ವೃಷಭಾವತಿ ನೀರು ಶುದ್ಧೀಕರಣಕ್ಕೆ ಯೋಜನೆ
Team Udayavani, Jul 9, 2021, 8:50 PM IST
ರಾಮನಗರ: ಮಾನವ ಬಳಕೆ ಹೊರತುಪಡಿಸಿ ಕೃಷಿ ಸೇರಿ ದಂತೆ ಉಳಿದೆಲ್ಲ ಚಟುವಟಿಕೆಗಳಿಗೆ ಬಳಕೆಯಗುವಂತೆ ವೃಷಭಾವತಿ ನದಿ ನೀರು ಶುದ್ಧೀಕರಣಕ್ಕೆ 1500 ಕೋಟಿ ರೂ. ಯೋಜನೆಯನ್ನು ಇನ್ನು 5 ವರ್ಷಗಳಲ್ಲಿ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಪರಿಸರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.
ತಾಲೂಕಿನ ಬಿಡದಿ ಹೋಬಳಿ ಬೈರಮಂಗಲ ಕೆರೆವೀಕ್ಷಿಸಿದ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತ ನಾಡಿ, ಬೆಂಗಳೂರಿನಲ್ಲಿ ಉತ್ಪತ್ತಿಯಗುತ್ತಿರುವ ಶೇ.40 ರಷ್ಟು ಮಾಲಿನ್ಯ ನೀರು ವೃಷಭಾವತಿ ವ್ಯಾಲಿಯಲ್ಲಿ ಹರಿಯುತ್ತಿದೆ. ಇಲ್ಲಿ ಬಿಬಿಎಂಪಿಯವರು ಹಲವಾರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿದ್ದಾರೆ.
ಆದರೆ, ಬಹುತೇಕ ಘಟಕಗಳು ಕೆಲಸ ಮಾಡುತ್ತಿಲ್ಲ. ಇನ್ನು ಮೂರು ತಿಂಗಳಲ್ಲಿ ಈ ಘಟಕಗಳನ್ನು ಆರಂಭಿಸುವುದಾಗಿ ಬಿಬಿ ಎಂಪಿ ಹೇಳಿದೆ. ಆದರೆ, ನದಿ ನೀರು ಮೂರನೇ ಹಂತದ ಶುದ್ಧೀಕರಣವಾದರೆ, ಕುಡಿಯಲು ಹೊರತುಪಡಿಸಿ ಉಳಿದ ಅನೇಕ ಕೆಲಸಗಳಿಗೆ ಆ ನೀರು ಬಳಸಬಹುದಾಗಿದೆ. ಮೂರನೇ ಹಂತದ ಶುದ್ಧೀಕರಣಕ್ಕೆ ಪ್ರತಿ ಎಂ.ಎಲ್. ಡಿಗೆ ಸುಮಾರು 1 ಕೋಟಿ ರೂ. ವೆಚ್ಚ ತಗಲುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 1500 ಎಂ.ಎಲ್ .ಡಿ ನೀರನ್ನು ಶುದ್ಧೀಕರಿಸುವ ಯೋಜನೆ ರೂಪಿಸಬೇಕಾಗಿದೆ. ಒಂದೇ ಬಾರಿಗೆ ಈ ಮೊತ್ತದ ಹಣ ಹೂಡಿಕೆ ಮಾಡಲಾಗುವುದಿಲ್ಲ. ಹೀಗಾಗಿ 5 ವರ್ಷಗಳ ಅವಧಿಯಲ್ಲಿ ಯೋಜನೆ ಪೂರ್ಣಗೊಳಿಸುವ ಉದ್ದೇಶವಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ