹಣ ನೀಡಿ ಅವರಿಂದ ಕೆಲಸ ಮಾಡಿಸಿಕೊಳ್ಳುವುದು ಕಾನೂನು ಬಾಹಿರ. ಸದರಿ ಘಟಕದ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ಕಾರ್ಮಿಕರಿಗೆ ವೈದ್ಯಕೀಯತಪಾಸಣೆ: ಸಂತ್ರಸ್ತ ಕಾರ್ಮಿಕರ ವೈದ್ಯಕೀಯ ತಪಾಸಣೆ ನಡೆಸಿದ ನಂತರ ರಾಮನಗರದ ಸಮಾಜ ಕಲ್ಯಾಣ ಇಲಾಖೆ ಮತ್ತು ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ವಸತಿ ಕಲ್ಪಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆಸಿದ ವಿಚಾರಣೆಯನ್ನು ಆಧರಿಸಿ ತಹಶೀಲ್ದಾರ್‌ ಅವರು ಸಲ್ಲಿಸುವ ವರದಿಯ ಪ್ರಕಾರ ಉಪವಿಭಾಗಾಧಿಕಾರಿಯವರು ಕಾರ್ಮಿಕರಿಗೆ ಬಿಡುಗಡೆ ಪ್ರಮಾಣ ಪತ್ರಗಳನ್ನು ವಿತರಿಸಿ, ಆರಂಭಿಕ ಪುನರ್ವಸತಿ ಕಲ್ಪಿಸಲಿದ್ದಾರೆ.

ಟಾಪ್ ನ್ಯೂಸ್

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುವೆ: ಸಿ.ಪಿ ಯೋಗೇಶ್ವರ್

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುತ್ತೇನೆ: ಸಿ.ಪಿ ಯೋಗೇಶ್ವರ್

10

Magadi: ಅಂತರ್ಜಲ ಕುಸಿತ; ಒಣಗುತ್ತಿವೆ ಬೆಳೆಗಳು

9

ಬೊಂಬೆನಗರಿಯಲ್ಲಿ ಕಾಮನಹಬ್ಬದ ರಂಗು!

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

ಈ ಬಾರಿಯ ಚುನಾವಣೆ ಧರ್ಮಯುದ್ಧ: ಬಿಜೆಪಿ ಅಭ್ಯರ್ಥಿ ಡಾ| ಸಿ.ಎನ್‌.ಮಂಜುನಾಥ್‌

ಈ ಬಾರಿಯ ಚುನಾವಣೆ ಧರ್ಮಯುದ್ಧ: ಬಿಜೆಪಿ ಅಭ್ಯರ್ಥಿ ಡಾ| ಸಿ.ಎನ್‌.ಮಂಜುನಾಥ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.