ವಲಸಿಗರ ಸಂಪೂರ್ಣ ಮಾಹಿತಿ ಕಲೆ ಹಾಕಿ

ಕೈಗಾರಿಕಾ ಪ್ರದೇಶ ಸುರಕ್ಷತೆಯತ್ತ ಗಮನಹರಿಸಿ • ಬಾಡಿಗೆ ಮನೆಗೆ ಬರುವ ವಲಸಿಗರ ಬಗ್ಗೆ ನಿಗಾ ಇರಲಿ

Team Udayavani, May 4, 2019, 2:29 PM IST

ramanagar-tdy-3..

ರಾಮನಗರ ತಾಲೂಕಿನ ಬಿಡದಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಜಾಗೃತಿ ಸಭೆಯಲ್ಲಿ ಶಾಸಕ ಎ.ಮಂಜುನಾಥ್‌ ಮಾತನಾಡಿದರು.

ರಾಮನಗರ: ವಸತಿ ಮತ್ತು ಜನವಿರುವ ಪ್ರದೇಶಗಳು ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿ ವಲಸೆ ಬರುವವರ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಬೇಕು. ಇದಕ್ಕೆ ಸ್ಥಳೀಯ ಸಂಸ್ಥೆಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಮಾಗಡಿ ಶಾಸಕ ಎ.ಮಂಜುನಾಥ್‌ ಹೇಳಿದರು.

ಬಿಡದಿ ಪೊಲೀಸ್‌ ಠಾಣೆ ವತಿಯಿಂದ ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಶ್ರೀಲಂಕಾ ಬಾಂಬ್‌ ನ್ಪೋಟದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಾರ್ವಜನಿಕ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿ, ಬೆಂಗಳೂರು ಮಹಾನಗರ ಹಾಗೂ ಬೆಂಗಳೂರಿಗೆ ಸಮೀಪದಲ್ಲಿರುವ ಬಿಡದಿ ಪಟ್ಟಣ ಮತ್ತು ಕೈಗಾರಿಕಾ ಪ್ರದೇಶಗಳು ಎಷ್ಟು ಸುರಕ್ಷಿತವಾಗಿವೆ ಎನ್ನುವ ಸಂಶಯ ಎದುರಾಗಿದೆ. ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹೊರಗಿನವರು ಕೆಲಸ ಮಾಡುತ್ತಿದ್ದಾರೆ. ಹಾಗೆಯೇ ಬಿಡದಿ ಪಟ್ಟಣ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಬಾಡಿಗೆಗೆ ಬಂದು ನೆಲೆಸಿದ್ದಾರೆ. ಈ ನಿಟ್ಟಿನಲ್ಲಿ ಪುರಸಭೆ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಹೊಸದಾಗಿ ನೆಲೆಸಿರುವ, ಬಾಡಿಗೆ ಮನೆಗಳಿಗೆ ಬರುವ ವಲಸಿಗರ ಮಾಹಿತಿ ಕಲೆ ಹಾಕುವ ಮೂಲಕ ಹೆಚ್ಚು ಸುರಕ್ಷತೆಗೆ ಗಮನ ನೀಡಬೇಕು ಎಂದು ಹೇಳಿದರು.

ಮನೆ ನೀಡುವಾಗ ಪರಿಶೀಲಿಸಿ: ಗ್ರಾಮೀಣ ಮತ್ತು ಪಟ್ಟಣ ಪ್ರದೇಶದಲ್ಲಿನ ಬಾಡಿಗೆ ಮನೆಗೆ ಬರುವ ವಲಸಿಗರ ಬಗ್ಗೆ ಹೆಚ್ಚು ನಿಗಾ ಇಡಬೇಕು. ಜೊತೆಗೆ ಆವರ ಬಗ್ಗೆ ಮಾಹಿತಿ ಸಂಗ್ರಹಿಸಿ, ಅವರ ಆಧಾರ್‌ರ್ ಕಾರ್ಡ್‌, ಪರಿತರ ಚೀಟಿ ನಕಲಿ ಗುರುತಿನ ಚೀಟಿಗಳನ್ನು ಪಡೆದು, ಅವು ಅವರಿಗೆ ಸೇರಿದವೆ ಎಂದು ಸೂಕ್ಷ್ಮವಾಗಿ ಪರಿಶೀಲನೆ ಮಾಡಿ, ಬಳಿಕ ಬಾಡಿಗೆಗೆ ಮನೆ ನೀಡಬೇಕಿರುವುದು ಮನೆ ಮಾಲೀಕರ ಜವಾಬ್ದಾರಿಯಾಗಿದೆ. ಇಲ್ಲವಾದಲ್ಲಿ ಆಕಸ್ಮಿಕವಾಗಿ ಆಪರಾಧ ಪ್ರಕರಣ ನಡೆದರೆ ಮನೆ ಮಾಲೀಕರು ತಪ್ಪಿತಸ್ಥರಾಗಬೇಕಾದ ಆನಿವಾರ್ಯತೆ ಎದುರಾಗಿದೆ ಎಂದು ಎಚ್ಚರಿಕೆಯ ಸಂದೇಶ ನೀಡಿದರು .

ಭಯೋತ್ಪಾದನೆ ಸಣ್ಣ ಪಟ್ಟಣಕ್ಕೂ ವ್ಯಾಪಿಸಿದೆ: ವೃತ್ತ ಆರಕ್ಷಕ ನಿರೀಕ್ಷಕ ಜೀವನ್‌ ಮಾತನಾಡಿ, ಪ್ರಸಕ್ತ ಸನ್ನಿವೇಶದಲ್ಲಿ ಭಯೋತ್ಪಾದನೆ ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗಿಲ್ಲ. ಸಣ್ಣ ಪಟ್ಟಣಗಳೂ ವ್ಯಾಪಿಸಿದೆ. ವಲಸೆ ಬಂದು ವರ್ಷಾನುಗಟ್ಟಲೆ ಸ್ಥಳೀಯವಾಗಿದ್ದುಕೊಂಡು ವಿಧ್ವಂಸಕ ಕೃತ್ಯಗಳನ್ನು ನಡೆಸುತ್ತಾರೆ. ಹೀಗಾಗಿ ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಸುಳಿವು ನೀಡಿದರೆ ಮಾತ್ರ ನಾವು ಪರಿಶೀಲನಾ ಕ್ರಮಗಳನ್ನು ಮಾಡಲು ಸಾಧ್ಯ ಎಂದರು.

ಸೂಕ್ತ ಭದ್ರತೆಗಾಗಿ ಸೌಲಭ್ಯ ಕಲ್ಪಿಸಿ: ಶೀಘ್ರವೇ ಬಿಡದಿ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಹಾಗೂ ವಲಸೆ ಬಂದಿರುವ ಉದ್ಯೋಗಿಗಳ ಸಂಪೂರ್ಣ ವಿವರ ಸಂಗ್ರಹಣೆ ಮಾಡಲಾಗುವುದು. ಗೃಹ ಇಲಾಖೆ ಹೊರ ತಂದಿರುವ ಕರ್ನಾಟಕ ಸಾರ್ವಜನಿಕ ಸುರಕ್ಷಾ ಕಾಯ್ದೆ-2018 ನಿಯಮಗಳ ಬಗ್ಗೆ ಕಾರ್ಖಾನೆ ಆಡಳಿತ ಮಂಡಳಿಯವರು ತಿಳಿದುಕೊಳ್ಳಬೇಕು. ಸೂಕ್ತ ಭದ್ರತೆಗಾಗಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ರಕ್ಷಣೆಗೆ ಬೇಕಾದ ಉತ್ತಮ ಗುಣಮಟ್ಟದ ಸಾಮಗ್ರಿಗಳನ್ನು ನೀಡಬೇಕು. ಕನಿಷ್ಠ 30 ದಿನ ಬ್ಯಾಕಪ್‌ ಇರುವಂತಹ ಸಿಸಿ ಟಿವಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಪ್ರತಿನಿಧಿಗಳಿಂದ ಮಾಹಿತಿ ವಿನಿಯಮ: ಈ ಸಂದರ್ಭದಲ್ಲಿ ವಿವಿಧ ಕಂಪೆನಿಗಳಿಂದ ಆಗಮಿಸಿದ್ದ ಪ್ರತಿನಿಧಿಗಳು ತಮ್ಮ ಕಾರ್ಖಾನೆಗಳಲ್ಲಿ ಸದ್ಯ ಚಾಲ್ತಿಯಲ್ಲಿರುವ ಭದ್ರತಾ ವ್ಯವಸ್ಥೆ ಹಾಗೂ ಸುಧಾರಿತ ಕ್ರಮಗಳ ಬಗ್ಗೆ ಮಾಹಿತಿ ವಿನಿಯಮ ಮಾಡಿಕೊಂಡರು. ಬಿಡದಿ ಕೈಗಾರಿಕಾ ಪ್ರದೇಶಕ್ಕೆ ಪ್ರತ್ಯೇಕ ಹೊರ ಠಾಣೆ ಸ್ಥಾಪನೆ, ಕಾರ್ಖಾನೆಗಳಲ್ಲಿನ ರಕ್ಷಣಾ ಸಿಬ್ಬಂದಿಗಳ ಜೊತೆಗೆ ನಿಕಟ ಸಂಪರ್ಕವನ್ನಿಟ್ಟುಕೊಂಡು ಅನುಮಾನಾಸ್ಪದ ವ್ಯಕ್ತಿಗಳ ಮಾಹಿತಿ ಸಂಗ್ರಹಿಸುವಂತೆ, ಜಾಗೃತಿ ಸಭೆಗಳಿಂದ ಸಮನ್ವಯ ಸಾಧಿಸುವ ಜತೆಗೆ ಒಗ್ಗಟ್ಟು ವೃದ್ಧಿಯಾಗುವ ಬಗ್ಗೆ ಸಲಹೆ ಅಭಿಪ್ರಾಯಗಳು ವ್ಯಕ್ತವಾದವು.

ಸಭೆಯಲ್ಲಿ ಬಿಡದಿ ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ವಿವೇಕ್‌, ಜಿಪಂ ಮಾಜಿ ಸದಸ್ಯ ಇಟ್ಟಮಡು ರಾಮಚಂದ್ರಯ್ಯ, ಗ್ರಾಪಂ ಮಾಜಿ ಅಧ್ಯಕ್ಷ ವಿಷಕಂಠಯ್ಯ, ಪುರಸಭೆ ಸದಸ್ಯ ಬಿ.ಎಂ.ರಮೇಶ್‌ ಕುಮಾರ್‌ ಸೇರಿದಂತೆ ಪುರಸಭೆ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಆಟೋ ಚಾಲಕರು ಹಾಗೂ ಪೊಲೀಸ್‌ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.