Suspended: ವಕೀಲರ ವಿರುದ್ಧ ಎಫ್ ಐಆರ್ ದಾಖಲಿಸಿದ್ದ ಪಿಎಸ್ ಐ ತನ್ವೀರ್ ಹುಸೇನ್ ಅಮಾನತ್ತು
Team Udayavani, Feb 21, 2024, 12:14 PM IST
ರಾಮನಗರ: 40 ವಕೀಲರ ವಿರುದ್ಧ ಎಫ್ ಐಆರ್ ದಾಖಲಿಸಿದ್ದ ಪಿಎಸ್ ಐ ತನ್ವೀರ್ ಹುಸೇನ್ ಅವರನ್ನು ಅಮಾನತ್ತುಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ವಕೀಲರ ವಿರುದ್ಧ ದಾಖಲು ಮಾಡಿದ್ದ ಎಫ್ ಐಆರ್ ರದ್ದು ಮಾಡುವಂತೆ ವಕೀಲರ ಸಂಘ ಕಳೆದ ಮೂರೂ ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ ಇದಕ್ಕೆ ರಾಜಕೀಯ ನಾಯಕರೂ ಕೈಜೋಡಿಸಿದ್ದು ಸದನದಲ್ಲೂ ಈ ವಿಚಾರ ಮುನ್ನೆಲೆಗೆ ಬಂದಿತ್ತು ಇದರ ಮುಂದಿನ ಭಾಗವಾಗಿ ಮೂರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ವಕೀಲರು ಗುರುವಾರ ವಿಧಾನಸೌಧ ಚಲೋಗೆ ಸಿದ್ದತೆ ಮಾಡಿಕೊಂಡಿದ್ದರು.
ಇದರ ನಡುವೆ ವಿಧಾನ ಸಭೆಯಲ್ಲಿ ಗೃಹಸಚಿವ ಜಿ.ಪರಮೇಶ್ವರ್ ಪಿಎಸ್ ಐ ತನ್ವೀರ್ ಹುಸೇನ್ ಅವರನ್ನು ಅಮಾನತ್ತು ಮಾಡಿರುವುದಾಗಿ ಹೇಳಿದ್ದಾರೆ. ಇದರೊಂದಿಗೆ ಮೂರೂ ದಿನಗಳಿಂದ ನಡೆಯುತ್ತಿದ್ದ ವಕೀಲರ ಧರಣಿ ಕೊನೆಗೊಂಡಿದೆ.
ಈ ಕುರಿತು ಮಾಹಿತಿ ನೀಡಿದ ಗೃಹ ಸಚಿವರು ವಿವಾದದ ಕೇಂದ್ರ ಬಿಂದು ವಾಗಿರುಗ ವಕೀಲ ಚಾನ್ ಪಾಷಾ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.
ಪಿಎಸ್ ಐ ಅಮಾನತ್ತು ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಕೀಲರು ಸಂಭ್ರಮಾಚರಣೆ ನಡೆಸಿದರು.
ಇದನ್ನೂ ಓದಿ: Arrested: ಸಾಲ ವಸೂಲಿ ವೇಳೆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ರೌಡಿಶೀಟರ್ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ