ಏ.27ಕ್ಕೆ ರಾಮನಗರ, ಚನ್ನಪಟ್ಟಣದಲ್ಲಿ ಚುನಾವಣೆ


Team Udayavani, Mar 30, 2021, 3:53 PM IST

ಏ.27ಕ್ಕೆ ರಾಮನಗರ, ಚನ್ನಪಟ್ಟಣದಲ್ಲಿ ಚುನಾವಣೆ

ರಾಮನಗರ: ಜಿಲ್ಲೆಯ ರಾಮನಗರ ಮತ್ತು ಚನ್ನಪಟ್ಟಣ ನಗರಸಭೆಗಳಿಗೆ ಏ.27ರಂದು ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಪ್ರಕಟಣೆ ಹೊರೆಡಿಸಿದೆ.

ಏ.8ರ ಗುರುವಾರ ಜಿಲ್ಲಾಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸುವರು. ಏ.15 ನಾಮಪತ್ರಗಳ ಸಲ್ಲಿಕೆಗೆ ಕೊನೆ ದಿನ. ಏ.16 ನಾಮಪತ್ರಗಳ ಪರಿಶೀಲನೆ. ಏ.19 ಉದೇದುವಾರಿಕೆಗಳನ್ನು ಹಿಂಪಡೆಯುವ ದಿನ. ಮತದಾನದ ಅವಶ್ಯಕತೆ ಇದ್ದಲ್ಲಿ ಏ.27ರ ಮಂಗಳವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ಮರು ಮತದಾನದ ಅವಶ್ಯಕತೆ ಬಿದ್ದಲ್ಲಿ ಏ.29ರ ಗುರುವಾರ ನಡೆಯುತ್ತದೆ.ಮತಗಳ ಎಣಿಕೆ ಏ.30ರಂದು ಬೆಳಗ್ಗೆ 8 ಗಂಟೆಯಿಂದಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಅದೇ ದಿನ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಆಯೋಗದ ಆದೇಶ ತಿಳಿಸಿದೆ.

ರಾಮನಗರ ಮತ್ತು ಚನ್ನಪಟ್ಟಣ ನಗರಸಭೆಗಳ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರೆಡಿಸಿದ ದಿನ ಏ.8 ರಿಂದ ಏ 30ರವರೆಗೆ ಸದಾಚಾರ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಆದೇಶ ತಿಳಿಸಿದೆ. ಹಾಲಿ ಚಾಲ್ತಿಯಲ್ಲಿರುವ ವಿಧಾನಸಭಾ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ಚುನಾವಣೆ ನಡೆಸಬೇಕು. ಏ.10 ಎರಡನೇ ಶನಿವಾರ ಸಾರ್ವತ್ರಿಕ ರಜಾದಿನವಾದ್ದರಿಂದ ಅಂದು ನಾಮಪತ್ರ ಸ್ವೀಕರಿಸುವಂತಿಲ್ಲ ಎಂದು ಆದೇಶ ತಿಳಿಸಿದೆ.

ಮರು ಮೀಸಲಾತಿ ನಿಗದಿ :

ಜನವರಿ 21, 2021ರಂದು ರಾಮನಗರ ನಗರಸಭೆಗೆ ಮೀಸಲಾತಿ ನಿಗದಿ ಪಡಿಸಿ ಹೊರೆಡಿಸಿದ್ದ ಅಧಿಸೂಚನೆಗೆ ಲಿಖಿತ ನಿಗದಿತ ಅವಧಿಯಲ್ಲಿ ಸ್ವೀಕೃತವಾದ ಸಲಹೆ, ಆಕ್ಷೇಪಣೆಗಳನ್ನು ಪರಿಗಣಿಸಿ ರಾಮನಗರ ನಗರಸಭೆಯ 31 ವಾರ್ಡುಗಳಿಗೂ ಮೀಸಲಾತಿ ನಿಗದಿ ಪಡಿಸಿದ ಪ್ರಕಟಣೆ ಮಾ. 17ರಂದು ಹೊರಬಿದ್ದಿತ್ತು. ರಾಮನಗರ ನಗರಸಭೆಯ ನೂತನ ಮೀಸಲಾತಿ ಪಟ್ಟಿ ಹೀಗಿದೆ. ವಾರ್ಡ್‌ 1- ಪರಿಶಿಷ್ಟ ಜಾತಿ ಮಹಿಳೆ, ವಾರ್ಡ್‌ 2-ಪರಿಶಿಷ್ಟ ಜಾತಿ, ವಾರ್ಡ್‌ 3- ಪರಿಶಿಷ್ಟ ಜಾತಿ ಮಹಿಳೆ, ವಾರ್ಡ್‌ 4-ಹಿಂದುಳಿದ ವರ್ಗ (ಎ) ಮಹಿಳೆ, ವಾರ್ಡ್‌ 5-ಸಾಮಾನ್ಯ, ವಾರ್ಡ್‌ 6- ಪರಿಶಿಷ್ಟ ಜಾತಿ, ವಾರ್ಡ್‌ 7 – ಹಿಂದುಳಿದ ವರ್ಗ (ಬಿ) ಮಹಿಳೆ,ವಾರ್ಡ್‌ 8 – ಸಾಮಾನ್ಯ ಮಹಿಳೆ, ವಾರ್ಡ್‌ 9- ಹಿಂದುಳಿದ ವರ್ಗ (ಎ), ವಾರ್ಡ್‌ 10-ಸಾಮಾನ್ಯ ಮಹಿಳೆ,ವಾರ್ಡ್‌ 11-ಹಿಂದುಳಿದ ವರ್ಗ (ಬಿ), ವಾರ್ಡ್‌ 12-ಹಿಂದುಳಿದ ವರ್ಗ (ಎ) ಮಹಿಳೆ, ವಾರ್ಡ್‌ 13 -ಸಾಮಾನ್ಯ, ವಾರ್ಡ್‌ 14- ಸಾಮಾನ್ಯ, ವಾರ್ಡ್‌ 15- ಸಾಮಾನ್ಯ ಮಹಿಳೆ, ವಾರ್ಡ್‌ 16- ಹಿಂದುಳಿದ ವರ್ಗ (ಎ), ವಾರ್ಡ್‌ 17-ಹಿಂದುಳಿದ ವರ್ಗ (ಎ) ಮಹಿಳೆ, ವಾರ್ಡ್‌ 18-ಸಾಮಾನ್ಯ, ವಾರ್ಡ್‌ 19 ಸಾಮಾನ್ಯ, ವಾರ್ಡ್‌ 20-ಸಾಮಾನ್ಯ ಮಹಿಳೆ, ವಾರ್ಡ್‌ 21-ಪರಿಶಿಷ್ಟ ಜಾತಿ, ವಾರ್ಡ್‌ 22- ಹಿಂದುಳಿದ ವರ್ಗ (ಎ), ವಾರ್ಡ್‌ 23- ಸಾಮಾನ್ಯ, ವಾರ್ಡ್‌ 24-ಸಾಮಾನ್ಯ ಮಹಿಳೆ, ವಾರ್ಡ್‌ 25-ಹಿಂದುಳಿದ ವರ್ಗ ಎ, ವಾರ್ಡ್‌ 26-ಪರಿಶಿಷ್ಟ ಪಂಗಡ, ವಾರ್ಡ್‌ 27-ಸಾಮಾನ್ಯ ಮಹಿಳೆ, ವಾರ್ಡ್‌ 28-ಸಾಮಾನ್ಯ, ವಾರ್ಡ್‌ 29-ಸಾಮಾನ್ಯ, ವಾರ್ಡ್‌ 30 -ಸಾಮಾನ್ಯ ಮಹಿಳೆ, ವಾರ್ಡ್‌ 31- ಸಾಮಾನ್ಯ ಮಹಿಳೆ.

ವಿಳಂಬ ಏಕಾಗಿತ್ತು? :

2018ರಲ್ಲೇ ಮೀಸಲಾತಿ ನ್ಯಾಯಾಲಯಕ್ಕೆ ಮೊರೆ 2018ರಲ್ಲಿಯೇ ರಾಜ್ಯಸರ್ಕಾರ ಪ್ರಕಟಿಸಿದ್ದ ರಾಮನಗರನಗರಸಭೆಯ ವಾರ್ಡುಗಳ ಮೀಸಲಾತಿ ಮತ್ತು ವಾರ್ಡುಗಳ ಮರುವಿಂಗಡನೆ ಪ್ರಶ್ನಿಸಿ ಕೆಲವರು ಹೈಕೋಟ್‌ ಮೊರೆ ಹೋಗಿದ್ದರು. ನ್ಯಾಯಾಲಯಮೀಸಲಾತಿ ಪರಿಷ್ಕರಿಸಿ ನಿಗದಿ ಪಡಿಸುವಂತೆನಗರಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಿ ಆದೇಶ ಹೊರಡಿಸಿತ್ತು. ಆದರೆ ಇಲಾಖೆ ಈ ವಿಚಾರದಲ್ಲಿ ಪರಿಷ್ಕರಣೆ ಮಾಡಲಿಲ್ಲ. 2021ರ ಜನವರಿ 21ರಂದು ಕರ್ನಾಟಕ ಪುರಸಭೆ ಕಾಯ್ದೆ 1964ರ ಪ್ರಕಾರಜಿಲ್ಲಾಧಿಕಾರಿಗಳು ಮೀಸಲು ನಿಗದಿ ಪಡಿಸಿ ಅಧಿಸೂಚನೆ ಹೊರಡಿಸಿ ಆಕ್ಷೇಪಣೆ ಆಹ್ವಾನಿಸಿದ್ದರು. ಸುಮಾರು 40ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ಡೀಸಿಯವರು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ಪತ್ರ ಬರೆದಿದ್ದರು.

2 ವರ್ಷಗಳ ನಂತರ ಗರಿಗೆದರಿದ ರಾಜಕೀಯ ಚಟುವಟಿಕೆ :

ಬರೋಬ್ಬರಿ 2 ವರ್ಷಗಳ ನಂತರ ಜಿಲ್ಲೆಯ ರಾಮನಗರ ಮತ್ತು ಚನ್ನಪಟ್ಟಣ ನಗರಸಭೆಗಳಿಗೆ ಚುನಾವಣೆ ಘೋಷಣೆಯಾಗಿದೆ. ಎರಡು ವರ್ಷಗಳ ಕಾಲ ನಡೆದ ಅಧಿಕಾರಿಗಳ ದರ್ಬಾರು ಏಪ್ರಿಲ್‌ತಿಂಗಳಲ್ಲಿ ಅಂತ್ಯವಾಗಲಿದೆ. ಏ.27ರಂದು ಚುನಾವಣೆ ನಿಗದಿಪಡಿಸಿ ಚುನಾವಣಾ ಆಯೋಗ ಆದೇಶಹೊರೆಡಿಸಿದೆ. ಬೆನ್ನಲ್ಲೆ ಎರಡೂ ನಗರಗಳಲ್ಲಿ ರಾಜಕೀಯ ಗರಿಗೆದರಿದೆ. ಕಾಂಗ್ರೆಸ್‌, ಜೆಡಿಎಸ್‌ ಮತ್ತು ಬಿಜೆಪಿಪಕ್ಷಗಳ ಆಕಾಂಕ್ಷಿಗಳು ಟಿಕೆಟ್‌ಗಾಗಿ ತಮ್ಮ ಗಾಡ್‌ ಫಾದರ್‌ಗಳ ಬೆನ್ನು ಹತ್ತಿದ್ದಾರೆ. ತೆರೆಮರೆಯಲ್ಲಿ ನಡೆಯುತ್ತಿದ್ದ ಈ ಚಟುವಟಿಕೆ ಸೋಮವಾರ ಇನ್ನಷ್ಟು ಬಿರುಸುಗೊಂಡಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.