ಮೂಲ ಸೌಕರ್ಯಕ್ಕೆ ಆಗ್ರಹಿಸಿ ಗ್ರಾಪಂ ಎದುರು ಪ್ರತಿಭಟನೆ


Team Udayavani, Feb 22, 2021, 12:40 PM IST

ಮೂಲ ಸೌಕರ್ಯಕ್ಕೆ ಆಗ್ರಹಿಸಿ ಗ್ರಾಪಂ ಎದುರು ಪ್ರತಿಭಟನೆ

ಕನಕಪುರ: ಮೂಲ ಸೌಕರ್ಯ ನೀಡದೇ ಗ್ರಾಪಂ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಟಿ.ಹೊಸಹಳ್ಳಿಯ ಮಾದಿಗ ಸಮುದಾಯದ ಜನರು ಗ್ರಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ತಾಲೂಕಿನ ಟಿ.ಹೊಸಹಳ್ಳಿ ಗ್ರಾಪಂ ಕಚೇರಿ ಮುಂದೆ ಜಾಮಾವಣೆಗೊಂಡ ಗ್ರಾಮದ ಮಹಿಳೆಯರು, ಮಕ್ಕಳು, ಯುವಕರು ಗ್ರಾಪಂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ನೀರಿನ ಹಾಹಾಕಾರ ಉಂಟಾಗಿದೆ. ಮೇಲ್ಜಾತಿ ಸಮುದಾಯದ ಪ್ರತಿ ಮನೆಗಳಿಗೂ, ಕೊಳಾಯಿ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ. ಆದರೆ, ದಲಿತರಿಗೆ ಮಾತ್ರ ಕೊಳಾಯಿ ಸಂಪರ್ಕ ಕಲ್ಪಿಸಿಲ್ಲ. ಕುಡಿಯುವ ನೀರಿನ ಬವಣೆ ನೀಗಿಸಲು ನಿರ್ಮಿಸಿದ್ದ ಓವರ್‌ ಹೆಡ್‌ ಟ್ಯಾಂಕ್‌ನಿಂದ ಕಳೆದ 15 ವರ್ಷದಿಂದ ಹನಿ ನೀರನ್ನು ಕೊಡದೆ, ಇತರೆ ಸಮುದಾಯಗಳಿಗೆ ಮಾತ್ರ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಸಮಸ್ಯೆ ಹೇಳಿಕೊಳ್ಳಲು ನಾಯಕರಿಲ್ಲ: ಆದಿ ಜಾಂಬವ ಸಂಘಟನೆ ತಾಲೂಕು ಅಧ್ಯಕ್ಷ ವರದರಾಜು ಮಾತನಾಡಿ, ದಲಿತರು ಮನುಷ್ಯರೇ ಎಂಬ ಭಾವನೆ ಯಾರಲ್ಲೂ ಇಲ್ಲ. ಊರ ಹಬ್ಬ ಆಚರಿಸುವಾಗ ಗ್ರಾಮದ ಮುಖ್ಯರಸ್ತೆಯಲ್ಲಿ ಮೆರ ವಣಿಗೆ ಮಾಡಲು ಬಿಡುವುದಿಲ್ಲ. ಕಾಲೋನಿಯಲ್ಲಿ ಯಾರಾದರೂ ಮೃತಪಟ್ಟರೇ, ಶವ ಸಂಸ್ಕಾರ ಮಾಡುವುದು ಒಂದು ಸವಾಲಿನ ಕೆಲಸ. ನಮ್ಮ ಸಮಸ್ಯೆ ಹೇಳಿಕೊಳ್ಳಲು ರಾಜಕೀಯ ನಾಯಕರಿಲ್ಲ. ಗ್ರಾಮದಲ್ಲಿ 80 ಮಾದಿಗ ಕುಂಟುಂಬಗಳಿದ್ದು, 15 ವರ್ಷದಿಂದ ಗ್ರಾಪಂ ಸದಸ್ಯರಾಗಲು ಮೀಸಲಾತಿಯೇ ಸಿಕ್ಕಿಲ್ಲ ಎಂದು ಬೇಸರಿಸಿದರು.

ಪಿಡಿಒ ವರ್ಗಾವಣೆಗೆ ಆಗ್ರಹ: ವಸತಿ ವ್ಯವಸ್ಥೆಗಾಗಿ ಸರ್ಕಾರದಿಂದ ಆರು ಎಕರೆ ಭೂಮಿ ಮಂಜೂರಾಗಿದೆ. ಆ ಜಾಗದಲ್ಲಿ ಮಾದಿಗರಿಗೆ ನಿವೇಶನ ಸಿಗಬಾರದು ಎಂದು ದೇಗುಲ ನಿರ್ಮಿಸುವ ಹುನ್ನಾರ ನಡೆದಿದ್ದು,ಇದಕ್ಕೆಲ್ಲ ಪಿಡಿಒ ಸಹಕಾರ ನೀಡುತ್ತಿದ್ದಾರೆ. ಸರ್ಕಾರಿಅಧಿಕಾರಿಯಾಗಿ ಒಂದು ಸಮುದಾಯದ ಪರವಾಗಿ ನಿಲ್ಲುವುದು ಎಷ್ಟು ಸರಿ. ಇಂತಹ ಅಧಿಕಾರಿಗಳಿಂದನಮಗೆ ಎಂದೂ ನ್ಯಾಯ ಸಿಗುವದಿಲ್ಲ. ಇವರನ್ನುಶೀಘ್ರ ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ, ಜಿಲ್ಲಾಕೇಂದ್ರದ ಎದುರು ತಮಟೆ ಚಳುವಳಿನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಅಂಬೇಡ್ಕರ ಯುವಕ ಸಂಘದ ಅಧ್ಯಕ್ಷ ಪ್ರದೀಪ್‌, ಮಂಜುನಾಥ್‌, ಮಹದೇಶ್‌, ಗಿರೀಶ್‌, ಮುತ್ತುರಾಜು, ವೆಂಕಟೇಶ್‌,ಶ್ರೀನಿವಾಸ್‌, ಕಾಂತು, ಹನುಮಂತು, ಮಹಲಿಂಗಯ್ಯ, ಗಂಗಮಾಳಮ್ಮ, ಭಾಗ್ಯಮ್ಮ, ಗೌರಮ್ಮ, ಶಿವರತ್ಮಮ್ಮ, ತುಳಸಮ್ಮ, ಕಾಳಪ್ಪ, ಗ್ರಾಮಸ್ಥರಿದ್ದರು.

ಸರ್ವಾಧಿಕಾರಿಯಂತೆ ವರ್ತಿಸುವ ಪಿಡಿಒ  :  ಗ್ರಾಪಂ ಪಿಡಿಒ ಪಕ್ಕದ ಗ್ರಾಮದವರು. ಬಿಲ್‌ ಕಲೆಕ್ಟರ್‌ ಹುದ್ದೆಯಿಂದ ಪಿಡಿಒ ಆಗಿ ಬಡ್ತಿ ಪಡೆದು ದಶಕಗಳಿಂದ ತಮ್ಮ ಪ್ರಭಾವ ಬಳಸಿ, ಇಲ್ಲಿಯೇ ಟಿಕಾಣಿ ಹೂಡಿದ್ದಾರೆ. ಸರ್ವಾಧಿಕಾರಿ ಯಂತೆ ವರ್ತಿಸುತ್ತಾರೆ. ಪ್ರತಿ ಪಿಡಿಒಗಳಿಗೂ ಒಂದೆರಡು ವರ್ಷಗಳ ನಂತರ ವರ್ಗಾವಣೆ ಮಾಡುವ ಇಲಾಖೆ ಅಧಿಕಾರಿಗಳು, ಇವರ ವಿಷಯದಲ್ಲಿ ಮಾತ್ರ ಯಾಕೆ ಮೀನಾಮೇಷ ಎಣಿಸುತ್ತಿದ್ದಾರೆ. ಒಬ್ಬ ಪಿಡಿಒ ಒತ್ತಡಕ್ಕೆ ಇಡೀ ಇಲಾಖೆಯೇ, ಮಂಡಿಯೂರಿರುವುದು ವಿಪರ್ಯಾಸ ಎಂದು ವರದರಾಜು ಆರೋಪಿಸಿದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.