Ramanagara; ವಂದೇ ಭಾರತ್ ರೈಲಿಗೆ ಮತ್ತೆ ಕಲ್ಲೆಸೆತ
Team Udayavani, Jul 26, 2023, 4:01 PM IST
ರಾಮನಗರ: ಪಟ್ಟಣದ ಹೊರವಲಯದಲ್ಲಿ ವಂದೇ ಭಾರತ್ ರೈಲಿಗೆ ಮತ್ತೆ ಕಲ್ಲೆಸೆತ ನಡೆಸಲಾಗಿದೆ. ಎರಡನೇ ಬಾರಿಗೆ ನಡೆಯುತ್ತಿರುವ ಘಟನೆ ಇದಾಗಿದ್ದು, ಸ್ಥಳಕ್ಕೆ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಕೆಲವು ದಿನಗಳ ಹಿಂದೆ ವಂದೇ ಭಾರತ್ ರೈಲಿಗೆ ಕಲ್ಲು ಎಸೆದಿದ್ದ ದುಷ್ಕರ್ಮಿಗಳು ಘಟನೆ ಮಾಸುವ ಮುನ್ನವೇ ಬುಧವಾರ ಮತ್ತೆ ಕಲ್ಲೆಸೆತ ನಡೆಸಿ ಕಿಡಿಗೇಡಿತನ ತೋರಿದ್ದಾರೆ.
ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಶೀಲಿಸಿ ಕಿಡಗೇಡಿಗಳ ಪತ್ತೆಗೆ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳದ ಸುತ್ತಾಮುತ್ತಲಿನ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.