ಆಶಾ ಕಾರ್ಯಕರ್ತೆಯರ ಪ್ರತಿಭಟನೆ
Team Udayavani, Jan 8, 2020, 2:40 PM IST
ರಾಮನಗರ: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ 15 ತಿಂಗಳಿಂದ ಉಳಿಸಿಕೊಂಡಿರುವ ಎಂಸಿಟಿಎಸ್ ಪ್ರೋತ್ಸಾಹ ಧನ ಪಾವತಿಯಾದರೆ ಮಾತ್ರ ಕೆಲಸಕ್ಕೆ ಹಾಜರಾಗುತ್ತೇವೆ. ಅಲ್ಲಿಯವರೆಗೂ ಅನಿರ್ಧಿಷ್ಟ ಕೆಲಸ ಸ್ಥಗಿತಗೊಳಿಸುತ್ತೇವೆ ಎಂದು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ನ ರಾಜ್ಯ ಘಟಕದ ಉಪಾಧ್ಯಕ್ಷೆ ಟಿ.ಸಿ.ರಮಾ ತಿಳಿಸಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಎದುರು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ವತಿಯಿಂದ ಮಂಗಳವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.
ಗೌರವಧನ ಹೆಚ್ಚಿಸಿ: ನೆರೆಯ ಆಂಧ್ರ ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರ ಸೇವೆಯನ್ನು ಗೌರವಿಸಿ 10 ಸಾವಿರ ಗೌರವ ಧನ ನಿಗದಿ ಮಾಡಲಾಗಿದೆ. ನಮ್ಮ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ ಕನಿಷ್ಠ 12 ಸಾವಿರ ಗೌರವಧನವನ್ನು ನಿಗದಿ ಮಾಡಬೇಕು. ಆಶಾ ಸಾಫ್ಟ್ ಅಥವಾ ಆರ್ಸಿಪಿಎಚ್ ಪೋರ್ಟ್ಲ್ಗೆ ಆಶಾ ಪೋತ್ಸಾಹಧನದ ಜೋಡಣೆ ರದ್ದುಪಡಿಸಬೇಕು. ಆಶಾ ಕಾರ್ಯಕರ್ತೆಯು ಪ್ರತಿ ತಿಂಗಳು ಎಂಸಿಟಿಎಸ್ ಸೇವೆಗಳನ್ನು ಮಾಡಿದಷ್ಟು ಹಣ ಸಂಪೂರ್ಣವಾಗಿ ನೀಡಬೇಕು. ಇದಕ್ಕಾಗಿ ಮ್ಯಾನುವಲ್ ವರದಿ ಸಂಗ್ರಹಿಸಿ ವೇತನ ಪಾವತಿ ಮಾಡಬೇಕು ಅಥವಾ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ಆಶಾಗೆ ಮಾಸಿಕ ಮೂರು ಸಾವಿರ ನೀಡಬೇಕು. ಜತೆಗೆ ಜನಸಂಖ್ಯೆಗೆ ಅನುಗುಣವಾಗಿ ವೇತನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಸಹಾಯಧನ ನೀಡಿ: ಆಶಾ ಕಾರ್ಯಕರ್ತೆಯರಿಗೆ ದ್ವಿಚಕ್ರ ವಾಹನ ಖರೀದಿಸಲು ಸಹಾಯಧನ ನೀಡ ಬೇಕು. ಹಿಂದಿನಂತೆ ಪ್ರತಿ ವರ್ಷ ನಾಲ್ಕು ಸೀರೆಗಳನ್ನು ನೀಡಬೇಕು. 10 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದವರಿಗೆ ಸಹಾಯಧನ ನೀಡುವ ಯೋಜನೆ ಜಾರಿಗೆ ತರಬೇಕು. ಆಶಾ ಕಾರ್ಯಕರ್ತೆಯರಿಗೂ ಸಹ ಅಂಗನವಾಡಿ ಕಾರ್ಯಕರ್ತೆಯರಿಗೆ ಇರುವಂತೆ ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಿ ಅಪಘಾತಕ್ಕೆ ಒಳಗಾಗುವ, ಮರಣ ಹೊಂದುವ ಕಾರ್ಯಕರ್ತೆಯರ ಕುಟುಂಬಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್, ನಿಮ್ಮ ಸಮಸ್ಯೆ ಗಳನ್ನು ಬಗೆಹರಿಸಲಾಗುವುದು, ಕೆಲಸಕ್ಕೆ ಹಾಜರಾಗಿ ಎಂದು ಮನವಿ ಮಾಡಿದರು. 15 ತಿಂಗಳಿಂದ ಉಳಿಸಿಕೊಂಡಿರುವ ಎಂಸಿಟಿಎಸ್ ಪ್ರೋತ್ಸಾಹಧನ ಪಾವತಿಯಾದರೆ ಮಾತ್ರ ಕೆಲಸಕ್ಕೆ ಹಾಜರಾಗುತ್ತೇವೆ. ಅಲ್ಲಿಯವರೆಗೂ ಅನಿರ್ಧಿಷ್ಟ ಕೆಲಸ ಸ್ಥಗಿತಗೊಳಿಸುತ್ತೇವೆ ಎಂದು ಪ್ರತಿಭಟನಾನಿರತ ಆಶಾಕಾರ್ಯಕರ್ತೆಯರು ಒಕ್ಕೊರಲಿನಿಂದ ಹೇಳಿದರು.
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಗಳಾದ ರೂಪ, ಗೀತ, ಶಿವಲಿಂಗಮ್ಮ, ಸರೋಜ, ವಸಂತ, ಪ್ರೇಮಾ, ಭಾಗ್ಯ, ಆಶಾ, ಎಸ್. ಪವಿತ್ರ, ಎಐ ಯುಟಿಯುಸಿ ಸಂಘಟನೆಯ ಶ್ರೀಕಾಂತ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ