ರಾಮನಗರ: ಒಂದೇ ದಿನ 12 ಸೋಂಕು ದೃಢ!


Team Udayavani, Jun 18, 2020, 6:53 AM IST

12 ramanagara-

ರಾಮನಗರ: ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 12ಕ್ಕೂ ಅಧಿಕ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 37ಕ್ಕೆ ಏರಿದೆ. ಅಲ್ಲದೆ ಕನಕಪುರ ತಾಲೂಕಿನಲ್ಲಿ 90 ವರ್ಷದ ಸೋಂಕಿತ ಬಟ್ಟೆ ಅಂಗಡಿ ಮಾಲಿಕ ಸಾವಿಗೀಡಾಗಿದ್ದಾರೆ. ಆದರೆ ಈ ಸಾವು ಜಿಲ್ಲೆಯ 2ನೇ ಸಾವು ಎಂದು ಜಿಲ್ಲಾಡಳಿತ ದೃಢಪಡಿಸಿಲ್ಲ.

ಚನ್ನಪಟ್ಟಣದಲ್ಲಿ 10 ಮಂದಿಗೆ ಸೋಂಕು: ಚನ್ನಪಟ್ಟಣ ತಾಲೂಕಿನ ಶ್ಯಾನುಭೋಗನಹಳ್ಳಿ 7 ಮಂದಿಗೆ ಹಾಗೂ ದೇವರಹೊಸಹಳ್ಳಿ 3 ಮಂದಿಗೆ ಪಾಸಿಟಿವ್‌ ವರದಿ ಬಂದಿದೆ. ಶ್ಯಾನು ಭೋಗನಹಳ್ಳಿಯ ಪಿ.6137, ಪಿ.6138,  ಪಿ-6139  ಸೋಂಕಿತರಿಗೆ ಅವರು ಪ್ರಾಥಮಿಕ ಸೋಂಕಿತರು.

20ರಿಂದ 36 ವರ್ಷದ 6 ಪುರುಷ ರು ಮತ್ತು 72 ವರ್ಷದ ಮಹಿಳೆಗೆ ಸೋಂಕಿತರಾಗಿದ್ದಾರೆ. ದೇವರಹೋಸಹಳ್ಳಿಯಲ್ಲಿ ಪಿ-6850 ಸೋಂಕಿತ ವ್ಯಕ್ತಿಗೆ ಪ್ರಾಥಮಿಕ ಸಂಪರ್ಕಿತ 11ರ ಬಾಲಕ  ಮತ್ತು 21ರ ಯುವಕ ಹಾಗೂ 50 ವರ್ಷದ ಮಹಿಳೆಗೆ ಸೋಂಕು ತಗುಲಿದೆ. ಬೊಂಬೆನಾಡು ಚನ್ನಪಟ್ಟಣದಲ್ಲಿ ಸೋಂಕಿತರ ಸಂಖ್ಯೆ 19ಕ್ಕೇರಿದ್ದು ಆತಂಕ ಸೃಷ್ಟಿಸಿದೆ. ಮಾಗಡಿ ತಾಲೂಕಿನಲ್ಲಿ 15 ವರ್ಷದ ಯುವತಿಯಲ್ಲಿ ಕೋವಿಡ್‌  ಪಾಸಿಟಿವ್‌ ಕಂಡು ಬಂದಿದ್ದು,

ಈಕೆಯಲ್ಲಿ ಐಎಲ್‌ಐ ಲಕ್ಷಣಗಳು ಕಾಣಿಸಿಕೊಂಡಿದೆ ಎಂದು ವರದಿ ತಿಳಿಸಿದೆ. ಕನಕಪುರ ತಾಲೂಕಿನ ಮರಳವಾಡಿಯಲ್ಲಿ ಕಿಡ್ನಿ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದ 55 ವರ್ಷದ ವ್ಯಕ್ತಿ  ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದು, ಕೋವಿಡ್‌-19 ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದಿದೆ. ಪಾಸಿಟವ್‌ ಪ್ರಕರಣಗಳ ನ್ನು ಸ್ಥಳೀಯ ಕೋವಿಡ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಮತ್ತೂಬ್ಬರು ಗುಣಮುಖ: ಜಿಲ್ಲೆಯಲ್ಲಿ ಮತ್ತೂಬ್ಬ ಸೋಂಕಿತ ವ್ಯಕ್ತಿ ಗುಣಮುಖರಾಗಿರುವುದಾಗಿ ಜಿಲ್ಲಾಡಳಿತ ತಿಳಿಸಿದೆಯಾದರು, ಪೂರ್ಣ ಮಾಹಿತಿ ಕೊಟ್ಟಿಲ್ಲ.

55 ವರ್ಷದ ವ್ಯಕ್ತಿಗೆ ಸೋಂಕು: ಮರಳವಾಡಿ ಹೋಬಳಿಯ ದೊಡ್ಡಸಾದೇನಹಳ್ಳಿ ಗ್ರಾಮದ 55 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಯನ್ನು ಆರೋಗ್ಯ ಅಧಿಕಾರಿಗಳು ರಾಮನಗರ ಕೋವಿಡ್‌-19 ಆಸ್ಪತ್ರೆಗೆ  ದಾಖಲಿಸಿದ್ದಾರೆ. ಈತ ಅನಾರೋಗ್ಯದಿಂದ ಡಯಾಲಿಸಿಸ್‌ ಚಿಕಿತ್ಸೆಗೆಂದು ವಾರದಲ್ಲಿ ಎರಡು ದಿನ ಬೆಂಗಳೂರಿನ ಆಸ್ಪತ್ರೆ ಹೋಗಿ ಬರುತ್ತಿದ್ದ. ಹೀಗಾಗಿ ಈತನಿಗೆ ಬೆಂಗಳೂರಿನ ಮೂಲದಿಂದಲೇ ಸೋಂಕು ಹರಡಿರಬಹುದು ಎಂದು ಶಂಕಿಸಲಾಗಿದೆ.

ಸೋಂಕಿತ ವ್ಯಕ್ತಿಯನ್ನು ಚಿಕಿತ್ಸೆಗೆಂದು ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಮಕ್ಕಳಿಗೂ ಸೋಂಕು ಹರಡುವ ಭೀತಿ ಎದುರಾಗಿದೆ. ಈ ಸಂಬಂಧ ತಾಲೂಕು ಆರೋಗ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೋಂಕಿತ  ವ್ಯಕ್ತಿಯ ಮನೆಯ ಸುತ್ತಲೂ ಸೀಲ್‌ಡೌನ್‌ ಮಾಡಲಾಗಿದೆ. ಸೋಂಕಿತನ ಸಂಪರ್ಕದಲ್ಲಿದ್ದ 4 ಜನ ಕುಟುಂಬದವರನ್ನು ಕ್ವಾರಂಟೈನ್‌ ಮಾಡಲಾಗಿದೆ.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.