Punishment: ಮೊಬೈಲ್ ಕದ್ದ ಬಾಲಕನ್ನು ಹಲವು ಗಂಟೆಗಳ ಕಾಲ ಕೂಡಿ ಹಾಕಿದ ಮಾಲಕ !
Team Udayavani, Nov 25, 2023, 3:40 PM IST
ರಾಮನಗರ: ಮೊಬೈಲ್ ಕದ್ದ ಬಾಲಕನನ್ನು ಹಲವು ಗಂಟೆಗಳ ಕಾಲ ಮಾಲಕ ಕೂಡಿ ಹಾಕಿದ ಘಟನೆ ರಾಮನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾರಬ್ ನಗರದಲ್ಲಿ ನಡೆದಿದೆ.
ದರ್ಗಾ ಉರುಸು ಪ್ರಯುಕ್ತ ಜೋಕಾಲಿಗಳನ್ನು ಹಾಕಲಾಗಿತ್ತು. ಈ ವೇಳೆ ಬಾಲಕ ಅಲ್ಲಿಗೆ ಬಂದಿದ್ದ. ಗೇಮ್ ಆಡುವುದನ್ನೇ ಚಟ ಮಾಡಿಕೊಂಡಿದ್ದ ಬಾಲಕ, ಜೋಕಾಲಿ ಮಾಲಕನ ಮೊಬೈಲ್ ಕದ್ದು ಪರಾರಿ ಆಗಲು ಯತ್ನಿಸಿದ್ದ.
ಅದೇ ವೇಳೆಗೆ ಮಾಲಕ ಮೊಬೈಲ್ ಎಲ್ಲಿ ಎಂದು ಹುಡುಕಾಡಿದಾಗ, ಬಾಲಕನ ಜೇಬಿನಲ್ಲಿ ಮೊಬೈಲ್ ರಿಂಗಣಿಸಿ ಸಿಕ್ಕಿಬಿದ್ದ. ಮೊಬೈಲ್ ಕದ್ದಿದ್ದಕ್ಕೆ ಮಾಲಕ ಬಾಲಕನ್ನು ಬಿಲ್ ಕೊಡೊವ ಜಾಗದಲ್ಲಿ ಕೂಡಿ ಹಾಕಿದ್ದು, ಬಿಲ್ ಕೊಠಡಿಗೆ ಚಿಲಕ ಹಾಕಿ, ಮೇಲೆ ಸರಪಳಿಯಿಂದ ಲಾಕ್ ಮಾಡಿದ್ದು ಮಾತ್ರವಲ್ಲದೇ ಅನ್ನ, ನೀರು, ಕೊಡದೇ ಕೂಡಿ ಹಾಕಿ ಬಾಲಕನಿಗೆ ಶಿಕ್ಷೆ ನೀಡಿದ್ದಾನೆ.
ಈ ವಿಚಾರ ತಿಳಿದು ಸ್ಥಳಕ್ಕೆ ಬಂದ ಸ್ಥಳೀಯರು, ಬಾಲಕನ ತಪ್ಪಿಗೆ ಕ್ಷಮಿಸುವಂತೆ ಕೋರಿ ಬಿಟ್ಟು ಕಳುಹಿಸಲು ಮನವಿ ಮಾಡಿದರು. ಬಳಿಕ ಮಾಲಕ ಸ್ಥಳೀಯರ ಮನವಿಗೆ ಓಗೊಟ್ಟು ಬಾಲಕನನ್ನು ಬಿಟ್ಟು ಕಳುಹಿಸಿದ ಘಟನೆ ನಡೆಯಿತು.
ಬಾಲಕನಿಗೆ ಬುದ್ಧಿವಾದ ಹೇಳೋದು ಬಿಟ್ಟು ಕೂಡಿ ಹಾಕಿದ್ದು ಎಷ್ಟು ಸರಿ ಎಂಬುದು ಈಗ ಸಾರ್ವಜನಿಕ ವಲಯದಲ್ಲಿ ಚರ್ಚೆ ಪ್ರಾರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!