ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಪದವಿ ಪೂರೈಸಿದವರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ • ನೇಮಕಾತಿ ನಿಯಮ ಬದಲಾಯಿಸಿ

Team Udayavani, Jul 10, 2019, 1:27 PM IST

rn-tdy-1..

ರಾಮನಗರದಲ್ಲಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷಕರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ರಾಮನಗರ: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವಿ ಪೂರೈಸಿರುವ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ಬದಲಾಯಿಸುವಂತೆ ಮತ್ತು ಪದವೀಧರ ಶಾಲಾ ಶಿಕ್ಷಕರ ವೇತನ ಶ್ರೇಣಿಯನ್ನು ನಿಗದಿಪಡಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ನೂರಾರು ಶಿಕ್ಷಕರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕಿರ್ಣ (ಡೀಸಿ ಕಚೇರಿ) ಮುಂಭಾಗ ಜಮಾಯಿಸಿದ ಶಿಕ್ಷಕರು, ತಮ್ಮ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಸರ್ಕಾರ ತಮ್ಮ ಬೇಡಿಕೆ ಪರಿಗಣಿಸಿಲ್ಲ: 2017ರಲ್ಲಿ ರಾಜ್ಯ ಸರ್ಕಾರವು ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ತಿದ್ದುಪಡಿ ತಂದು 2014ಕ್ಕೂ ಮುನ್ನ ನೇಮಕಗೊಂಡಿರುವ ಹಾಲಿ ಸೇವಾನಿರತ ಪದವೀಧರ ಶಿಕ್ಷಕರನ್ನು 1ರಿಂದ 5ನೇ ತರಗತಿಗಳಿಗೆ ಪದನಿಯೋಗಗೊಳಿಸಿರುವುದನ್ನು ಈ ಮೊದಲೆ ಖಂಡಿಸಿ, ಶಿಕ್ಷಕರ ಅಸಮಾಧಾನವನ್ನು ಸರ್ಕಾರದ ಗಮನಕ್ಕೆ ತರಲಾಗಿತ್ತು. ಬೋಧನೆಯಲ್ಲಿ 10, 15 ವರ್ಷಗಳ ಅನುಭವ ಇರುವ ಸೇವಾನಿರತ ಪದವೀಧರ ಶಿಕ್ಷಕರನ್ನು ಪದೋನ್ನತಿಗೆ ಪರಿಗಣಿಸಿಲ್ಲ ಎಂಬ ಅಸಮಾಧಾನವನ್ನು ಕೂಡ ತಿಳಿಸಲಾಗಿತ್ತು. ಹಾಲಿ ಸೇವಾನಿರತ ಪದವೀಧರ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಮನವಿ ಮಾಡಲಾಗಿತ್ತು. ಆದರೆ, ಸರ್ಕಾರ ತಮ್ಮ ಬೇಡಿಕೆಯನ್ನು ಪರಿಗಣಿಸಿಲ್ಲ, ಹೀಗಾಗಿ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳ ಶಿಕ್ಷಕರು ಪ್ರತಿಭಟನೆ ನಡೆಸುತ್ತಿರುವುದಾಗಿ ಪ್ರತಿಭಟನಾಕಾರರು ತಿಳಿಸಿದರು.

ಮೂರು ವರ್ಷದಿಂದ ಶಿಕ್ಷಕರ ವರ್ಗಾವಣೆಯಾಗಿಲ್ಲ: ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಆಗಿಲ್ಲ. ಈಗ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದೆ. ಈ ಪ್ರಕ್ರಿಯೆ ಮುಗಿದ ತಕ್ಷಣ ಅಕ್ಟೋಬರ್‌ ತಿಂಗಳಲ್ಲಿ ಮತ್ತೂಮ್ಮೆ ಕೇವಲ ಕೋರಿಕೆ ವರ್ಗಾವಣೆ ನಡೆಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.

ನೂತನ ಪಿಂಚಣಿ ಯೋಜನೆ ರದ್ದು ಮಾಡಿ: ನೂತನ ಪಿಂಚಣಿ ಯೋಜನೆಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಹಳೆ ಪಿಂಚಣಿ ಪದ್ಧತಿಯನ್ನೇ ಮತ್ತೆ ಜಾರಿ ಮಾಡಬೇಕು. ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಲ್ಲಿರುವ ನ್ಯೂನತೆ ಸರಿಪಡಿಸಬೇಕು. ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು. ಶಿಕ್ಷಕ-ವಿದ್ಯಾರ್ಥಿ ಅನುಪಾತ ಗುರುತಿಸುವಾಗ, ಮುಖ್ಯಶಿಕ್ಷಕರು, ದೈಹಿಕ ಶಿಕ್ಷಕರುಗಳನ್ನು ಹೊರತುಪಡಿಸಿ, ಹೆಚ್ಚುವರಿ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ಶಿಕ್ಷಕರು ಸರ್ಕಾರವನ್ನು ಆಗ್ರಹಿಸಿದರು.

6ನೇ ವೇತನ ಆಯೋಗದ ಅಂತಿಮ ವರದಿಯ ಶಿಪಾರಸ್ಸಿನ ಪ್ರಕಾರ ಮುಖ್ಯ ಗುರುಗಳಿಗೆ 10, 15, 20, 25, 30 ವರ್ಷದ ಬಡ್ತಿಯನ್ನು ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪನಿರ್ದೇಶಕರ ಹುದ್ದೆಯವರೆಗೂ ಬಡ್ತಿಯನ್ನು ನೀಡಬೇಕು ಎಂದು ಆಗ್ರಹಿಸಿದರು.

ಎಲ್ಲಾ ಸೇವಾ ಸೌಲಭ್ಯ ನೀಡಿ: ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಆದ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಿ ಆರ್ಥಿಕ ಹಾಗೂ ಇನ್ನಿತರ ಎಲ್ಲಾ ಸೇವಾ ಸೌಲಭ್ಯ ನೀಡಬೇಕು ಎಂಬ ಒತ್ತಾಯವನ್ನು ಸರ್ಕಾರ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಮುಖ್ಯಮಂತ್ರಿಗಳಿಗೆ ಮಾಡಿಕೊಂಡ ಮನವಿಯನ್ನು ಶಿಕ್ಷಕರು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ಪ್ರತಿಭಟನಾ ಮೆರವಣಿಗೆ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಕರು ನಗರದ ಗುರುಭವನದಿಂದ ಡೀಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ನೂರಾರು ಶಿಕ್ಷಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.