Ramanagara; ಬರ್ತ್ ಡೇ ಪಾರ್ಟಿ ಗಲಾಟೆ ಯುವಕನ ಹತ್ಯೆಯಲ್ಲಿ ಅಂತ್ಯ
ಕಾರ್ಪೋರೇಟರ್ ತೋಟದಲ್ಲಿ ಘಟನೆ...
Team Udayavani, Jan 29, 2024, 4:43 PM IST
ಕುದೂರು: ಹುಟ್ಟು ಹಬ್ಬ ಆಚರಿಸುವ ವೇಳೆ ನೆಡೆದ ಗಲಾಟೆಯಲ್ಲಿ ಯುವಕನೊಬ್ಬನನ್ನು ಮಾರಾಕಾಸ್ತ್ರಗಳಿಂದ ಕೂಚ್ಚಿ ಕೂಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೂಲೀಸ್ ಠಾಣೆ ವ್ಯಾಪ್ತಿಯ ತಿಮ್ಮೇಗೌಡನಪಾಳ್ಯದಲ್ಲಿ ನೆಡೆದಿದೆ.
ಕುದೂರು ಹೋಬಳಿಯ ತಿಮ್ಮೇಗೌಡನ ಪಾಳ್ಯದ ಕಾರ್ಪೋರೇಟರ್ ಮಂಜುನಾಥ್ ಅವರ ತೋಟದಲ್ಲಿ ಭಾನುವಾರ ರಾತ್ರಿ ಸ್ನೇಹಿತರೆಲ್ಲರೂ ಸೇರಿ ಬರ್ತ್ ಡೇ ಪಾರ್ಟಿ ಮಾಡಿದ್ದು, ಈ ವೇಳೆ ಗಲಾಟೆ ನೆಡೆದಿದೆ. ಅಶೋಕ್ (30) ಎಂಬಾತನಿಗೆ ದುಷ್ಕರ್ಮಿಗಳು ಮಾರಾಕಾಸ್ತ್ರ ಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಜ 21 ರಂದು ದಿಲೀಪ್ ಎಂಬುವವರ ಬರ್ತ್ ಡೇ ಆಗಿತ್ತು. ತಡವಾಗಿ ಪಾರ್ಟಿ ಮಾಡುತ್ತಿದ್ದರು.ತಡರಾತ್ರಿ ಕಂಠ ಪೂರ್ತಿ ಕುಡಿದು ಗಲಾಟೆ ಮಾಡಿಕೂಂಡ ಬಗ್ಗೆ ಸ್ಥಳೀಯರು 112ಕ್ಕೆ ಕರೆ ಮಾಡಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್, ಡಿವೈಎಸ್ ಪಿ ಪ್ರವೀಣ್ , ಸಿಪಿಐ ನವೀನ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ನೆಡೆಸಿದ್ದಾರೆ.ಈ ಸಂಬಂಧ ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಾರ್ಟಿಯಲ್ಲಿ ಭಾಗಿಯಾಗಿದ್ದವರೆಲ್ಲರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !