ಡಿಕೆಶಿ ವಿಚಾರಣೆ ವಿರೋಧಿಸಿ ಕನಕಪುರದಲ್ಲಿ ಪ್ರತಿಭಟನೆ
Team Udayavani, Aug 31, 2019, 12:58 PM IST
ರಾಮನಗರ: ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಕೇಂದ್ರ ಸರ್ಕಾರ ಇ.ಡಿ ವಿಚಾರಣೆ ಮೂಲಕ ಕಿರುಕುಳ ನೀಡುತ್ತಿದೆ ಎಂದು ಡಿಕೆಶಿಯವರ ಸ್ವಕ್ಷೇತ್ರ ಕನಕಪುರದಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳ ಪ್ರತಿಭಟನೆ ನಡೆಯಿತು.
ಕನಕಪುರದ ಚನ್ನಬಸಪ್ಪ ವೃತ್ತದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ರಸ್ತೆ ತಡೆ ನಡೆಸಿ ಟೈರ್ ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟಿಸಿದರು. ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರು ಬೇಕಂತಲೇ ಇಡಿ ಇಲಾಖೆಯನ್ನು ದುರುಪಯೋಗ ಮಾಡಿಕೊಂಡು ಡಿಕೆಶಿಯವರನ್ನು ವಿಚಾರಣೆಗೆ ಒಳಪಡಿಸಿದೆ. ಅಲ್ಲದೇ ಡಿಕೆಶಿಯವರನ್ನ ಸದೆ ಬಡಿಯುವ ಮೂಲಕ ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷವನ್ನು ದುರ್ಬಲಗೊಳಿಸುವ ಯತ್ನ ಎಂದು ದೂರಿದರು. ಬಳಿಕ ನಗರದ ಬೀದಿ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.