ಆಶಾ ಕಾರ್ಯಕರ್ತೆಯರ ಪ್ರತಿಭಟನೆ


Team Udayavani, Jan 8, 2020, 2:40 PM IST

rn-tdy-1

ರಾಮನಗರ: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ 15 ತಿಂಗಳಿಂದ ಉಳಿಸಿಕೊಂಡಿರುವ ಎಂಸಿಟಿಎಸ್‌ ಪ್ರೋತ್ಸಾಹ ಧನ ಪಾವತಿಯಾದರೆ ಮಾತ್ರ ಕೆಲಸಕ್ಕೆ ಹಾಜರಾಗುತ್ತೇವೆ. ಅಲ್ಲಿಯವರೆಗೂ ಅನಿರ್ಧಿಷ್ಟ ಕೆಲಸ ಸ್ಥಗಿತಗೊಳಿಸುತ್ತೇವೆ ಎಂದು ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್‌ನ ರಾಜ್ಯ ಘಟಕದ ಉಪಾಧ್ಯಕ್ಷೆ ಟಿ.ಸಿ.ರಮಾ ತಿಳಿಸಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಎದುರು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್‌ (ಎಐಯುಟಿಯುಸಿ) ವತಿಯಿಂದ ಮಂಗಳವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ಗೌರವಧನ ಹೆಚ್ಚಿಸಿ: ನೆರೆಯ ಆಂಧ್ರ ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರ ಸೇವೆಯನ್ನು ಗೌರವಿಸಿ 10 ಸಾವಿರ ಗೌರವ ಧನ ನಿಗದಿ ಮಾಡಲಾಗಿದೆ. ನಮ್ಮ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ ಕನಿಷ್ಠ 12 ಸಾವಿರ ಗೌರವಧನವನ್ನು ನಿಗದಿ ಮಾಡಬೇಕು. ಆಶಾ ಸಾಫ್ಟ್‌ ಅಥವಾ ಆರ್‌ಸಿಪಿಎಚ್‌ ಪೋರ್ಟ್‌ಲ್‌ಗೆ ಆಶಾ ಪೋತ್ಸಾಹಧನದ ಜೋಡಣೆ ರದ್ದುಪಡಿಸಬೇಕು. ಆಶಾ ಕಾರ್ಯಕರ್ತೆಯು ಪ್ರತಿ ತಿಂಗಳು ಎಂಸಿಟಿಎಸ್‌ ಸೇವೆಗಳನ್ನು ಮಾಡಿದಷ್ಟು ಹಣ ಸಂಪೂರ್ಣವಾಗಿ ನೀಡಬೇಕು. ಇದಕ್ಕಾಗಿ ಮ್ಯಾನುವಲ್‌ ವರದಿ ಸಂಗ್ರಹಿಸಿ ವೇತನ ಪಾವತಿ ಮಾಡಬೇಕು ಅಥವಾ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ಆಶಾಗೆ ಮಾಸಿಕ ಮೂರು ಸಾವಿರ ನೀಡಬೇಕು. ಜತೆಗೆ ಜನಸಂಖ್ಯೆಗೆ ಅನುಗುಣವಾಗಿ ವೇತನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಸಹಾಯಧನ ನೀಡಿ: ಆಶಾ ಕಾರ್ಯಕರ್ತೆಯರಿಗೆ ದ್ವಿಚಕ್ರ ವಾಹನ ಖರೀದಿಸಲು ಸಹಾಯಧನ ನೀಡ ಬೇಕು. ಹಿಂದಿನಂತೆ ಪ್ರತಿ ವರ್ಷ ನಾಲ್ಕು ಸೀರೆಗಳನ್ನು ನೀಡಬೇಕು. 10 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದವರಿಗೆ ಸಹಾಯಧನ ನೀಡುವ ಯೋಜನೆ ಜಾರಿಗೆ ತರಬೇಕು. ಆಶಾ ಕಾರ್ಯಕರ್ತೆಯರಿಗೂ ಸಹ ಅಂಗನವಾಡಿ ಕಾರ್ಯಕರ್ತೆಯರಿಗೆ ಇರುವಂತೆ ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಿ ಅಪಘಾತಕ್ಕೆ ಒಳಗಾಗುವ, ಮರಣ ಹೊಂದುವ ಕಾರ್ಯಕರ್ತೆಯರ ಕುಟುಂಬಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್‌, ನಿಮ್ಮ ಸಮಸ್ಯೆ ಗಳನ್ನು ಬಗೆಹರಿಸಲಾಗುವುದು, ಕೆಲಸಕ್ಕೆ ಹಾಜರಾಗಿ ಎಂದು ಮನವಿ ಮಾಡಿದರು. 15 ತಿಂಗಳಿಂದ ಉಳಿಸಿಕೊಂಡಿರುವ ಎಂಸಿಟಿಎಸ್‌ ಪ್ರೋತ್ಸಾಹಧನ ಪಾವತಿಯಾದರೆ ಮಾತ್ರ ಕೆಲಸಕ್ಕೆ ಹಾಜರಾಗುತ್ತೇವೆ. ಅಲ್ಲಿಯವರೆಗೂ ಅನಿರ್ಧಿಷ್ಟ ಕೆಲಸ ಸ್ಥಗಿತಗೊಳಿಸುತ್ತೇವೆ ಎಂದು ಪ್ರತಿಭಟನಾನಿರತ ಆಶಾಕಾರ್ಯಕರ್ತೆಯರು ಒಕ್ಕೊರಲಿನಿಂದ ಹೇಳಿದರು.

ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಗಳಾದ ರೂಪ, ಗೀತ, ಶಿವಲಿಂಗಮ್ಮ, ಸರೋಜ, ವಸಂತ, ಪ್ರೇಮಾ, ಭಾಗ್ಯ, ಆಶಾ, ಎಸ್‌. ಪವಿತ್ರ, ಎಐ ಯುಟಿಯುಸಿ ಸಂಘಟನೆಯ ಶ್ರೀಕಾಂತ್‌ ಇದ್ದರು.

Ad

ಟಾಪ್ ನ್ಯೂಸ್

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮತ್ತು ನೂತನ ಜಿಲ್ಲಾಧಿಕಾರಿ ಡಾ.ಆನಂದ‌ ಕೆ.

Vijayapura: ಜಿಲ್ಲಾಧಿಕಾರಿ ಟಿ.ಭೂಬಾಲನ್ ವರ್ಗಾವಣೆ

8-web

Heart Health: ಹೃದಯ ಆರೋಗ್ಯಕ್ಕೆ ಸೇವಿಸಬಹುದಾದ ಹಣ್ಣು-ತರಕಾರಿಗಳಿವು

Dr-Parameshwar

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇದೆ: ಡಾ.ಜಿ.ಪರಮೇಶ್ವರ್ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Iqbal-ansari

ರಂಭಾಪುರಿ ಶ್ರೀಗಳ ಮಾತು ನಿಜವಾಗುತ್ತೆ: ಡಿಕೆಶಿ ಆಪ್ತ ಶಾಸಕ ಇಕ್ಬಾಲ್‌ ಹುಸೇನ್‌ 

Ramanagar: ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ‌ಸ್ಕೂಟರ್‌

Ramanagar: ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ‌ಸ್ಕೂಟರ್‌

Rambahapuri-KNK

Congress: ಒಪ್ಪಂದದಂತೆ ಡಿ.ಕೆ.ಶಿವಕುಮಾರ್‌ಗೆ ಉನ್ನತ ಸ್ಥಾನ ಕೊಡಲಿ: ರಂಭಾಪುರಿ ಶ್ರೀ

Ramanagar: ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕ್ರಾಂತಿಯೇ ಆಗಬೇಕು: ವಾಟಾಳ್‌

Ramanagar: ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕ್ರಾಂತಿಯೇ ಆಗಬೇಕು: ವಾಟಾಳ್‌

cmmmm

“ಡಿ.ಕೆ.ಶಿವಕುಮಾರ್‌ ಮುಂದಿನ ಸಿಎಂ’ ಹೇಳಿಕೆಗೆ ಬದ್ಧ: ಶಾಸಕ ಇಕ್ಬಾಲ್‌ ಹುಸೇನ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

22

Mangaluru: ಕೆಲಸಕ್ಕೆ ಹೋದವರು ನಾಪತ್ತೆ

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

21

Mangaluru: ನೀರುಡೆ ನಿವಾಸಿ ನಾಪತ್ತೆ; ದೂರು ದಾಖಲು

23

Belthangady: ಮೇಯಲು ಬಿಟ್ಟಿದ್ದ ದನಕ್ಕೆ ವಿಷವಿಕ್ಕಿದ ದುಷ್ಕರ್ಮಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.