ಬಿಡದಿ ಪಟ್ಟ ಣ ವ್ಯಾಪ್ತಿಯ ಸೋಂಕಿತರ ಪಟ್ಟಿ ಕೊಡಿ: ಶಾಸಕ
Team Udayavani, May 28, 2021, 5:02 PM IST
ರಾಮನಗರ: ಬಿಡದಿ ಪಟ್ಟಣ ವ್ಯಾಪ್ತಿಯಲ್ಲಿ ಸೋಂಕಿತರು ಎಷ್ಟು ಮಂದಿ ಇದ್ದಾರೆ. ಮೃತಪಟ್ಟವರೆಷ್ಟು ಎಂಬ ನಿಖರ ಮಾಹಿತಿ ಕಲೆ ಹಾಕಿ ವರದಿ ಕೊಡುವಂತೆ ಮಾಗಡಿ ಶಾಸಕ ಎ.ಮಂಜುನಾಥ್ ಬಿಡದಿ ಪುರಸಭೆ ಮುಖ್ಯಾಧಿಕಾರಿಗೆ ಸೂಚನೆ ನೀಡಿದರು.
ಬಿಡದಿ ಪಟ್ಟಣದ ಬಸವೇಶ್ವರ ಪ್ರೌಢಶಾಲಾ ಆವರಣದಲ್ಲಿ ಗುರುವಾರ ಕೋವಿಡ್ ಸೋಂಕು ನಿಯಂತ್ರ ಣದ ವಿಚಾರದಲ್ಲಿ ನಡೆದ ಬಿಡದಿ ಪುರಸಭೆ ಅಧಿಕಾರಿಗಳು, ಸದಸ್ಯರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರೋಗ್ಯ ಇಲಾಖೆ ನೀಡುತ್ತಿರುವ ಸೋಂಕಿತರು, ಮೃತಪಟ್ಟವರ ಸಂಖ್ಯೆ ಮತ್ತು ವಾಸ್ತವ ಸಂಖ್ಯೆಗಳಲ್ಲಿ ಭಾರೀ ವ್ಯತ್ಯಾಸವಿದೆ ಎಂಬ ಆರೋಪಗಳಿವೆ. ಇನ್ನು ಪುರಸಭೆ ವ್ಯಾಪ್ತಿಯಲ್ಲಿ ನಿರ್ಗ ತಿಕರಿಗೆ ಊಟ ಕೊಡಲು ದಾನಿಗಳು ಸಿಗದಿದ್ದರೆ ಪುರಸಭೆಯಿಂದಲೇ ಊಟ ಕೊಡಿ ಎಂದರು.
ಸುಳ್ಳು ಹೇಳುತ್ತಿದೆ: ಪುರಸಭೆ ಸದಸ್ಯ ಬಿ.ಎಂ. ರಮೇಶ್ಕುಮಾರ್ ಮಾತನಾಡಿ, ಕೋವಿಡ್ ಸೋಂಕಿತರ ವಿಚಾರದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸುಳ್ಳು ಅಂಕಿ ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಬಿಡದಿ ಪುರಸಭೆ ವ್ಯಾಪ್ತಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 454 ಎಂದು ಹೇಳುತ್ತಿದ್ದಾರೆ.
ವಾಸ್ತವದಲ್ಲಿ ಸೋಂಕಿತರ ಸಂಖ್ಯೆ ಸಾವಿರಾರು ಸಂಖ್ಯೆಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಡದಿ ಭಾಗದ ಸೋಂಕಿತರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸುತ್ತಿದ್ದಾರೆ. ಆದರೆ ಅಲ್ಲಿ ಸೂಕ್ತ ಚಿಕಿತ್ಸೆ ದೊರೆ ಯುತ್ತಿಲ್ಲ ಎಂದ ಅವರು, ಸೋಂಕಿತರು ಮತ್ತು ಅವರ ಕುಟುಂಬ ವರ್ಗ ಆರೋಪಿಸುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು.
100 ಹಾಸಿಗೆ ಕೋವಿಡ್ ಕೇರ್ ಸೆಂಟರ್: ರಾಮನಗರ ತಹಶೀಲ್ದಾರ್ ನರಸಿಂಹಮೂರ್ತಿ ಮಾತನಾಡಿ ಗೊಲ್ಲಹಳ್ಳಿಯಲ್ಲಿ 100 ಹಾಸಿಗೆ ಕೋವಿಡ್ ಕೇರ್ ಕೇಂದ್ರ ಸಿದ್ಧವಾಗಿದೆ. ಅಗತ್ಯ ಬಿದ್ದರೆ ಇನ್ನೂ ಹೆಚ್ಚಿನ ಬೆಡ್ವುಳ್ಳ ಕೇಂದ್ರ ತೆರೆಯಲಾಗುವುದು ಎಂದು ಸಭೆಗೆ ಮಾಹಿತಿ ಕೊಟ್ಟರು. ಸಭೆಯಲ್ಲಿ ಪುರಸಭೆ ಅಧ್ಯಕ್ಷೆ ಸರಸ್ವತಿ ರಮೇಶ್, ಉಪಾಧ್ಯಕ್ಷ ಸಿ.ಲೋಕೇಶ್, ಮುಖ್ಯಾಧಿಕಾರಿ ಆರ್. ರಮೇಶ್, ಬಿಡದಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಘವೇಂದ್ರ, ಗ್ರಾಮಾಂತರ ಸಿಪಿಐ ಪ್ರಕಾಶ್, ಪುರಸಭೆ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ