ಶುದ್ಧ ನೀರಿನ ಘಟಕಕ್ಕೆ ಯೋಗೇಶ್ವರ್‌ ಶಂಕು ಸ್ಥಾಪನೆ


Team Udayavani, Feb 9, 2022, 2:25 PM IST

ಶುದ್ಧ ನೀರಿನ ಘಟಕಕ್ಕೆ ಯೋಗೇಶ್ವರ್‌ ಶಂಕು ಸ್ಥಾಪನೆ

ಚನ್ನಪಟ್ಟಣ: ಈ ಹಿಂದೆ ನಾನು ತಾಲೂಕಿನಾದ್ಯಂತ ಸ್ಥಾಪಿಸಿದ್ದ ಸಾಕ ಷ್ಟು ಶುದ್ಧ ಕುಡಿಯುವ ನೀರಿನಘಟಕಗಳು ಸರಿಯಾಗಿ ನಿರ್ವಹಣೆ ಇಲ್ಲದೆ ಜನತೆಗೆ ಸಮಸ್ಯೆಯಾಗಿರುವ ಬಗ್ಗೆ ಸಾರ್ವಜನಿಕರು ನನಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಮುಂದಿನ ದಿನಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರನ್ನು ಭೇಟಿ ಮಾಡಿ ಈ ಘಟಕಗಳನ್ನು ಮತ್ತೆ ಅರಂಭಿಸುವ ಬಗ್ಗೆ ಗಮನ ಸೆಳೆಯಲಾಗುವುದು ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ತಿಳಿಸಿದರು.

ತಾಲೂಕಿನ ಗಾಂಧಿ ಗ್ರಾಮದಲ್ಲಿ ತಮ್ಮ ವಿಧಾನಪರಿಷತ್‌ ಅನುದಾನದಿಂದ ನೂತನವಾಗಿ ಸ್ಥಾಪಿಸಲು ಉದ್ದೇಶಿಸಿರುವ ಶುದ್ಧ ಕುಡಿಯುವನೀರಿನ ಘಟಕಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕಲುಷಿತ ನೀರಿನ ಸೇವನೆಯಿಂದಾಗಿ ಗ್ರಾಮೀಣ ಭಾಗದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ತಾಲೂಕಿನ ಪ್ರತಿಗ್ರಾಮದಲ್ಲಿ ಒಂದು ಶುದ್ಧಕುಡಿಯುವ ನೀರಿನ ಘಟಕ ಸ್ಥಾಪಿಸಲು ಈ ಹಿಂದೆ ನಾನು ಶ್ರಮಿಸಿದ್ದೆ. ಆದರೆ, ಇದೀಗ ಈ ಕೇಂದ್ರಗಳುಸೂಕ್ತ ನಿರ್ವಹಣೆ ಇಲ್ಲದೆ ಸ್ಥಗಿತಗೊಂಡಿವೆ ಎಂದು ಅವರು ದೂರಿದರು.

ಘಟಕ ನಿರ್ವಹಣೆ ಮುಖ್ಯ: ಶುದ್ಧ ಕುಡಿಯುವ ನೀರಿನ ಘಟಕಗಳು ಹೆಚ್ಚುಕಾಲ ಬಾಳಿಕೆ ಬರಬೇಕುಎಂದಾದಲ್ಲಿ ಅವುಗಳನ್ನು ಸದಾಕಾಲ ನಿರ್ವಹಣೆ ಮಾಡಬೇಕು. ಕೆಲ ಉಪಕರಣಗಳನ್ನು ಆಗಾಗ ಬದಲಿಸಬೇಕು. ಇದರ ನಿರ್ವಹಣೆ ಜವಾಬ್ದಾರಿಯನ್ನು ಗ್ರಾಪಂಗಳ ಮೂಲಕ ನಿರ್ವಹಿಸ ಬೇಕಿದೆ.ಆದರೆ, ಈ ಕೆಲಸಗಳು ನಡೆಯದ ಕಾರಣ ಗ್ರಾಮೀಣ ಭಾಗ ದ ಸಾಕಷ್ಟು ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿವೆ ಎಂದು ತಿಳಿಸಿದರು.

ಮತ್ತೆ ಆರಂಭಗೊಳ್ಳಬೇಕು: ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭಿಸುವಂತೆ ಹಾಗೂ ಇವುಗಳ ನಿರ್ವಹಣೆಗೆಶಾಶ್ವತ ಪರಿಹಾರ ನೀಡುವಂತೆ ಸಚಿವರನ್ನು ಭೇಟಿಮಾಡಿ ಸರ್ಕಾರದಿಂದ ವಿಶೇಷ ಅನುದಾನಬಿಡುಗಡೆ ಮಾಡುವಂತೆ ಕೋರುತ್ತೇನೆ. ಎಲ್ಲ ಗ್ರಾಮದಲ್ಲೂ ಮತ್ತೆ ಶುದ್ಧ ಕುಡಿಯುವ ನೀರಿನಘಟಕ ಆರಂಭಗೊಳ್ಳುವಂತೆ ಮಾಡುತ್ತೇನೆ ಎಂದು ಯೋಗೇಶ್ವರ್‌ ತಿಳಿಸಿದರು.

ಪ್ರತಿಯೊಬ್ಬರು ಶುದ್ಧಕುಡಿಯುವ ನೀರನ್ನುಸೇವಿಸುವ ಮೂಲಕ ಗ್ರಾಮದ ಜನತೆ ಆರೋಗ್ಯಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದ ಯೋಗೇಶ್ವರ್‌, ಗ್ರಾಮದ ಅಭಿವೃದ್ಧಿಗೆ ನಾನು ಮುಂದಿನ ದಿನಗಳಲ್ಲಿ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮುದುಗೆರೆಗ್ರಾಪಂ ಅಧ್ಯಕ್ಷೆ ಬಿಂದುಶ್ರೀ, ಗ್ರಾಪಂ ಮಾಜಿ ಅಧ್ಯಕ್ಷೆಸುಜಾತ ಲೋಕೇಶ್‌, ಗೀತಾ(ಇಂದ್ರಮ್ಮ) ಇನ್ನೂ ಮುಂತಾದವರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.