ಸೋಲೂರು ಹಾಲು ಉತ್ಪಾದಕರ ಪ್ರತಿಭಟನೆ

ಹಾಲು ಗುಣಮಟ್ಟ ಸರಿಯಿಲ್ಲ ಎಂದು ಕ್ಯಾತೆ: ಡೇರಿ ಅವ್ಯವಹಾರ ಬೆಳಕಿಗೆ

Team Udayavani, Oct 16, 2021, 4:58 PM IST

ಹಾಲು ಗುಣಮಟ್ಟ ಸರಿಯಿಲ್ಲ ಎಂದು ಕ್ಯಾತೆ- ಡೇರಿ ಅವ್ಯವಹಾರ ಬೆಳಕಿಗೆ

ಮಾಗಡಿ: ಹಾಲು ಉತ್ಪಾದಕ ಮಹಿಳೆಯರು ಹಾಲಿನ ನಷ್ಟದ ಅನ್ಯಾಯದ ವಿರುದ್ಧ ಪ್ರತಿಭಟನಾ ಧರಣಿ ನಡೆಸಿದ್ದರಿಂದ ಡೇರಿಯ ಕಾರ್ಯದರ್ಶಿ ಅವರ ಅವ್ಯವಹಾರ ಬೆಳಕಿಗೆ ಬಂತು. ಕಾರ್ಯದರ್ಶಿ ವಿರುದ್ಧ ಆಡಳಿತ ಮಂಡಳಿ ಕ್ರಮ ಕೈಗೊಂಡರೆ ಮಾತ್ರ ಸಮಸ್ಯೆ ಬಗೆ ಹರಿಯುತ್ತದೆ ಎಂದು ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸಿದರು.

ತಾಲೂಕಿನ ಸೋಲೂರು ಬಳಿ ಇರುವ ಹಾಲು ಶಿಥಲೀಕೇಂದ್ರದ ಬಳಿ ಹಾಲು ಖರೀದಿಸದೆ ತಡೆಹಿಡಿದಿರುವುದರ ವಿರುದ್ಧ ಬಸವನಪಾಳ್ಯದ ಹಾಲು ಉತ್ಪಾದಕ ಮಹಿಳಾ ಸಂಘದ ಸದಸ್ಯರು ನಡೆಸುತ್ತಿದ್ದ ಪ್ರತಿಭಟನಾ ಧರಣಿ ಉದ್ದೇಶಿಸಿ ಮಾತನಾಡಿದ ಅವರು, ತಾಲೂಕಿನ ತಿಪ್ಪಸಂದ್ರ ಹೋಬಳಿ ಬಸವನಪಾಳ್ಯದಲ್ಲಿ 15 ವರ್ಷಗಳ ಹಿಂದೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಪ್ರಾರಂಭಿಸಿದ್ದು, ಅಲ್ಲಿಂದ ಇಲ್ಲಿಯವರೆಗೂ ಹಾಲು ಉತ್ಪಾದಕರಿಗೆ ಡೇರಿ ಆಡಳಿತ ಮಂಡಳಿ ಯಾವುದೇ ಸವಲತ್ತು ಕೊಟ್ಟಿಲ್ಲ.

ಕಾರ್ಯ ದರ್ಶಿ ಧನಲಕ್ಷ್ಮೀ ಮಾಹಿತಿ ಕೊಟ್ಟಿಲ್ಲ, ಸಂಸ್ಥೆಯಿಂದ ಪಡೆದ ಪೀಡ್ಸ್‌ನ ಸುಮಾರು 3.80ಲಕ್ಷ ರೂ.ಹಣ ಸಂದಾಯ ಮಾಡದೆ ಬಾಕಿ ಉಳಿಸಿಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆ. ಡೇರಿಯಲ್ಲಿ ಕಾರ್ಯದರ್ಶಿ ಪತಿಯದ್ದೇ ದರ್ಬಾರ್‌. ಹತ್ತಾರು ವರ್ಷಗಳಿಂದ ಜಮಾ ಖರ್ಚು ಕೊಟ್ಟಿಲ್ಲ, ಭಾರಿ ಅವ್ಯವಹಾರ ನಡೆಸಿದ್ದಾರೆ ಎಂಬ ದೂರುಗಳು ಕೇಳಿ ಬಂದಿದೆ. ಡೇರಿಯಲ್ಲಿ ವ್ಯವಹಾರಿಕ ಲೆಕ್ಕ ದಾಖಲಿಸಿಲ್ಲ.

ಇದನ್ನೂ ಓದಿ:- ಬಾಳಗಾರಿನ  ಪಂಚವಟಿಯಲ್ಲಿ ಮಾಯಾಮೃಗ!

ಕೇಳಿದರೆ ಅವ್ಯಾಚವಾಗಿ ನಿಂಧಿಸುತ್ತಾರೆ. ಜಮಾ ಖರ್ಚು ದಾಖಲಿಸದಿದ್ದರೆ ಅಧಿಕಾರಿಗಳಿಗೂ ಸಂಬಳ ನಿಲ್ಲಿಸುವಂತೆ ಸಂಸ್ಥೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದ ಲೆಕ್ಕ ಕೇಳಲು ಹೋದ ಅಧಿಕಾರಿಗಳ ವಿರುದ್ಧ ಕಾರ್ಯದರ್ಶಿ ಪತಿ ಇತರರು ತಿರುಗಿಬಿದ್ದು, ಮೊಬೈಲ್‌ ಕಸಿದು ಹಲ್ಲೆ ನಡೆಸಿದ್ದಾರೆ. ಹಾಲು ಖರೀದಿಸದಂತೆ ತಡೆಹಿಡಿದಿದ್ದಾರೆ. ಡೇರಿ ಕಾರ್ಯದರ್ಶಿ ಧನಲಕ್ಷ್ಮೀ ಅವರಿಂದ ಹಾಲು ಪೂರೈಕೆ ಮಾಡುವ ಡೇರಿ, ರೈತ ಮಹಿಳೆಯರಿಗೆ, ಸಂಸ್ಥೆಗೆ ಅನ್ಯಾಯವಾಗಿದೆ ಎಂದು ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ ಪ್ರತಿ ಭಟನಾಕಾರರಿಗೆ ಮನವರಿಕೆ ಮಾಡಿದರು.

ಹಲವು ಭಾರಿ ನ್ಯಾಯ ಪಂಚಾಯ್ತಿ ನಡೆಸಿದರೂ ಕಾರ್ಯದರ್ಶಿ ಪತಿ ತಿದ್ದುಕೊಂಡಿಲ್ಲ ಎಂದರು. ಸೋಲೂರು ಪ್ರತಿಭಟನಾ ಸ್ಥಳಕ್ಕೆ ಶಾಸಕ ಎ.ಮಂಜುನಾಥ್‌ ಭೇಟಿ ನೀಡಿ ಅಧಿಕಾರಿಗಳು, ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ ಹಾಗೂ ರೈತ ಮಹಿಳೆಯರೊಂದಿಗೆ ಡೇರಿ ಸಮಸ್ಯೆ ಕುರಿತು ಚರ್ಚಿಸಿದರು.ಸಮಸ್ಯೆ ಬಗೆಹರಿಸಿ ಡೇರಿಯಲ್ಲಿ ಹಾಲು ಶೇಖರಣೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಸಕ ಎ.ಮಂಜುನಾಥ್‌ ಅವರಿಗೆ ಡೇರಿಯ ಅವ್ಯವಹಾರದ ಬಗ್ಗೆ ಶಿಥಲೀಕೇಂದ್ರದ ಉಪ ವ್ಯವಸ್ಥಾಪಕ ಜವರಯ್ಯ ಮಾಹಿತಿ ನೀಡಿದರು.

ರಾಜಕೀಯ ತಿರುವು: ಬಸನಪಾಳ್ಯದ ಡೇರಿ ವಿಚಾರ ರಾಜಕೀಯ ತಿರುವು ಪಡೆದುಕೊಂಡು ಪ್ರತಿಭಟನಾ ಧರಣಿ ತಾರಕ್ಕೇರಿತ್ತು. ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ ಪ್ರತಿಭಟನಾ ಧರಣಿ ನಡೆಯಿತು.

ಆರೋಪ: ರೈತ ಮುಖಂಡ ಗಂಗೋನಹಳ್ಳಿ ಲಿಂಗೇಗೌಡ ಮಾತನಾಡಿ, ಡೇರಿಯಲ್ಲಿ ಆಗಿರುವ ಅವ್ಯವಹಾರ ಬಮೂಲ್‌ ಅಧ್ಯಕ್ಷ ಮತ್ತು ಅಧಿಕಾರಿಗಳ ಗಮನಕ್ಕೆ ಬಂದರೂ ಏಕೆ ರೈತ ಮುಖಂಡರಿಗೆ ತಿಳಿಸಲಿಲ್ಲ, ಕಾರ್ಯದರ್ಶಿ ಧನಲಕ್ಷ್ಮೀ ಅವರ ವಂಚನೆ ಬಗ್ಗೆ ರೈತರ ಗಮನಕ್ಕೆ ತಂದಿಲ್ಲ. ಹಾಲಿನ ಗುಣಮಟ್ಟ ಸರಿಯಿಲ್ಲ ಎಂದು ವಾಪಸ್ಸು ಕಳಿಸಿದ್ದಾರೆ ಎಂದು ಆರೋಪಿಸಿದರು. ಬಮೂಲ್‌ ನಿರ್ದೇಶಕ ಕೆ.ಬಿ.ರಾಜಣ್ಣ, ಕೆಡಿಪಿ ಸದಸ್ಯ ನಾಗರಾಜು, ಸಾಗರ್‌, ನೂರಾರು ರೈತ ಮುಖಂಡರು, ರೈತ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.