Shocking: ಅಕ್ರಮ ಸಂಬಂಧ… ಒಂದೂವರೆ ವರ್ಷದ ಮಗುವನ್ನು ನದಿಗೆ ಎಸೆದ ಪಾಪಿ ತಾಯಿ
Team Udayavani, Dec 20, 2023, 10:55 AM IST
ರಾಮನಗರ: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಕ್ರೂರಿ ತಾಯಿಯೊಬ್ಬಳು ತನ್ನ ಒಂದೂವರೆ ವರ್ಷದ ಕಂದಮ್ಮನನ್ನು ನದಿಗೆ ಎಸೆದು ಹೋದ ಭೀಬತ್ಸ ಘಟನೆ ಬೆಳಕಿಗೆ ಬಂದಿದೆ.
ಚನ್ನಪಟ್ಟಣ ತಾಲೂಕಿನ ಬಾಣಗಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು ನದಿಗೆ ಎಸೆಯಲ್ಪಟ್ಟ ಕಂದಮ್ಮ ನೀರಿನಲ್ಲಿ ಉಸಿರುನಿಲ್ಲಿಸಿದೆ.
ಕಾಲಿಕೆರೆ ಗ್ರಾಮದ ಭಾಗ್ಯ ಎಂಬಾಕೆಯೇ ಈ ಹೀನ ಕೃತ್ಯ ಎಸಗಿರೋ ಮಹಿಳೆ, ಅಕ್ಕೂರು ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದು ತನಿಖೆ ನಡೆಸಿದ ವೇಳೆ ಅಕ್ರಮ ಸಂಬಂಧ ಬೆಳಕಿಗೆ ಬಂದಿದೆ.
ಚನ್ನಪಟ್ಟಣ ಹಾದು ಹೋಗುವ ಕಣ್ವ ನದಿಗೆ ಮಂಗಳವಾರ ತನ್ನ ಒಂದುವರೆ ವರ್ಷದ ಗಂಡು ಮಗುವನ್ನು ಎಸೆದಿರುವುದಾಗಿ ಮಹಿಳೆ ಹೇಳಿಕೊಂಡಿದ್ದು ಇಂದು ನದಿಯಲ್ಲಿ ಮಗುವಿನ ದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಡಿವೈಎಸ್ಪಿ ಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ಅಕ್ಕೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Deepfake: ಹೊಸ ತಂತ್ರಜ್ಞಾನದ ಬಗ್ಗೆ ಜಾಗರೂಕರಾಗಿರಿ… ಪ್ರಧಾನಿ ಮೋದಿ ಎಚ್ಚರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್