ಮೂಲ ಸೌಲಭ್ಯ ಕಲ್ಪಿಸಲು ಕ್ರಮ
Team Udayavani, Oct 16, 2019, 4:54 PM IST
ಮಾಗಡಿ: ರಾಜೀವ್ ಗಾಂಧಿ ಕಾಲೋನಿಗೆ ರಸ್ತೆ, ಚರಂಡಿ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಎ.ಮಂಜುನಾಥ್ ತಿಳಿಸಿದರು. ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಮಾತನಾಡಿದ ಅವರು, ರಾಜೀವ್ ಗಾಂಧಿ ಕಾಲೋನಿ ನಿವಾಸಿಗಳು ರಸ್ತೆ, ಚರಂಡಿ ಇಲ್ಲ. ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಮಾಡಿದ್ದರು. ಪಟ್ಟಣದ ಸ್ವತ್ಛತೆ ಮಾಡುತ್ತಿರುವ ಇಲ್ಲಿನ ರಾಜೀವ್ ಗಾಂಧಿ ಕಾಲೋನಿ ಜನರಿಗೆ ಮೂಲ ಸೌಕರ್ಯ ಕೊಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಕಾಮಗಾರಿಯಲ್ಲಿ ಗುಣಮಟ್ಟವಿರಲಿ: ಎಚ್ಡಿಕೆ ಸಿಎಂ ಆಗಿದ್ದಾಗ ಕೊಳಚೆ ನಿರ್ಮೂಲನೆ ವತಿಯಿಂದ 57 ಕೋಟಿ ರೂ. ಅನುದಾನ ಮಂಜೂರಾತಿ ಮಾಡಿಸಲಾಗಿತ್ತು. ಈಗ ಕಾಂಕ್ರೀಟ್ ರಸ್ತೆ, ಚರಂಡಿ ಮಾಡಿಸಿ, ಅದರ ಮೇಲೆ ಸ್ಲಾಬ್ ಹಾಕಲಾಗವುದು. ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇವೆ. ಗುಣಮಟ್ಟದ ಕಾಮಗಾರಿ ಕೈಗೊಳ್ಳದಿದ್ದರೆ ಕಪ್ಪುಪಟ್ಟಿಗೆ ಸೇರಿಸಲು ಶಿಫಾರಸು ಮಾಡಲಾಗುವುದು. ಇಲ್ಲಿನ ಶೌಚಾಲಯವನ್ನು ದುರಸ್ತಿಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಪುರಸಭೆ ಅಧಿಕಾರಿಗೆ ತಾಕೀತು ಮಾಡಿದ್ದೇನೆ ಎಂದು ತಿಳಿಸಿದರು.
ಪುರಸಭಾ ಮಾಜಿ ಅಧ್ಯಕ್ಷ ಪಿ.ವಿ.ಸೀತಾರಾಮ್, ಮಾಜಿ ಸದಸ್ಯರಾದ ಎಂ.ಎನ್.ಮಂಜುನಾಥ್, ಮಂಜುನಾಥ್, ರೂಪೇಶ್ ಕುಮಾರ್, ಎಂ. ಮುನಿಕೃಷ್ಣ, ನರಸಿಂಹಯ್ಯ, ಕುಮಾರ್, ಮಹೇಶ್, ಜಗದೀಶ್, ಚಂದ್ರಪ್ಪ, ರವಿ, ಪುರಸಭೆ ಆರೋಗ್ಯ ನಿರೀಕ್ಷಕಿ ಕುಸುಮಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!