ಫೆ.2 ರಂದು ರಾಮನಗರ ಮ್ಯಾರಥಾನ್‌


Team Udayavani, Jan 24, 2020, 2:41 PM IST

rn-tdy-1

ರಾಮನಗರ: ದಕ್ಷಿಣ ಭಾರತದಲ್ಲಿ ಖ್ಯಾತಿಯಾಗಿರುವ ರಾಮನಗರ ಮ್ಯಾರಥಾನ್‌ 2020 ಇದೇ ಫೆಬ್ರವರಿ 2ರಂದು ಆಯೋಜನೆಯಾಗಿದೆ ಎಂದು ಯಲ್ಲೋ ಆಂಡರ್‌ ರೆಡ್‌ ಫೌಂಡೇಷನ್‌ನ ಅಧ್ಯಕ್ಷ ರಾಘವೇಂದ್ರ ತಿಳಿಸಿದರು.

ನಗರದ ಕೆಂಗಲ್‌ ಹನುಮಂತಯ್ಯ ಕ್ರೀಡಾ ಮತ್ತು ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಇದು 7ನೇ ಬಾರಿಗೆ ಮ್ಯಾರಥಾನ್‌ ಆಯೋಜನೆಯಾಗಿದ್ದು, ದಕ್ಷಿಣ ಭಾರತದಲ್ಲಿ ಗಮನ ಸೆಳೆದಿದೆ ಎಂದರು.

ಪ್ಲಾಸ್ಟಿಕ್‌ ಮುಕ್ತ ಸಮಾಜ: ಅರಣ್ಯ ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಿಲ್ಲಿ ಮತ್ತು ಪ್ಲಾಸ್ಟಿಕ್‌ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಲ್ಲಿ ಈ ಬಾರಿಯ ಮ್ಯಾರಥಾನ್‌ ನಡೆಯಲಿದೆ. ಮ್ಯಾರಥಾನ್‌ಗೆ ರಾಮನಗರ ಜಿಲ್ಲಾ ಪೊಲೀಸ್‌, ಜಿಲ್ಲಾ ಪಂಚಾಯಿತಿ, ಗೈಲ್‌ ಲಿಮಿಟೆಡ್‌ ಮತ್ತು ಮಹಾರಾಷ್ಟ್ರ ನ್ಯಾಷನಲ್‌ ಗ್ಯಾಸ್‌ ಲಿಮಿಟೆಡ್‌, ಕೆಂಗಲ್‌ ಹುನುಮಂತಯ್ಯ ಕ್ರೀಡಾ ಮತ್ತು ಸಾಂಸ್ಕೃತಿಕ ಕೇಂದ್ರ, ರೋಟರಿ ಸಿಲ್ಕ್ ಸಿಟಿ, ಶಾಂತಿ ನಿಕೇತನ ಸಮೂಹ ಶಿಕ್ಷಣ ಸಂಸ್ಥೆ, ಗ್ರೀನ್‌ ಡೈಮಂಡ್‌ ಸಂಸ್ಥೆ, ಸುಧಾ ಕ್ಲಿನಿಕ್‌, ಇಂಪನಾ ಹಾಸ್ಟಿಟಲ್‌ಗಳ ಸಹಯೋಗದಲ್ಲಿ ಮ್ಯಾರಥಾನ್‌ ಆಯೋಜನೆಯಾಗಿದೆ. ಮ್ಯಾರಥಾನ್‌ ಉದ್ಘಾಟನೆಗೆ ಜಿಪಂ ಸಿಇಒ ಇಕ್ರಂ, ಎಸ್ಪಿ ಅನೂಪ್‌ ಶೆಟ್ಟಿ ಆಗಮಿಸಲಿದ್ದಾರೆ ಎಂದರು.

ಓಟಗಳ ವರ್ಗ ಯಾವುವು?: ಎಂದಿನಂತೆ ಈ ಬಾರಿಯೂ ರೂರಲ್‌ 7 ಕಿಮೀ ಓಟ, ವಿದ್ಯಾರ್ಥಿ 7 ಕಿಮೀ ಓಟ, ಹಿರಿಯರ 7 ಕಿಮೀ ಓಟ, ರಾಕ್‌ 11 ಕಿಮೀ ಓಟ ಮತ್ತು ರೀಡಿಫೈನ್‌ 21.1 ಕಿಮೀ ಓಟ ಆಯೋಜಿಸಲಾಗಿದೆ. ರಾಮನಗರ ಹೊರ ವಲಯದ ಬಸವನಪುರದಲ್ಲಿ ಆರಂಭವಾಗುವ ಮ್ಯಾರಥಾನ್‌ ಓಟ, ವಡೇರಹಳ್ಳಿ, ರಾಂಪುರ ದೊಡ್ಡಿ, ಗೋಪಾಲಪುರ, ದಾಸೇಗೌಡನ ದೊಡ್ಡಿ ಮಾರ್ಗವಾಗಿ ಹುಣಸನಹಳ್ಳಿ ತಲುಪಿ ಮತ್ತೆ ವಾಪಸ್‌ ಅದೇ ಮಾರ್ಗದಲ್ಲಿ ಬಂದು ಬಸವನಪುರದಲ್ಲಿ ಅಂತ್ಯವಾಗಲಿದೆ ಎಂದರು. ಓಟದಲ್ಲಿ ಭಾಗವಹಿಸುವ ಎಲ್ಲರಿಗೂ ಪಾರಿತೋಷಕ, ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು ಎಂದು ವಿವರಿಸಿದರು.

ನೋಂದಣಿ ಹೇಗೆ?: ಆಸಕ್ತರು ರಾಮನಗರದ ಬಿಜಿಎಸ್‌ ಆಸ್ಪತ್ರೆಯ ಬಳಿಯ ಇರುವ ಯಲ್ಲೋ ಆಂಡರ್‌ ರೆಡ್‌ ಸರ್ವೀಸಸ್‌ ಪ್ರೈ.ಲಿ ನಲ್ಲಿ (ಮೊಬೈಲ್‌: 7676775624), ರಾಮನಗರ ಎಂ.ಜಿ.ರಸ್ತೆಯಲ್ಲಿರುವ ಶರ್ವರಿ ಜ್ಯೂಯೆಲರ್ (ಮೊ: 9242108418), ಕೆಂಪೇಗೌಡ ವೃತ್ತದಲ್ಲಿರುವ ಅಜಯ್‌ ಕಮ್ಯುನಿಕೇಷನ್‌ (ಮೊ: 080 27275624) ಇಲ್ಲಿ ನೋಂದಾಯಿಸಿಕೊಳ್ಳಬಹುದು. ನೋಂದಣಿ ಶುಲ್ಕ 400 ರೂ. ಟೀ ಶರ್ಟ್‌, ಬೆಳಗಿನ ಉಪಹಾರ, ಪಾರಿತೋಷಕ, ಪ್ರಮಾಣ ಪತ್ರ ಉಚಿತ ಎಂದು ಅವರು ವಿವರಿಸಿದರು.

ಫೌಂಡೇಷನ್‌ ಎಂಡಿ ಆನಂದ ಶಿವ, ರೋಟರಿ ಸಿಲ್ಕ್ ಸಿಟಿ ನಿಯೋಜಿತ ಅಧ್ಯಕ್ಷ ಎನ್‌.ರವಿಕುಮಾರ್‌, ಕೆಂಗಲ್‌ ಹನುಮಂತಯ್ಯ ನ್ಪೋಟ್ಸ್‌ ಕ್ಲಬ್‌ ಖಜಾಂಚಿ ಸತೀಷ್‌, ನಿರ್ದೇಶಕ ಡಾ.ನಟರಾಜ್‌, ಯುರೋ ಕಿಡ್ಸ್‌ ಮಾಲೀಕ ವಿಶ್ವಾನಂದ ರಾಜೇ ಅರಸ್‌ ಇದ್ದರು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.