ಅಪೌಷ್ಟಿಕತೆ ಪತ್ತೆಗೆ ಅಭಿಯಾನ

ಜು.5ರಿಂದ ಜಿಲ್ಲಾದ್ಯಂತ ಅಭಿಯಾನ ಆರಂಭ: ಸಿಇಒ ಮುಲ್ಲೈ ಮುಹಿಲನ್‌

Team Udayavani, Jun 22, 2019, 4:44 PM IST

22–June-39

ರಾಮನಗರದಲ್ಲಿ ಅಪೌಷ್ಟಿಕ ಮಕ್ಕಳ ಮಾಹಿತಿ ಸಂಗ್ರಹಕ್ಕೆ ಬಳಸುವ ಸ್ನೇಹ ರಾಮನಗರ ಮೊಬೈಲ್ ಆ್ಯಪ್‌ ಬಗ್ಗೆ ತರಬೇತಿ ನೀಡುವ ಕಾರ್ಯಾಗಾರಕ್ಕೆ ಸಿಇಒ ಮುಲ್ಲೈ ಮುಹಿಲನ್‌ ಚಾಲನೆ ನೀಡಿದರು.

ರಾಮನಗರ: ಜುಲೈ 5ರಿಂದ 7ರವರೆಗೂ ಜಿಲ್ಲಾದ್ಯಂತ ಮಕ್ಕಳಲ್ಲಿ ಅಪೌಷ್ಟಿಕತೆ ಪತ್ತೆ ಹಚ್ಚಲು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ಮುಲ್ಲೈ ಮುಹಿಲನ್‌ ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಭವನದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನವಜಾತ ಶಿಶುವಿನಿಂದ 6 ವರ್ಷದ ಮಕ್ಕಳ ಅಪೌಷ್ಟಿಕತೆ ಪತ್ತೆ ಹಚ್ಚಲಾಗುವುದು. ಮಕ್ಕಳ ಮಾಹಿತಿಯನ್ನು ಸ್ನೇಹ ಮೊಬೈಲ್ ಆ್ಯಪ್‌ನಲ್ಲಿ ದಾಖಲಿಸಿಕೊಳ್ಳಲಾಗುವುದು ಎಂದರು.

ಅಭಿಯಾನ ಏಕೆ?: ರಾಷ್ಟ್ರೀಯ ಕುಟುಂಬ ಆರೋಗ್ಯ ಸರ್ವೆ (ಎನ್‌ಎಫ್ಎಚ್ಎಸ್‌) ಅವರು ಜಿಲ್ಲೆಯಲ್ಲಿ ಸ್ಯಾಂಪಲ್ ಸರ್ವೆ ಮಾಡಿ ಶೇ.22ರಷ್ಟು ಅಪೌಷ್ಟಿಕ ಮಕ್ಕಳಿದ್ದಾರೆ ಎಂದು ಅಂದಾಜಿಸಿದ್ದಾರೆ. ಜಿಲ್ಲೆಯಲ್ಲಿ ಸರ್ಕಾರಿ ಇಲಾಖೆಗಳು ಸಂಗ್ರಹವಾಗಿರುವ ಮಾಹಿತಿ ಪ್ರಕಾರ ಕೇವಲ ಶೇ.1ರಷ್ಟು ಮಾತ್ರ ಅಪೌಷ್ಟಿಕ ಮಕ್ಕಳಿದ್ದಾರೆ ಎಂಬ ದಾಖಲೆಯಿದೆ. ಎನ್‌ಎಫ್ಎಚ್ಎಸ್‌ ನೀಡಿರುವ ವರದಿಗೂ, ಜಿಲ್ಲೆಯಲ್ಲಿರುವ ವರದಿಗೂ ಅಜಗಜಾಂತರ ವ್ಯತ್ಯಾಸ ಇರುವುದರಿಂದ ಆಂದೋಲನದ ರೀತಿಯಲ್ಲಿ ಮಕ್ಕಳ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದೇವೆ ಎಂದರು.

5 ವಿಧಾನದಲ್ಲಿ ಮಾಹಿತಿ ಸಂಗ್ರಹ: ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಅಳೆಯಲು ಕೆಲವೊಂದು ಮಾನದಂಡಗಳಿವೆ. ಲಿಂಗ, ವಯಸ್ಸು, ವಯಸ್ಸಿಗೆ ತಕ್ಕ ಎತ್ತರ (ಸ್ಟಂಟಿಂಗ್‌), ಎತ್ತರಕ್ಕ ತಕ್ಕ ತೂಕ (ವೇಸ್ಟಿಂಗ್‌), ತೋಳಿನ ಸುತ್ತಳತೆಯನ್ನು ತೆಗೆದುಕೊಳ್ಳುತ್ತಾರೆ. ಹೀಗಾಗಿ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಪೋಷಕರು ಮತ್ತು ಪಾಲಕರು ಕರೆ ತರಬೇಕಾಗಿದೆ. ಮುಖ್ಯವಾಗಿ 0-3 ವರ್ಷದ ಮಕ್ಕಳ ತಪಾಸಣೆಯನ್ನು ಶೇ.100 ಯಶಸ್ವಿ ಮಾಡಬೇಕಾಗಿದೆ. ಯಾವ ಮಗುವು ತಪಾಸಣೆಯಿಂದ ಹೊರಗುಳಿಯಬಾರದು ಎಂದು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಲಾಗಿದೆ ಎಂದರು.

ಅಭಿಯಾನಕ್ಕಾಗಿ ಜಿಲ್ಲೆಯ 1543 ಅಂಗನವಾಡಿ ಕಾರ್ಯಕರ್ತೆಯರು, 802 ಆಶಾ ಕಾರ್ಯಕರ್ತೆಯರು, 208 ಎ.ಎನ್‌.ಎಂಗಳು ಹಾಗೂ 65 ವೈದ್ಯಾಧಿಕಾರಿಗಳನ್ನು ನಿಯೋಜಿಸಲಾಗುತ್ತಿದೆ. ಇವರೆಲ್ಲರಿಗೂ ಈಗಾಗಲೇ ಸೂಕ್ತ ತರಬೇತಿಯನ್ನು ನೀಡಲಾಗಿದೆ ಎಂದು ವಿವರಿಸಿದರು.

ನೋಡೆಲ್ ಅಧಿಕಾರಿಗಳ ನೇಮಕ: ಜಿಲ್ಲೆಯ ವೈದ್ಯಾಧಿಕಾರಿಗಳು, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾ ರಿಗಳು ತಮ್ಮ ವ್ಯಾಪ್ತಿಯಲ್ಲಿ ಅಭಿಯಾನದ ಮೇಲ್ವಿಚಾರಣೆ ನಡೆಸಲಿದ್ದಾರೆ. ಆರೋಗ್ಯ ಇಲಾಖೆ ವತಿಯಿಂದ ಪ್ರತಿ ತಾಲೂಕಿಗೂ ಒಬ್ಬರಂತೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಹಂತದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯ ಉಪನಿರ್ದೇಶಕರು, ಡಿಎಚ್ಒ ಮತ್ತು ಆರ್‌ಸಿಎಚ್ ಅಧಿಕಾರಿಗಳು ಮೇಲುಸ್ತುವಾರಿ ನಡೆಸುವರು ಎಂದು ಮಾಹಿತಿ ನೀಡಿದರು.

ಅಂಗನವಾಡಿ, ಆಶಾ ಕಾರ್ಯಕರ್ತರು ಮಕ್ಕಳ ಮಾಹಿತಿಯನ್ನು ಅಂಗನವಾಡಿ ಕೇಂದ್ರಗಳಲ್ಲಿ ಸಂಗ್ರಹಿಸಲಿದ್ದಾರೆ. ಪೋಷಕರು ಮತ್ತು ಪಾಲಕರು ತಮ್ಮ ಮಕ್ಕಳನ್ನು ನಿಗದಿತ ದಿನಾಂಕಗಳಂದು 0-6 ವಯೋ ಮಾನದ ಮಕ್ಕಳನ್ನು ಕರೆತಂದು, ಎಲ್ಲಾ ಮಾಹಿತಿಯನ್ನು ಕೊಟ್ಟು ಸಹಕರಿಸಬೇಕು ಎಂದು ಮನವಿ ಮಾಡಿದರು.

ಸ್ನೇಹ ಆ್ಯಪ್‌ ಬಿಡುಗಡೆ: ಸುದ್ದಿಗೋಷ್ಠಿಯ ನಂತರ ಅಪೌrಕತೆ ಅಭಿಯಾನಕ್ಕೆ ಎಂದು ಸಿದ್ಧವಾಗಿರುವ ಸ್ನೇಹ ಮೊಬೈಲ್ ಆ್ಯಪ್‌ನ್ನು ಸಿಇಒ ಮುಲ್ಲೈ ಮುಹಿಲನ್‌ ಬಿಡುಗಡೆ ಮಾಡಿದರು. ಆ್ಯಪ್‌ ಸಿದ್ಧಪಡಿಸಿರುವ ಸಿ-ಸ್ಟೆಪ್‌ ಕಂಪನಿಯ ಪ್ರತಿನಿಧಿಗಳು ಆ್ಯಪ್‌ ಬಳಸುವುದು ಹೇಗೆ ಎಂಬ ವಿಚಾರದಲ್ಲಿ ಸಭೆಯಲ್ಲಿ ನೆರೆದಿದ್ದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಿದರು. ಈ ವೇಳೆ ಡಿಎಚ್ಒ ಡಾ.ಅಮರ್‌ನಾಥ್‌, ಆರ್‌.ಸಿ.ಎಚ್ ಅಧಿಕಾರಿ ಡಾ.ಲಕ್ಷ್ಮೀಪತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.