ರಸ್ತೆ ಬದಿ ವ್ಯಾಪಾರದ ಅನುಮತಿಗೆ ಆಗ್ರಹಿಸಿ ಪ್ರತಿಭಟನೆ

ರಸ್ತೆ ಬದಿ ವ್ಯಾಪಾರಿ ತೆರವಿನಿಂದ ಬದುಕು ಅತಂತ್ರ ಮುಂದಿನ ದಿನಗಳಲ್ಲಿ ನ್ಯಾಯಕ್ಕಾಗಿ ಅನಿರ್ದಿಷ್ಟ ಪ್ರತಿಭಟನೆ

Team Udayavani, May 12, 2019, 3:27 PM IST

ramanagar-tdy-3..

ಚನ್ನಪಟ್ಟಣದಲ್ಲಿ ರಸ್ತೆ ಬದಿ ವ್ಯಾಪಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿ ರಸ್ತೆ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.

ಚನ್ನಪಟ್ಟಣ: ರಸ್ತೆ ಬದಿ ವ್ಯಾಪಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿ ರಸ್ತೆಬದಿ ವ್ಯಾಪಾರಿಗಳು ಎಂ.ಜಿ.ರಸ್ತೆ ಜಗದೀಶ್‌ಬುದ್ಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕಳೆದ 15-20 ವರ್ಷಗಳಿಂದ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದು, ಅದನ್ನೆ ನಂಬಿ ಬದುಕುತ್ತಿದ್ದೇವೆ. ರಸ್ತೆ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿದ್ದರಿಂದ ನಮ್ಮ ಬದುಕು ಅತಂತ್ರವಾಗಿದೆ. ಅಲ್ಲದೆ, ಹಣ್ಣು, ತರಕಾರಿ, ಸೊಪ್ಪು ಮಾರಾಟ ಮಾಡುವ ತಳ್ಳುಗಾಡಿಗಳ ವ್ಯಾಪಾರಿಗಳಿಂದ ತೂಕದ ತಕ್ಕಡಿ, ಬಟ್ಟಗಳನ್ನು ಕಿತ್ತುಕೊಂಡು ದೌರ್ಜನ್ಯ ಎಸಗುತ್ತಿದ್ದಾರೆ. ನಾವೂ ಸಂಪೂರ್ಣವಾಗಿ ಸಂಕಷ್ಟದಲ್ಲಿ ಸಿಲುಕಿದ್ದು, ಹೇಳುವವರು ಕೇಳುವವರು ಇಲ್ಲದಂತಾಗಿದೆ ಎಂದು ಪ್ರತಿಭಟನಾಕಾರರು ತಮ್ಮ ಅಳಲನ್ನು ತೋಡಿಕೊಂಡರು.

ವ್ಯಾಪಾರಿಗಳು ಕಡುಬಡವರು: ರಸ್ತೆಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಾಗೇಶ್‌, ಉಪಾಧ್ಯಕ್ಷ ಕೃಷ್ಣೇಗೌಡ ಮಾತನಾಡಿ, ರಸ್ತೆ ಬದಿ ವ್ಯಾಪಾರಿಗಳು ಕಡುಬಡವರು. ಅದನ್ನೇ ನಂಬಿ ಜೀವನ ಸಾಗಿಸುತ್ತಿದ್ದಾರೆ. ಅವರು ಸಾಲ ಮಾಡಿಕೊಂಡು ಮಾರಾಟ ಮಾಡಿಕೊಂಡು ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ನಗರಸಭೆ ಅಧಿಕಾರಿಗಳು ಪೊಲೀಸರ ಸಹಕಾರ ಪಡೆದುಕೊಂಡು ಸ್ವಚ್ಛತೆ ಹೆಸರಿನಲ್ಲಿ ರಸ್ತೆ ಬದಿ ವ್ಯಾಪಾರ ಮತ್ತು ತಳ್ಳುಗಾಡಿ ವ್ಯಾಪಾರಿಗಳನ್ನು ತೆರವುಗೊಳಿಸಿ, ಮಾರಾಟ ವಸ್ತುಗಳನ್ನು ನಾಶಪಡಿಸಿ ಕಿರಿಕುಳ ನೀಡುತ್ತಿದ್ದಾರೆ ಎಂದು ದೂರಿದರು.

ಸಿಎಂ ಮಾತಿಗೆ ಗೌರವವಿಲ್ಲ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು 250ಕ್ಕೂ ಹೆಚ್ಚು ರಸ್ತೆಬದಿ ವ್ಯಾಪಾರಿಗಳ ನಿಯೋಗ ಬೆಂಗಳೂರಿನಲ್ಲಿ ಭೇಟಿ ಮಾಡಿ, ನಮ್ಮ ಕಷ್ಟ, ಸಮಸ್ಯೆಯನ್ನು ತೋಡಿಕೊಂಡಾಗ, ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಹೇಳಿ ಕಳುಹಿಸಿದ್ದಾರೆ. ಆದರೆ, ನಗರಸಭೆ ಅಧಿಕಾರಿಗಳು ಮುಖ್ಯಮಂತ್ರಿಗಳ ಮಾತಿಗೆ ಗೌರವ ಕೊಡದೇ ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ. ಇದನ್ನೇ ನಂಬಿ ಬದುಕುತ್ತಿರುವ ನಾವುಗಳು, ದಿನದ ಸಾಲ, ವಾರದ ಕಂತಿನ ಸಾವಿರಾರು ರೂ. ಸಾಲ ಪಡೆದು ಸಾಲವನ್ನು ತೀರಿಸಲಾಗದೆ, ವ್ಯಾಪಾರವಿಲ್ಲದೇ ಕಂಗಲಾಗಿದ್ದೇವೆ. ನಮ್ಮ ಕುಂಟುಂಬ ಆಶ್ರಯವಿಲ್ಲದೇ ಬೀದಿಗೆ ಬಿದ್ದಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಯೋಜನೆ ಅನುಷ್ಠಾನಗೊಳಿಸಿಲ್ಲ: ರಾಜ್ಯ ಸರ್ಕಾರ ರಸ್ತೆ ಬದಿ ವ್ಯಾಪಾರಿಗಳ ಬಗ್ಗೆ ಅನುಕಂಪ ತೋರಿ ಜೀವನೋಪಾಯಕ್ಕೆ 10 ಸಾವಿರ ರೂ.ಸಾಲ ಸೌಲಭ್ಯ ನೀಡುತ್ತಿದೆ. ಆದರೆ, ನಗರಸಭೆ ರಸ್ತೆ ಬದಿ ವ್ಯಾಪಾರಿ ಗಳನ್ನು ಗುರುತಿಸಿ ಚೀಟಿ ನೀಡಿದ್ದು, ಇಲ್ಲಿನ ಅಧಿಕಾ ರಿಗಳು ಯೋಜನೆಯನ್ನು ಅನುಷ್ಠಾನಗೊಳಿ ಸುತ್ತಿಲ್ಲ. ಸಿಎಂ ರಸ್ತೆಬದಿ ವ್ಯಾಪಾರಿಗಳ ಮೇಲೆ ಕರುಣೆ ತೋರಿ ರಸ್ತೆ ಬದಿ ವ್ಯಾಪಾರಕ್ಕೆ ಅನುವು ಕೊಡಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ನ್ಯಾಯಕ್ಕಾಗಿ ನಗರಸಭೆ ಕಚೇರಿ ಎದುರು ಅನಿರ್ದಿಷ್ಟ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ರಸ್ತೆಬದಿ ವ್ಯಾಪಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.