ರೈತರಿಗೆ ನ್ಯಾಯ, ಸೌವಲತ್ತು ತಲುಪಲಿ: ಲೋಕೇಶ್
Team Udayavani, May 28, 2020, 7:23 AM IST
ಮಾಗಡಿ: ಅನ್ಯಾಯಕ್ಕೆ ಒಳಗಾಗಿರುವ ರೈತರಿಗೆ ನ್ಯಾಯ ಹಾಗೂ ಸಿಗಬೇಕಾದ ಸರ್ಕಾರದ ಸೌಲತ್ತುಗಳು ನೇರವಾಗಿ ರೈತರಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಯತ್ನ ಮಾಡಬೇಕು. ಪಟ್ಟಣದ ಕಲುಷಿತ ನೀರು ಭರ್ಗಾವತಿ ಕೆರೆಗೆ ಹರಿಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತಡೆಯಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್ ಒತ್ತಾಯಿಸಿದ್ದಾರೆ.
ಪಟ್ಟಣದ ಕಲ್ಯಾಗೇಟ್ ರೈತ ಸಂಘದ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಕೊರೊನಾ ಸಂಕಷ್ಟಕ್ಕೆ ರೈತರು ಒಳಗಾಗಿದ್ದಾರೆ. ತಾಲೂಕು ಕಚೇರಿ ರೆಕಾರ್ಡ್ ರೂಮ್, ಸರ್ವೇ ಇಲಾಖೆ ಜಡ್ಡು ಹಿಡಿದಿದೆ. ತಹಶೀಲ್ದಾರ್ ಈ ಕುರಿತು ಅಗತ್ಯ ಕ್ರಮಕೈಗೊಳ್ಳಬೇಕಿದೆ. ಭರ್ಗಾವರಿ ಕೆರೆಗೆ ಹರಿಯುತ್ತಿರುವ ಕಲುಷಿತ ನೀರನ್ನು ಪುರಸಭೆ ಮುಖ್ಯಾಧಿಕಾರಿಗಳು ತಡೆಯಬೇಕು ಎಂದು ಆಗ್ರಹಿಸಿದರು.
ಕುಣಿಗಲ್ನ ಜಾನ್ಸನ್ ಕಂಪನಿಯಿಂದ ತಿಪ್ಪಗೊಂಡನ ಹಳ್ಳಿ ಜಲಾಶಯದವರೆಗೆ 66 /11 ಕೆವಿ ದೊಡ್ಡ ಲೈನ್ ಹಾದು ಹೋಗಿದೆ. ಈ ಸಂಬಂಧ ರೈತರ ಜಮೀನು ಭೂಸ್ವಾಧೀನ ವಾಗಿದೆ. ಮರಗಿಡಗಳು ನಾಶ ಮಾಡಿದ್ದಾರೆ. ನಷ್ಟಕೊಳ ಗಾಗಿರುವ ರೈತರಿಗೆ ಸಿಗಬೇಕಾದ ಪರಿಹಾರ ಧನ ನೀಡ ಬೇಕು. ಇಲ್ಲದಿದ್ದರೆ ತಾಲೂಕಾದ್ಯಂತ ಬೃಹತ್ ಹೋರಾಟ ಹಮ್ಮಿಕೊಳ್ಳುವುದಾಗಿ ಲೋಕೇಶ್ ಎಚ್ಚರಿಕೆ ನೀಡಿದ್ದಾರೆ.
ಸಂಘದ ಪ್ರಧಾನ ಕಾರ್ಯದರ್ಶಿ ಮಧುಗೌಡ, ರಂಗ ಸ್ವಾಮಿ, ನಾರಾಯಣಪ್ಪ, ಪಟೇಲ್ ಹನುಮಂತಯ್ಯ, ಗಂಗರಂಗಯ್ಯ, ಜಯಣ್ಣ, ವೆಂಕಟೇಶ್, ಚಿಕ್ಕಣ್ಣ, ಶೇಖರಪ್ಪ, ದೊಡ್ಡರಂಗಯ್ಯ, ರಂಗಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ
ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
MUST WATCH
ಹೊಸ ಸೇರ್ಪಡೆ
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024