ಬೆಂಗಳೂರಿಗೆ ತೆರಳಲು ಬಸ್ ಇಲ್ಲದೆ ಪರದಾಟ: ಡಿಸಿಎಂ ಸ್ವಕ್ಷೇತ್ರದಲ್ಲಿ ಬಸ್ ತಡೆದು ಪ್ರತಿಭಟನೆ
Team Udayavani, Aug 2, 2023, 11:20 AM IST
ರಾಮನಗರ: ಕನಕಪುರದಿಂದ ಬೆಂಗಳೂರಿಗೆ ತೆರಳಲು ಬಸ್ ಇಲ್ಲದೆ ವಿದ್ಯಾರ್ಥಿಗಳು, ಊರಿನ ಜನರು ಕೋಪಗೊಂಡು ತಡವಾಗಿ ಬಂದ ಬಸ್ಸನ್ನೇ ತಡೆದು ಪ್ರತಿಭಟನೆ ನಡೆಸಿದ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಉಪ ಮುಖ್ಯಮಂತ್ರಿಗಳ ಸ್ವ ಕ್ಷೇತ್ರದಲ್ಲೇ ಈ ಘಟನೆ ನಡೆದಿದ್ದು ಬೆಳಗಿನ ಹೊತ್ತು ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಕೆಲಸಕ್ಕೆ ಬೆಂಗಳೂರಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚು ಇರುತ್ತದೆ ಆದರೆ ಅದಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲ, ಇದ್ದರೂ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂದು ಜನ ಆಕ್ರೋಶಗೊಂಡಿದ್ದಾರೆ.
ಈ ವೇಳೆ ತಡವಾಗಿ ಬಂದ ಬಸ್ಸನ್ನು ತಡೆಗಟ್ಟಿ ಕೆಲಹೊತ್ತು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನೆಯನ್ನು ತಡೆಯುವ ಪ್ರಯತ್ನ ಮಾಡಿದರು ಈ ವೇಳೆ ಪ್ರತಿಭಟನಾ ನಿರತರು ಪೊಲೀಸರನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಳಿಗ್ಗೆ ಏಳು ಗಂಟೆಯಿಂದ ಬೆಂಗಳೂರಿಗೆ ಹೋಗಲು ಬಸ್ಸು ಕಾದು ಕಾದು ಸುಸ್ತಾದ ಪ್ರಯಾಣಿಕರು, ತಡವಾಗಿ ಬಸ್ ಬರುತ್ತಲೇ ಬಸ್ ತಡೆದು ಪ್ರತಿಭಟನೆ ನಡೆಸಿ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದಿದ್ದಾರೆ. ಅಲ್ಲದೆ ಸಮಯಕ್ಕೆ ಸರಿಯಾಗಿ ಬಸ್ಸು ಬಿಡುವಂತೆ ಅಧಿಕಾರಿಗಳಿಗೆ ಮನವಿಯನ್ನು ಮಾಡಿದ್ದಾರೆ.
ಇದನ್ನೂ ಓದಿ: Job Opportunity: ಭಾರತೀಯ ಭೂಸೇನೆ, ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಹಲವು ಉದ್ಯೋಗಾವಕಾಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ