ಶಾರ್ಟ್ ಸರ್ಕ್ಯೂಟ್: 2 ಎಕರೆ ಜಾಗದಲ್ಲಿ ಬೆಳೆದ ಕಬ್ಬು, ತೆಂಗು ಬೆಳೆಗಳು ಬೆಂಕಿಗಾಹುತಿ
Team Udayavani, Aug 2, 2023, 9:58 AM IST
ರಾಮನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಹೊತ್ತಿಕೊಂಡ ಬೆಂಕಿಯಿಂದ ರೈತನಿಗೆ ಸೇರಿದ ಸುಮಾರು ಎರಡು ಎಕರೆ ಜಾಗದಲ್ಲಿ ಬೆಳೆದಿದ್ದ ಕಬ್ಬು, ತೆಂಗಿನ ಬೆಳೆಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಅರಳಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಗ್ರಾಮದ ನಾಗೇಂದ್ರಗೌಡ ಎಂಬುವವರಿಗೆ ಸೇರಿದ ಕಬ್ಬನ ತೋಟ ಬೆಂಕಿಗಾಹುತಿಯಾಗಿದೆ ಬಳಿಕ ಬೆಂಕಿಯ ಕೆನ್ನಾಲಿಗೆ ತೆಂಗಿನ ಮರಗಳನ್ನೂ ಸುಟ್ಟು ಹಾಕಿವೆ.
ಘಟನೆಗೆ ಸಂಬಂಧಿಸಿ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ: ಅಧ್ಯಕ್ಷೀಯ ಚುನಾವಣೆ ಮೇಲೆ ಕಣ್ಣಿಟ್ಟ ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಗೆ ಶಾಕ್ ಮೇಲೆ ಶಾಕ್!