ಪ್ರತ್ಯೇಕ ತ್ಯಾಜ್ಯ ಸಂಗ್ರಹಿಸಲು ವಿಶೇಷ ವಾಹನ ಖರೀದಿ

ಮಿನಿ ಟಿಪ್ಪರ್‌ಗಳಲ್ಲಿ ಹಸಿ, ಒಣ ತ್ಯಾಜ್ಯಕ್ಕೆ ಪ್ರತ್ಯೇಕ ವಿಭಾಗ „ ಕಸ ವಿಂಗಡಿಸಿ ಕೊಡದಿದ್ಧರೆ ದಂಡ ಪಕ್ಕಾ

Team Udayavani, Feb 6, 2020, 5:04 PM IST

6-February-21

ರಾಮನಗರ: ನಗರದ ನಾಗರೀಕರಿಂದ ಹಸಿ, ಒಣ ತ್ಯಾಜ್ಯವನ್ನು ಕಡ್ಡಾಯವಾಗಿ ಬೇರ್ಪಡಿಸಿ ಸ್ವೀಕರಿಸಲು ನಗರಸಭೆ ಮುಂದಾಗಿದೆ. ಇದಕ್ಕಾಗಿಯೇ ವಿಶೇಷ ವಾಹನಗಳನ್ನು ನಗರಸಭೆ ಖರೀದಿಸಿದೆ. ನಗರಸಭೆಯ 14ನೇ ಹಣಕಾಸು ಯೋಜನೆಯಡಿಯಲ್ಲಿ ಮಿನಿ ಟಿಪ್ಪರ್‌ಗಳನ್ನು ಸುಮಾರು 29 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದ್ದು, ಸುಮಾರು 1 ಸಾವಿರ ಕೆ.ಜಿಗೂ ಹೆಚ್ಚು ಪ್ರಮಾಣದ ಹಸಿ ಮತ್ತು ಒಣ ತ್ಯಾಜ್ಯ ಸಂಗ್ರಹಿಸುವಷ್ಟು ಸಾಮರ್ಥ್ಯ ಈ ವಾಹನ ಗಳಿಗಿದೆ. 31 ವಾರ್ಡುಗಳಲ್ಲೂ ಕಸ ಸಂಗ್ರಹಿಸಲು ನಗರಸಭೆ ಬಳಿ 8 ವಾಹನಗಳು ಇದ್ದು, ಇದೀಗ ಮತ್ತೆ 7 ವಾಹನಗಳು ಸೇರ್ಪಡೆಯಾಗಲಿವೆ. ಎರಡು ವಾರ್ಡ್ಗಳಿಗೆ ತಲಾ ಒಂದು ವಾಹನ ದಿನನಿತ್ಯ ಸಂಚರಿಸಿ ಕಸ ಸಂಗ್ರಹಿಸಲು ಅಧಿಕಾರಿಗಳು ಉದ್ದೇಶಿಸಿದ್ದಾರೆ.

ಜಿಮ್‌ ಪೋರ್ಟಲ್‌ ಮೂಲಕ ಖರೀದಿ: ಸ್ವಚ್ಚ ಭಾರತ ಮಿಷನ್‌ ಅಡಿಯಲ್ಲಿ ವಾಹನಗಳ ಖರೀದಿಗೆ ನಗರಸಭೆ ಪ್ರಸ್ತಾವನೆ ಸಲ್ಲಿಸಿತ್ತು. ವಾಹನಗಳ ಖರೀದಿಗೆ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಒಪ್ಪಿಗೆ ಕೊಟ್ಟಿದ್ದರು. ಜಿಲ್ಲಾಡಳಿತದಿಂದ ತಾಂತ್ರಿಕ ಅನುಮೋದನೆ ಪಡೆ ದುಕೊಂಡ ನಂತರವೇ ವಾಹನ್ನ ಖರೀದಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಒಪ್ಪಿಗೆ ಸಿಕ್ಕ ನಂತರ ನಗರಸಭೆ ಸರ್ಕಾರ ಸ್ಥಾಪಿಸಿರುವ ಇ-ಮಾರ್ಕೆಟಿಂಗ್‌ ಪೋರ್ಟಲ್‌ನಲ್ಲಿ ವಾಹನಗಳ ಖರೀದಿಗೆ ಪೂರೈಕೆದಾರರನ್ನು ಆಹ್ವಾನಿಸಲಾಗಿತ್ತು. ಒಟ್ಟು 5 ಮಂದಿ ಮಾರಾಟಗಾರರು ಮುಂದೆ ಬಂದು ಕೊಟೇಷನ್‌ ಕೊಟ್ಟಿದ್ದರು. ಮಹಾರಾಷ್ಟ್ರದ ಸಂಸ್ಥೆಯೊಂದು ಅತಿ ಕಡಿಮೇ ದರ ನಮೂದಿಸಿದ್ದರಿಂದ ಅವರಿಂದ ಈ ವಾಹನಗಳನ್ನು ಖರೀದಿಸಲಾಗಿದೆ. ಸದರಿ ಮಾರಾಟಗಾರರು ದೇವನಹಳ್ಳಿ, ದೊಡ್ಡಬಳ್ಳಾಪುರಗಳಲ್ಲಿಯೂ ಇಂತಹ ವಾಹನಗಳನ್ನು ಮಾರಾಟ ಮಾಡಿದ್ದಾರೆ. ಇವೆಲ್ಲವನ್ನು ಪರಿಗಣಿಸಿ ವಾಹನಗಳನ್ನು ಖರೀದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ಲಾಸ್ಟಿಕ್‌ ತ್ಯಾಜ್ಯ ರಸ್ತೆಯಲ್ಲಿ ಬೀಸಾಡಬೇಡಿ: ಪರಿಸರ ರಕ್ಷಣೆ ಎಲ್ಲ ನಾಗರಿಕರ ಹೊಣೆ. ಪ್ಲಾಸ್ಟಿಕ್‌ ತ್ಯಾಜ್ಯವನ್ನು ಮನೆ, ಅಂಗಡಿ ಮಳಿಗೆಗಳ ಮಾಲೀಕರು ರಸ್ತೆ ಬದಿಯಲ್ಲಿ ಬೀಸಾಡದೆ ನಗರಸಭೆಯ ಕಸ ಸಂಗ್ರಹ ವಾಹನಕ್ಕೆ ಕೊಡಬೇಕು ಎಂದು ಪರಿಸರ ಅಧಿಕಾರಿ ರಾಜಶ್ರೀ ನಾಗರೀಕರಿಗೆ ಮನವಿ ಮಾಡಿದ್ದಾರೆ.

ಮನೆ, ಮನೆಯಿಂದ ಕಸ ಸಂಗ್ರಹಿಸುವಾಗಲೇ ಹಸಿ ಮತ್ತು ಒಣ ಕಸವನ್ನು ಸಂಗ್ರಹಿಸಲು ನೂತನ ವಾಹನಗಳು ಅನುಕೂಲವಾಗಿವೆ. ನಾಗರಿಕರು ಹಸಿ ಮತ್ತು ಒಣಕಸ ಬೇರ್ಪಡಿಸಿ ನೀಡಬೇಕು. ಹಸಿ ಕಸವನ್ನು ನಗರಸಭೆ ಗೊಬ್ಬರವನ್ನಾಗಿ ಪರಿವರ್ತಿಸುತ್ತಿದೆ. ಈ ಗೊಬ್ಬರವನ್ನು ಖರೀದಿಸಲು ಅನೇಕ ರೈತರು ಆಸಕ್ತಿ ತೋರಿಸಿದ್ದಾರೆ. ಸದ್ಯದಲ್ಲೇ ಈ ವಾಹನಗಳು ಸಾರ್ವಜನಿಕರ ಬಳಕೆಗೆ ನಿಯೋಜನೆಯಾಗಲಿವೆ.
ಬಿ.ಶುಭಾ, ಆಯುಕ್ತರು, ನಗರಸಭೆ

ಎಚ್ಚರಿಕೆ!
ಹಸಿ ಮತ್ತು ಒಣ ತ್ಯಾಜ್ಯವನ್ನು ಸಂಗ್ರಹಣೆಯ ಮೂಲದಲ್ಲೇ ಪ್ರತ್ಯೇಕಿಸಿ ಕೊಡಬೇಕಾದ್ದು ನಾಗರಿಕರ ಕರ್ತವ್ಯ. ಇದು ಕಾನೂನು ಕೂಡ. ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕಿಸಿ ಕೊಡದಿದ್ದರೆ, ನಗರ ಸಭೆ ಸಿಬ್ಬಂದಿ ತ್ಯಾಜ್ಯ ಸಂಗ್ರಹಿಸಲು ನಿರಾಕರಿಸಲು ಅಧಿಕಾರವಿದೆ.  ಸಹಕರಿಸದ ಕುಟುಂಬಗಳಿಗೆ ದಂಡ ವಿಧಿಸುವ ಅಧಿಕಾರವೂ ನಗರಸಭೆಗಿದೆ. ಪರಿಸರ ರಕ್ಷಣೆಗಾಗಿ ನಾಗರೀಕರು ಕಾನೂನು ಪಾಲಿಸಬೇಕಾಗಿದೆ.

●ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.