ಕುರಿ, ಮೇಕೆಯೊಂದಿಗೆ ಗ್ರಾಪಂ ಮುಂದೆ ಪ್ರತಿಭಟನೆ


Team Udayavani, Jun 17, 2023, 2:44 PM IST

ಕುರಿ, ಮೇಕೆಯೊಂದಿಗೆ ಗ್ರಾಪಂ ಮುಂದೆ ಪ್ರತಿಭಟನೆ

ರಾಮನಗರ: ಲಂಚ ಕೊಡದಿದ್ದಕ್ಕೆ ಪಿಡಿಒ ನರೇಗಾ ವೈಯಕ್ತಿಕ ಕಾಮಗಾರಿಯ ಬಿಲ್‌ ಕೊಡದೆ ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ, ರೈತ ಗ್ರಾಪಂ ಕಚೇರಿ ಎದುರು ಕುರಿ, ಮೇಕೆಗಳ ಜೊತೆ ಪ್ರತಿಭಟನೆ ನಡೆಸಿದ ಪ್ರಸಂಗ ಚನ್ನಪಟ್ಟಣ ತಾಲೂಕಿನ ಮೈಲ ನಾಯ್ಕನಹಳ್ಳಿ ಗ್ರಾಪಂನಲ್ಲಿ ನಡೆದಿದೆ.

ಮೈಲನಾಯ್ಕನಹಳ್ಳಿ ಗ್ರಾಮದ ರೈತ ರವಿ ಎಂಬುವರು 50ಕ್ಕೂ ಹೆಚ್ಚು ಕುರಿ ಮತ್ತು ಮೇಕೆಗಳನ್ನು ಸಾಕಿ ಕೊಂಡು ಜೀವನ ಸಾಗಿಸುತ್ತಿದ್ದು, ವರ್ಷದ ಹಿಂದೆ ಕುರಿಶೆಡ್‌ ನಿರ್ಮಾಣ ಮಾಡಿದ್ದರು. ಇದಕ್ಕೆ ನರೇಗಾ ಯೋಜನೆಯಲ್ಲಿ ಅನುದಾನಕ್ಕೆ ಅರ್ಜಿ ಸಲ್ಲಿಸಿದ್ದರು. ನಿಯಮಾನುಸಾರ ಕಾಮಗಾರಿ ನಿರ್ಮಾಣ ಮಾಡಿದ್ದರೂ, ಇವರಿಗೆ ಯೋಜನೆಯ ಹಣ ಬಿಡುಗಡೆಗೆ ಪಿಡಿಒ ಪಂಚಾಯ್ತಿ ಕಚೇರಿಗೆ ಅಲೆದಾಡಿಸುತ್ತಿದ್ದರು. ಇದರಿಂದ ರೋಸಿ ಹೊದ ರೈತ ಕುರಿ, ಮೇಕೆಗಳನ್ನು ಪಂಚಾ ಯ್ತಿ ಕಚೇರಿ ಮುಂಭಾಗ ಕೂಡಿ ಹಾಕಿ ಪ್ರತಿಭಟಿಸಿದರು.

ಪಂಚಾಯ್ತಿಯೇ ಕೊಟ್ಟಿಗೆ: ನಾನು ನ್ಯಾಯಯುತವಾಗಿ ಕಾಮಗಾರಿ ನಡೆಸಿದ್ದೇನೆ. ಈ ಹಿಂದೆ ಸಹ ಇದೇ ಪಿಡಿಒ ನರೇಗಾ ಕಾಮಗಾರಿಯಲ್ಲಿ ನನಗೆ ಬರಬೇ ಕಾದ ಹಣವನ್ನು ಬೇರೊಬ್ಬರ ಹೆಸರಿನಲ್ಲಿ ಹಾಕಿ ಕೊಂಡು ವಂಚಿಸಿದ್ದರು. ಈ ಬಾರಿ ಪೂರ್ಣ ಬಿಲ್‌ ಪಾವತಿ ಮಾಡದೆ ನನ್ನ ಜೊತೆ ಆಟವಾಡುತ್ತಿದ್ದಾರೆ. ನನಗೆ ಕೊಟ್ಟಿಗೆ ನಿರ್ಮಾಣದ ಹಣ ಕೊಡುವವರೆಗೆ ನಾನು ಗ್ರಾಪಂ ಕಚೇರಿಯನ್ನೇ ಕೊಟ್ಟಿಗೆ ಮಾಡಿ ಕೊಳ್ಳುತ್ತೇನೆ. ಇಲ್ಲೇ ಕುರಿಗಳನ್ನು ಸಾಕುತ್ತೇನೆ ಎಂದು ಪಟ್ಟುಹಿಡಿದರು.

ಹಿರಿಯ ಅಧಿಕಾರಿಗಳು ಗಮನಹರಿಸಿಲ್ಲ: ಪಿಡಿಒ ಬಿಲ್‌ ನೀಡುತ್ತಿಲ್ಲ ಎಂಬ ಸಂಗತಿಯನ್ನು ಕ್ಷೇತ್ರದ ಶಾಸಕರು, ಸಿಇಒ, ತಾಪಂ ಇಒ ಗಮನಕ್ಕೆ ತಂದಿದ್ದೇನೆ. ಯಾರೂ ನನ್ನ ಸಮಸ್ಯೆಗೆ ಸ್ಪಂದಿಸಿಲ್ಲ. ನಾನು ಕುರಿ ಶೆಡ್‌ ನಿರ್ಮಾಣಕ್ಕೆ ಸಾಲ ಮಾಡಿ ಹಣ ಹಾಕಿದ್ದು, ನರೇಗಾ ಬಿಲ್‌ ಬಂದಲ್ಲಿ ಒಂದಿಷ್ಟು ಅನುಕೂಲ ಆಗುತಿತ್ತು. ನನ್ನ ಬಳಿ ಹಣವಿಲ್ಲದ ಕಾರಣ ಲಂಚ ನೀಡಲು ಆಗುತ್ತಿಲ್ಲ. ಹಣ ನೀಡಿಲ್ಲ ಎಂಬ ಕಾರಣಕ್ಕೆ ನನಗೆ ಯೋಜನೆ ತಪ್ಪಿಸಿದ್ದು, ನನಗೆ ನ್ಯಾಯಸಿಗುವವರೆಗೆ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟುಹಿಡಿದರು. ರೈತನ ಪ್ರತಿಭಟನೆಯ ಬಗ್ಗೆ ಮಾಹಿತಿ ಪಡೆದ ಚನ್ನಪಟ್ಟಣ ತಾಪಂ ಇಒ ಶಿವಕುಮಾರ್‌ ಶನಿವಾರ ಗ್ರಾಪಂ ಕಚೇರಿಗೆ ಆಗಮಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು. ಇಒ ಮನವೊಲಿಕೆಯ ಹಿನ್ನೆಲೆಯಲ್ಲಿ ರವಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.

ಲಂಚ ಕೊಡದಿದ್ದಕ್ಕೆ ಹಣ ನೀಡುತ್ತಿಲ್ಲ : ನರೇಗಾ ಯೋಜನೆಯ ಎಲ್ಲಾ ನಿಯಮಗಳನ್ನು ನಾನು ಪೂರೈಸಿದ್ದೇನೆ. ನರೇಗಾ ಯೋಜನೆಯಡಿ ಕೊಟ್ಟಿಗೆ ನಿರ್ಮಾಣ ಕಾಮಗಾರಿಗೆ ಬಿಲ್‌ ಮಾಡಿಕೊಡಲು ಲಂಚ ಕೇಳಿದ್ದರು. ನಾನು ಕೊಡಲಿಲ್ಲ ಎಂಬ ಕಾರಣಕ್ಕೆ ಪಂಚಾಯ್ತಿ ಕಚೇರಿಗೆ ವರ್ಷದಿಂದ ಅಲೆದಾಡಿಸುತ್ತಿದ್ದಾರೆ. ನನಗಿಂತ ತಡವಾಗಿ ಕೊಟ್ಟಿಗೆ ನಿರ್ಮಾಣ ಮಾಡಿವರಿಗೆ ಹಣ ಬಿಡುಗಡೆ ಮಾಡಿದ್ದಾರೆ ಎಂದು ಪ್ರತಿಭಟನಾ ನಿರತ ರೈತ ರವಿ ಆರೋಪಿಸಿದರು.

ನನ್ನ ಮನವಿಗೆ ಯಾರೂ ಸ್ಪಂದಿಸದಿರುವ ಕಾರಣ ಪ್ರತಿಭಟನೆ ನಡೆಸಿದ್ದೇನೆ. ಅಧಿಕಾರಿಗಳು ನುಡಿದಂತೆ ನಡೆಯದೇ ಹೋದಲ್ಲಿ ಶನಿವಾರ ಮೊಬೈಲ್‌ ಟವರ್‌ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಪಿಡಿಒ ನೀಡುತ್ತಿರುವ ತೊಂದರೆಯಿಂದ ನಾನು ರೋಸಿ ಹೋಗಿದ್ದೇನೆ. ಶನಿವಾರ ಸಮಸ್ಯೆ ಪರಿಹಾರವಾಗದಿದ್ದರೆ ಯಾವುದೇ ಕಾರಣಕ್ಕೂ ಕಾಯುವುದಿಲ್ಲ. ● ರವಿ, ಮೈಲನಾಯ್ಕನಹಳ್ಳಿ, ರೈತ

ರೈತನ ಸಮಸ್ಯೆ ಬಗ್ಗೆ ಗ್ರಾಪಂ ಪಿಡಿಒ ಜೊತೆ ಮಾತನಾಡಿದ್ದೇನೆ. ಶನಿವಾರ ನಾನೇ ಪಂಚಾಯ್ತಿಗೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸುತ್ತೇನೆ. ● ಶಿವಕುಮಾರ್‌, ತಾಪಂ ಇಒ, ಚನ್ನಪಟ್ಟಣ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.