ರಾಮನಗರ: ಕೋವಿಡ್ ಗೆ ಮೂವರು ವಾರಿಯರ್ಸ್ ಬಲಿ

ಇಬ್ಬರು ಸರ್ಕಾರಿ ವೈದ್ಯರು, ಒಬ್ಬ ಪೊಲೀಸ್‌ ಪೇದೆ ,ಕುಟುಂಬಗಳಿಗೆ ತಲುಪಬೇಕಾಗಿದೆ ಪರಿಹಾರ

Team Udayavani, Oct 20, 2020, 2:43 PM IST

rn-tdy-2

ರಾಮನಗರದಲ್ಲಿಕೋವಿಡ್‌ 19 ಸೋಂಕಿನಿಂದ ಮೃತ ಪಟ್ಟ ಪೊಲೀಸ್‌ ಎ.ಎಸ್‌.ಐ ಅವರಿಗೆ ಎಸ್ಪಿ ಎಸ್‌.ಗಿರೀಶ್‌ ಅವರಿಂದ ಅಂತಿಮ ನಮನ.( ಸಂಗ್ರಹ ಚಿತ್ರ)

ರಾಮನಗರ: ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿಗೆ ಮೂವರು ಕೋವಿಡ್‌ ವಾರಿಯರ್ ಮೃತಪಟ್ಟಿದ್ದು, ವಾರಿಯರ್ಸ್ ಗೆ ಸರ್ಕಾರ ಘೋಷಿಸಿರುವ ಪರಿಹಾರದ ಮೊತ್ತ ಮೃತರ ಕುಟುಂಬವನ್ನು ಇನ್ನಷ್ಟೇ ತಲುಪಬೇಕಾಗಿದೆ.

ವಾರಿಯರ್ಸ್ ಗೆ 50 ಲಕ್ಷ ರೂ. ವರೆಗೆ ಪರಿಹಾರ: ಇಬ್ಬರು ಸರ್ಕಾರಿ ವೈದ್ಯರು, ಒಬ್ಬ ಪೊಲೀಸ್‌ ಪೇದೆ ಸೇರಿ ಜಿಲ್ಲೆಯಲ್ಲಿ ಮೂವರು ಕೋವಿಡ್‌ ವಾರಿಯರ್ಸ್ ಮೃತ ಪಟ್ಟಿದ್ದಾರೆ. ಕೋವಿಡ್‌ ವಾರಿಯರ್ಸ್ ಗೆ ಸಿಗಬೇಕಾದ ಪರಿಹಾರದ ಮೊತ್ತಕ್ಕೆ ಸಂಬಂಧಿಸಿದ ಇಲಾಖೆಗಳು ಅರ್ಜಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿದ್ದು, ಇನ್ನಷ್ಟೇ ಈ ಕುಟುಂಬಗಳಿಗೆ ಪರಿಹಾರ ತಲುಪಬೇಕಾಗಿದೆ. ಕನಕಪುರ ತಾಲೂಕಿನಲ್ಲಿ ವೈದ್ಯಾಧಿಕಾರಿಯಾಗಿದ್ದ ಡಾ. ಮಂಜುನಾಥ್‌ ಮತ್ತು ಚನ್ನಪಟ್ಟಣ ತಾಲೂಕಿನಲ್ಲಿ ಮಕ್ಕಳ ತಜ್ಞರಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಮಂಜುನಾಥ್‌ ಕೋವಿಡ್‌ ಸೋಂಕಿಗೆ ಬಲಿಯಾಗಿದ್ದಾರೆ. ಇಬ್ಬರೂ ವೈದ್ಯರ ಕುಟುಂಬಗಳಿಗೆ ಸರ್ಕಾರ ತಲಾ 50 ಲಕ್ಷ ರೂ. ಪರಿಹಾರ ನೀಡುವ ಬಗ್ಗೆ ಸಲ್ಲಿಸಿದ ಅರ್ಜಿಗಳು ವಿಲೇವಾರಿಗೆ ಸಿದ್ಧವಾಗಿದ್ದು, ಕೆಲವೇ ದಿನಗಳಲ್ಲಿ ಪರಿಹಾರದ ಮೊತ್ತ ಈ ಕುಟುಂಬಗಳ ಕೈ ಸೇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಮನಗರ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ಶಿವಲಿಂಗಯ್ಯ ಎಂಬುವರು ಸಹ ಕೋವಿಡ್‌-19 ಸೋಂಕಿನಿಂದ ಮೃತ ಪಟ್ಟಿದ್ದು, ಇವರಿಗೂ ಸರ್ಕಾರ 30 ಲಕ್ಷ ರೂ. ಪರಿಹಾರ ಘೋಷಿಸಿದೆ. ಇವರ ಕುಟುಂಬ ಸದಸ್ಯರು ನೀಡಿದ ಅರ್ಜಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಪರಿಹಾರ ಇನ್ನು ತಲುಪಬೇಕಾಗಿದೆ.

ಶಿಕ್ಷಕರಿಗಿಲ್ಲ ವಾರಿಯರ್ ಪರಿಹಾರ: ಜಿಲ್ಲೆಯಲ್ಲಿ ಇಲ್ಲಿಯವರೆಗೆ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೋವಿಡ್‌-19 ಸೋಂಕಿನಿಂದ ಮೃತಪಟ್ಟಿದ್ದಾರೆ. ಖಾಸಗಿ ಅನುದಾನ ರಹಿತ ಶಾಲೆ ಮತ್ತು ಅನುದಾನಿತ ಶಾಲೆಯ ತಲಾ ಒಬ್ಬ ಶಿಕ್ಷಕರು ಸೋಂಕಿಗೆ ಬಲಿಯಾಗಿದ್ದಾರೆ. ಆದರೆ ಇವರ್ಯಾರು ಕೋವಿಡ್‌ವಾರಿಯರ್ ಅಡಿಯಲ್ಲಿ ಬರದ ಕಾರಣ ಇವರಿಗೆ ಪರಿಹಾರದ ಹಣ ಸಿಗುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ಮೃತ ಪಟ್ಟ ಶಿಕ್ಷಕರಿಗೆ ಇಲಾಖೆಯಿಂದ ದೊರಕಬೇಕಾದ ವಿಮೆ ಪರಿಹಾರದ ಮೊತ್ತ ಮತ್ತು ಇತರ ಸೌಲಭ್ಯವನ್ನು ಶೀಘ್ರದಲ್ಲೇ ಕೊಡಿಸುವ ಪ್ರಾಮಾಣಿಕ ಪ್ರಯತ್ನ ನಡೆದಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್‌ ಪರೀಕ್ಷೆಗೆ ಒಳಗಾದವರೆಷ್ಟು? :  ಜಿಲ್ಲೆಯಲ್ಲಿ ಇಲ್ಲಿಯವರೆಗೆ61,302 ಮಂದಿಗೆಕೋವಿಡ್‌ ಪರೀಕ್ಷೆ ಮಾಡಲಾಗಿದೆ. (ಅ.18ಕ್ಕೆ ಇದ್ದಂತೆ) ಈ ಪೈಕಿ 6,866 ಮಂದಿಗೆ ಪಾಸಿಟಿವ್‌,53,574 ಮಂದಿಗೆ ನೆಗೆಟಿವ್‌ ವರದಿ ಬಂದಿದೆ. ಪಾಸಿಟಿವ್‌ ಪೈಕಿ6,276 ಮಂದಿ ಗುಣಮುಖರಾಗಿದ್ದು,61 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸದ್ಯ801 ಸಕ್ರಿಯ ಸೋಂಕಿತರಿದ್ದಾರೆ. ಸಕ್ರಿಯ ಸೋಂಕಿತರ ಪೈಕಿಕೋವಿಡ್‌ ರೆಫ‌ರಲ್‌ ಆಸ್ಪತ್ರೆಯಲ್ಲಿ44,ಕೆಂಗೇರಿ ಬಳಿಯ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ 198 ಮಂದಿ,ಕನಕಪುರದ ದಯಾನಂದ ಆಸ್ಪತ್ರೆ ಮತ್ತು ರಾಮನಗರದ ರಾಮಕೃಷ್ಣ ಆಸ್ಪತ್ರೆಯಲ್ಲಿ 58 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.