ಮಾ.2ರಿಂದ ಆದಿಚುಂಚನಗಿರಿ ಜಾತ್ರಾ ಮಹೋತ್ಸವ


Team Udayavani, Feb 28, 2020, 5:11 PM IST

28-Febraury-24

ರಾಮನಗರ: ನಾಗಮಂಗಲದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಾತ್ರೋತ್ಸವ ಹಾಗೂ ಮಹಾ ಕುಂಬಾಭಿಷೇಕ ಮಹೋತ್ಸವ ಕಾರ್ಯಕ್ರಮ ಮಾ.2ರಿಂದ 10ರವರೆಗೆ ನಡೆಯಲಿದೆ ಎಂದು ಅರ್ಚಕರಹಳ್ಳಿ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ತಿಳಿಸಿದರು.

ನಗರದ ಶಾಖಾ ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿ ಚುಂಚನಗಿರಿ ಪೀಠಾಧ್ಯಕ್ಷರಾಗಿದ್ದ ಡಾ.ಬಾಲ ಗಂಗಾಧರನಾಥ ಮಹಾ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ರೂಪುಗೊಂಡು ಲೋಕಾರ್ಪಣೆಗೊಂಡ ಕಾಲಭೈರವೇಶ್ವರ ಸ್ವಾಮಿ ದೇವಾಲಯಕ್ಕೆ 12 ಸಂವತ್ಸರ ತುಂಬುತ್ತಿರುವ ಸುಸಂದರ್ಭದಲ್ಲಿ 72ನೇ ಪೀಠಾಧ್ಯಕ್ಷರಾದ ಡಾ.ನಿರ್ಮಲಾ ನಂದನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಈ ಬಾರಿಯ ಜಾತ್ರೋತ್ಸವ ಹಾಗೂ ಮಹಾ ಕುಂಬಾಭಿಷೇಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

ಮಾ.9ರ ಸೋಮವಾರ ಬೆಳಗಿನ ಜಾವ ಜಾತ್ರೋತ್ಸವದ ಪ್ರಮುಖ ಆಕರ್ಷಣೆಯಾದ ಗಂಗಾಧರೇಶ್ವರಸ್ವಾಮಿ ಮಹಾ ರಥೋತ್ಸವ ನಡೆಯಲಿದ್ದು, ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅನ್ನದಾನೇಶ್ವರನಾಥ ಸ್ವಾಮೀಜಿ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಬಿಡದಿಯ ಬಿಜಿಎಸ್‌ ಸೇವಾ ಸಮಿತಿ ಅಧ್ಯಕ್ಷ ಸಿ,ಉಮೇಶ್‌, ಜೆಡಿಎಸ… ಮುಖಂಡ ಹೋಟೆಲ್ ಉಮೇಶ…, ರೈತ ಮುಖಂಡ ಸಿ.ಪುಟ್ಟಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಚುಂಚನಗಿರಿಗೆ ವಿಶೇಷ ಬಸ್‌ ವ್ಯವಸ್ಥೆ : ನಾಗಮಂಗಲದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಾತ್ರೋತ್ಸವ-2020 ಹಾಗೂ ಮಹಾ ಕುಂಬಾಭಿಷೇಕ ಮಹೋತ್ಸವ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾದ ಗಂಗಾಧರೇಶ್ವರಸ್ವಾಮಿ ಮಹಾ ರಥೋತ್ಸಕ್ಕೆ ತೆರಳುವ ಭಕ್ತರ ಅನಕೂಲಕ್ಕಾಗಿ ರಾಮನಗರ ಸರ್ಕಾರಿ ಬಸ್‌ ನಿಲ್ದಾಣದಿಂದ ಮಾ.8ರ ಭಾನುವಾರ ಬೆಳಗ್ಗೆ
6ರಿಂದ ರಾತ್ರಿ 9.30 ಗಂಟೆಯವರೆಗೆ ಪ್ರತಿ 30 ನಿಮಿಷಕ್ಕೊಂದರಂತೆ ವಿಶೇಷ ಬಸ್‌ಗಳು ಸಂಚಾರ ಮಾಡಲಿವೆ. ಮಾ.9ರಂದು ಆದಿಚುಂಚನ ಗಿರಿಯಿಂದ ರಾಮನಗರಕ್ಕೆ ವಾಪಸ್‌ ಬರಲು ಕೂಡ ವಿಶೇಷ ಬಸ್‌ಗಳು ಸಂಚರಿಸಲಿವೆ. ಜಿಲ್ಲೆಯ ಭಕ್ತರು ಇದರ ಪ್ರಯೋಜನ ಪಡೆದು ಕೊಳ್ಳಬಹುದಾಗಿದೆ ಎಂದು ರಾಮನಗರ ಜಿಲ್ಲಾ ಸಾರಿಗೆ ಘಟಕದ ವ್ಯವಸ್ಥಾಪಕರು ತಿಳಿಸಿದರು.

ರಾಮನಗರದಲ್ಲಿ ಅರವಂಟಿಗೆ: ಆದಿಚುಂಚ ನಗಿರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾ.8ರಂದು ರಾಮನಗರ ಕೆಎಸ್‌ ಆರ್‌ ಟಿಸಿ ಬಸ್‌ ನಿಲ್ದಾಣದ ಆವರಣದಲ್ಲಿ ಬಿಜಿಎಸ್‌ ಭಕ್ತ ವೃಂದ ರಾಮನಗರ ತಾಲೂಕು, ಬಿಡದಿಯ ಬಿಜಿಎಸ್‌ ಸೇವಾ ಸಮಿತಿ ಹಾಗೂ ಕೆಎಸ್‌ ಆರ್‌ ಟಿಸಿ ನೌಕರರ ಬಳಗ ರಾಮನಗರ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ 6ನೇ ವರ್ಷದ ಅರವಂಟಿಗೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.