ಚುನಾವಣಾ ವ್ಯವಸ್ಥೆ ಬದಲಾವಣೆಗೆ ಒತ್ತಾಯಿಸಿ ಪ್ರತಿಭಟನೆ

ಆಮಿಷಕ್ಕೊಳಗಾಗುವ ಮತದಾರನಿಗೂ ಜೈಲು ಶಿಕ್ಷೆ ವಿಧಿಸಿ ಪ್ರಾಮಾಣಿಕ ಲೋಕಸಭಾ ಚುನಾವಣೆ ನಡೆಸಲು ಆಗ್ರಹ

Team Udayavani, Apr 24, 2019, 2:32 PM IST

ramanagar-tdy-5

ರಾಮನಗರ: ಚುನಾವಣಾ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆಗೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ನಗರದಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದರು. ಈಗಾಗಲೇ ನಡೆದಿರುವ ಲೋಕಸಭೆ ಚುನವಣೆಯನ್ನು ರುದ್ದುಪಡಿಸಿ ಪ್ರಾಮಾಣಿಕ ಚುನಾವಣೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನಗರದ ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಚುನಾವಣಾ ಆಯೋಗದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸೇರಿದಂತೆ ಇಡೀ ದೇಶದಲ್ಲಿ ಚುನಾವಣೆಗಳು ಪ್ರಾಮಾಣಿಕವಾಗಿ ನಡೆದಿಲ್ಲ. ಚುನಾವಣಾ ವೆಚ್ಚ ಎಂದು ಪ್ರತಿ ಅಭ್ಯರ್ಥಿಗೆ 70 ಲಕ್ಷ ರೂ. ನಿಗದಿ ಮಾಡಿರುವ ಕ್ರಮವೇ ಸರಿಯಲ್ಲ. 70 ಲಕ್ಷ ರೂ. ವೆಚ್ಚ ಜನಸಾಮಾನ್ಯರು ವ್ಯಯಿಸಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದರು. 25 ಸಾವಿರ ರೂ. ಠೇವಣಿಯನ್ನು ಇಡಲು ಸಾಧ್ಯವಿಲ್ಲ ಎಂದರು.

ದೇವರ ಮುಂದೆ ಪ್ರಮಾಣ ಮಾಡಲಿ: ಚುನಾವಣೆಯಲ್ಲಿ ಸ್ಪರ್ಧಿಸಿರುವ ಶ್ರೀಮಂತ ಅಭ್ಯರ್ಥಿಗಳು ತಲಾ 50 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಅನೇಕರು ದೇವಾಲಯಗಳನ್ನು ಸುತ್ತಿದ್ದಾರೆ. ಅವರು ಕೇವಲ 70 ಲಕ್ಷ ರೂ. ಮಾತ್ರ ವೆಚ್ಚ ಮಾಡಿರುವುದಾಗಿ ಅವರು ನಂಬಿರುವ ದೇವರ ಮುಂದೆಯೇ ಪ್ರಮಾಣ ಮಾಡಲಿ ಎಂದು ಸವಾಲು ಎಸೆದರು. 28 ಕ್ಷೇತ್ರಗಳಲ್ಲಿ ಕನಿಷ್ಠ 4 ಸಾವಿರ ಕೋಟಿ ರೂ. ವೆಚ್ಚವಾಗಿದೆ ಎಂದು ಗಮನ ಸೆಳೆದರು.

ಮತದಾನದ ದಿನ ಮತಗಟ್ಟೆಗಳ ಬಳಿ ಪಕ್ಷಗಳ, ಅಭ್ಯರ್ಥಿಗಳ ಟೇಬಲ್ಗಳು ಬೇಕಾಗಿಲ್ಲ. ಯಾವ ಚಿಹ್ನೆಯೂ ಕಾಣಬಾರದು. ಮನೆ ಮನೆ ಪ್ರಚಾರವನ್ನು ತಡೆಯಬೇಕು. ಮತದಾರರ ಚೀಟಿಯನ್ನು ಕಡ್ಡಾಯವಾಗಿ ಆಯೋಗವೇ ವಿತರಿಸಬೇಕು. ಕಡ್ಡಾಯ ಮತದಾನ ಜಾರಿಯಾಗಬೇಕು ಎಂದು ಒತ್ತಾಯಿಸಿದರು.

ಜನ ಸಾಮಾನ್ಯರು ಸ್ಪರ್ಧಿಸುವಂತಾಗಲಿ: ಚುನಾವಣೆಯಲ್ಲಿ ಜನಸಾಮಾನ್ಯರು ಸ್ಪರ್ಧಿಸುವಂತಾಗಬೇಕು, 25 ಸಾವಿರ ಠೇವಣಿ ಶ್ರೀಮಂತರು ಮಾತ್ರ ಕೊಡಲು ಸಾಧ್ಯ ಎಂಬುದನ್ನು ಆಯೋಗ ಮನಗಾಣಬೇಕು ಎಂದರು.

ಮತದಾನದ ಸಮಯ ಕನಿಷ್ಟ 2 ದಿನಗಳಿಗೆ ವಿಸ್ತರಣೆ ಆಗಬೇಕು. ಪ್ರಮಾಣಿಕವಾಗಿ ಮತ್ತೂಮ್ಮೆ ಚುನಾವಣೆ ನಡೆಯಬೇಕು. ಚುನಾವಣೆ ವ್ಯವಸ್ಥೆ ಸಮಗ್ರವಾಗಿ ಬದಲಾಗಬೇಕು. ಪಕ್ಷಾಂತರಿಗಳನ್ನು ಜೈಲಿಗೆ ಕಳುಹಿಸಬೇಕು. ಜತೆಗೆ ಮತ್ತೂಮ್ಮೆ ಚುನಾವಣೆಗೆ ಸ್ಪರ್ಧಿಸದಂತೆ ನೀತಿ ಜಾರಿಗೊಳ್ಳಬೇಕು. ಆಮಿಷಕ್ಕೆ ಒಳಗಾಗುವ ಮತದಾರನಿಗೂ ಜೈಲು ಶಿಕ್ಷೆಯಾಗಬೇಕುರ ಎಂದು ವಾಟಾಳ್‌ ನಾಗರಾಜ್‌ ಒತ್ತಾಯಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.