Ramanagara: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು; ಯಾರಿಗೂ ತಿಳಿಯದಂತೆ ಮಣ್ಣು!
Team Udayavani, Dec 6, 2023, 11:24 PM IST
Ramanagara, Forest death, electrocution, without anyone knowing!
ರಾಮನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿದ್ದು ಯಾರಿಗೂ ತಿಳಿಯದಂತೆ ರೈತನೊಬ್ಬ ಮಣ್ಣು ಮಾಡಿರುವ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪಿಳ್ಳೇಗೌಡ ಎಂಬ ರೈತ ರಾಗಿ ಬೆಳೆ ರಕ್ಷಣೆಗೆಂದು ವಿದ್ಯುತ್ ತಂತಿ ಬಿಟ್ಟಿದ್ದ ಎನ್ನಲಾಗಿದೆ. 15 ವರ್ಷದ ಗಂಡು ಕಾಡಾನೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದೆ. ಕಳೆದ 4 ದಿನಗಳ ಹಿಂದೆ ಜಮೀನು ದಾಟುವಾಗ ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.
ಆನೆ ಸಾವನ್ನಪ್ಪಿದ ಬಳಿಕ ಯಾರಿಗೂ ತಿಳಿಯದಂತೆ ಜಮೀನಿನಲ್ಲೇ ಮಣ್ಣು ಮಾಡಲಾಗಿತ್ತು. ಸ್ಥಳೀಯರು ಕಾಡಾನೆಯನ್ನು ಮಣ್ಣು ಮಾಡಿದ್ದ ವಿಷಯವನ್ನು ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಕಾಡಾನೆ ಮರಣೋತ್ತರ ಪರೀಕ್ಷೆ ಮಾಡಿ, ದಂತ ಕಸಿದು ಮಣ್ಣು ಮಾಡಿದ ರೈತನ ಮೇಲೆ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ