![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ರೈತ ಸಂಘದಿಂದ ಹೆದ್ದಾರಿ ತಡೆದು ಪ್ರತಿಭಟನೆ
Team Udayavani, Sep 29, 2020, 11:58 AM IST
![ರೈತ ಸಂಘದಿಂದ ಹೆದ್ದಾರಿ ತಡೆದು ಪ್ರತಿಭಟನೆ](https://www.udayavani.com/wp-content/uploads/2020/09/rn-tdy-1-21-620x372.jpg)
ಕುದೂರು: ಖಾಸಗಿ ಕಂಪನಿಗಳಿಗೆ ರೈತರ ಜಮೀನು ಮಾರಾಟ ಮಾಡುವ ವ್ಯವಸ್ಥಿತ ಹುನ್ನಾರವನ್ನು ಸರ್ಕಾರ ರೂಪಿಸಿದೆ ಎಂದು ಮಾಗಡಿ ತಾಲೂಕುಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಗೋವಿಂದರಾಜು ಆರೋಪಿದರು.
ರಾಷ್ಟ್ರೀಯ ಹೆದ್ದಾರಿ 75ರ ಮರೂರು ಹ್ಯಾಂಡ್ಪೊಸ್ಟ್ ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇವೆ ಪದಾಧಿಕಾರಿಗಳು ಕರ್ನಾಟಕ ಬಂದ್ ನಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತರ ಪ್ರತಿಭಟನೆಯನ್ನು ಲೆಕ್ಕಿಸದೆ ಮಸೂದೆಯನ್ನುಪಾಸ್ಮಾಡಿರುವುದು ನಿಜಕ್ಕೂ ನಮಗೆ ಆಘಾತವಾಗಿದೆ. ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆಕಿಡಿಕಾರಿದರು. ಕುದೂರು ಹೋಬಳಿ ಘಟಕದ ಅಧ್ಯಕ್ಷ ಖಜಿಪಾಳ್ಯ ಮಂಜುನಾಥ್, ತಾಲೂಕು ರೈತಸಂಘದ ಪ್ರಧಾನ ಕಾರ್ಯದರ್ಶಿ ಗಿರೀಶ್,ಹೋಬಳಿಘಟಕದ ಗೌರವಾಧ್ಯಕ್ಷ ವಿಶ್ವನಾಥರಾವ್, ರಿಜ್ವಾನ್ಬೆಟ್ಟಹಳ್ಳಿ ಗ್ರಾಮಘಟಕದ ಅಧ್ಯಕ್ಷ ಚಂದ್ರಶೇಖರ್, ರಾಜಣ್ಣ, ಬೈಲಪ್ಪ, ನಂಜುಂಡಪ್ಪ, ಮಂಜುನಾಥ್, ಕೆಂಪಾಪುರ ಮೋಹನ್,ಮಂಜುನಾಥ್, ಕೃಷ್ಣಪ್ಪ, ಗಂಗರಾಜು ಮತ್ತಿತರರು ಹಾಜರಿದ್ದರು.
ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ :
ಕನಕಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ದ ಸಿಡಿದೆದ್ದಿದ ರೈತರು ಹಾರೋಹಳ್ಳಿಯಲ್ಲಿ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸಿದರು. ರಾಜ್ಯರೈತ ಸಂಘ ಹಾಗೂ ಐಕ್ಯ ಹೋರಾಟ ಸಮಿತಿ ಕರೆ ನೀಡಿದ್ದ ಬಂದ್ಗೆ ಹೋಬಳಿಯ ಒಕ್ಕಲಿಗರ ಜಾಗೃತಿ ಸಂಘ, ಹಸೀರು ಸೇನೆ ಕರ್ನಾಟಕ ರಕ್ಷಣಾ ವೇದಿಕೆ, ಕಸ್ತೂರಿ ಕರ್ನಾಟಕ ರಕ್ಷಾಣಾ ಸೇನೆ, ಮುಸ್ಲಿಂ ಯೂತ್ ಅಸೋಷಿಯೇಷನ್ ಸೇರಿದಂತೆ ನೂರಾರು ಪ್ರತಿಭಟನಾಕಾರರು ರೈತ ಸಂಘದ ಹೋರಾಟಕ್ಕೆ ಬೆಂಬಲ ನೀಡಿದ್ದರು.
ಹಾರೋಹಳ್ಳಿಯ ಬಸ್ ನಿಲ್ದಾಣದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘದ ಜಿಲ್ಲಾ ಕಾನೂನು ಸಲಹೆಗಾರ ಚಂದ್ರಶೇಖರ್ ಮಾತನಾಡಿ, ಅನ್ನದಾತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಅಧಿಕಾರಕ್ಕೆ ಬಂದ ಕೇಂದ್ರ, ರಾಜ್ಯ ಸರ್ಕಾರಹಲವಾರು ವರ್ಷಗಳ ಹೋರಾಟದ ಮೂಲಕ ಜಾರಿಯಾಗಿದ್ದ ಭೂಸುಧಾರಣೆ ಕಾಯ್ದೆಯನ್ನು ಯಾವುದೇ ಚರ್ಚೆ ಇಲ್ಲದೆ ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿರುವುದು ಖಂಡನೀಯ ಎಂದರು.
ಕರ್ನಾಟಕ ರಕ್ಷಣಾ ವೇದಿಕೆಯ ಶ್ಯಾಮ್, ಮುಸ್ಲಿಂ ಯೂತ್ ಅಧ್ಯಕ್ಷ ರೆಹಮತ್ತುಲ್ಲಾ,ಕಸ್ತೂರಿ ಕರ್ನಾಟಕ ರಕ್ಷಣಾ ಸೇನೆ ರಾಜಾÂಧ್ಯಕ್ಷ ಆಂಜನಪ್ಪ, ಕಾಳರಾಜು, ಅಭಿಷೇಕ್,ರೈತ ಸಂಘದ ಪದಾಧಿಕಾರಿಗಳು, ವಿವಿಧ ಸಂಘಟನೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Magadi; Mother-son passed away due to gas leak from geyser](https://www.udayavani.com/wp-content/uploads/2024/07/magadu-150x83.jpg)
Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ
![Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ](https://www.udayavani.com/wp-content/uploads/2024/07/karad-150x83.jpg)
Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ
![Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ](https://www.udayavani.com/wp-content/uploads/2024/07/loka-150x84.jpg)
Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
![1-train](https://www.udayavani.com/wp-content/uploads/2024/07/1-train-150x96.jpg)
Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ
![HD-Kumaraswamy](https://www.udayavani.com/wp-content/uploads/2024/07/HD-Kumaraswamy-3-150x90.jpg)
Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.