ದಳ ಭದ್ರಕೋಟೆಗೆ ಲಗ್ಗೆ ಇಡಲು ಕೈ ಕಸರತ್ತು  


Team Udayavani, Mar 15, 2023, 3:37 PM IST

tdy-22

ರಾಮನಗರ: ಜಿಲ್ಲೆಯಲ್ಲಿ ಚುನಾವಣಾ ರಣಕಣ ರಂಗೇರುತ್ತಿದೆ. ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಮೂಲಕ ಅಖಾಡಕ್ಕಿಳಿದಿದ್ದರೆ ಬಿಜೆಪಿ ಮಾತ್ರ ಮುಗುಮ್ಮಾಗಿದ್ದು ಅಭ್ಯರ್ಥಿ ಯಾರೆಂದು ಘೋಷಣೆ ಮಾಡಿಲ್ಲ, ಇದು ಸಾಮಾನ್ಯವಾಗಿಯೇ ಆಕಾಂಕ್ಷಿತರ ಪಟ್ಟಿ ಹೆಚ್ಚಳಕ್ಕೆ ಕಾರಣವಾಗಿದೆ. ಇದೆಲ್ಲವೂ ಬಣ ರಾಜಕೀಯಕ್ಕೆ ಎಡೆಮಾಡಿಕೊಟ್ಟಿದ್ದು ಹುಚ್ಚನ ಮದುವೇಲಿ ಉಂಡೋನೆ ಜಾಣ ಎನ್ನುವಂತಾಗಿದೆ ಇಂದಿನ ಬಿಜೆಪಿ ಸ್ಥಿತಿ.

ರಾಮನಗರ ಅಂದ್ರೇನೆ ಚುನಾವಣಾ ರಣಕಣ ರಾಜ್ಯದ ಗಮನ ಸೆಳೆಯುತ್ತದೆ. ಇಲ್ಲಿ ಗೆದ್ದವರಿಗೆ ಮುಖ್ಯ ಮಂತ್ರಿ ಯೋಗ ಸುಲಭ ಎನ್ನುವ ನಂಬಿಕೆ ಹೆಚ್ಚಾಗಿದ್ದು, ಕ್ಷೇತ್ರದಲ್ಲಿ ಟಿಕೆಟ್‌ ಆಕಾಂಕ್ಷಿತರು ಸಹಜವಾಗಿಯೇ ಹೆಚ್ಚಾಗಿದ್ದಾರೆ. ಇಲ್ಲಿ ಕೆಂಗಲ್‌ ಹನುಮಂತಯ್ಯರವರ ನಂತರ ಮಾಜಿ ಪ್ರಧಾನಿ ದೇವೇಗೌಡರು ಇಲ್ಲಿ ರಾಜಕೀಯ ಪುನರ್ಜನ್ಮದ ಜೊತೆಗೆ ಮುಖ್ಯಮಂತ್ರಿಯಾಗಿ ಪಿಎಂ ಕೂಡ ಆಗಿದ್ದರು, ಬಳಿಕ ಮಾಜಿ ಸಿಎಂ ಕುಮಾರಸ್ವಾಮಿ ಪ್ರಥಮ ಭಾರಿಗೆ ಶಾಸಕರಾಗಿ ಮುಖ್ಯಮಂತ್ರಿಯಾಗಿದ್ದು, ಕ್ಷೇತ್ರದ ಮಹಿಮೆ ಹೆಚ್ಚಾಗಲು ಕಾರಣವಾಗಿದೆ. ಅದಕ್ಕಾಗಿ ಕಾಂಗ್ರೆಸ್‌ ನಿಂದ ಮುಖ್ಯಮಂತ್ರಿ ರೇಸ್‌ನಲ್ಲಿರುವ ಡಿ.ಕೆ. ಶಿವಕುಮಾರ್‌ ಇಲ್ಲಿಂದಲೇ ಸ್ಪರ್ಧಿಸುತ್ತಾರೆಂಬ ಸುದ್ದಿ ಹರಿದಾಡಿತ್ತು ಬಳಿಕ ಅದನ್ನ ಕೈಬಿಡಲಾಗಿದೆ.

ಇನ್ನು ಜೆಡಿಎಸ್‌ ನಿಂದ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖೀಲ್‌ ಕುಮಾರಸ್ವಾಮಿ ಅಭ್ಯರ್ಥಿ , ಕಾಂಗ್ರೆಸ್‌ನಿಂದ ಡಿ.ಕೆ.ಬ್ರದರ್ ಕಟ್ಟಾ ಬೆಂಬಲಿಗ ಜಿ.ಪಂ ಮಾಜಿ ಅಧ್ಯಕ್ಷ ಇಕ್ಬಾಲ್‌ ಹುಸೇನ್‌ ಅಭ್ಯರ್ಥಿಯಾಗಿ ಘೋಷಣೆಯಾಗುವುದು ಬಹುತೇಕ ನಿಶ್ಚಿತವಾಗಿದೆ. ಇನ್ನು ಬಿಜೆಪಿಯಲ್ಲಿ ಆಕಾಂಕ್ಷಿತರ ಪಟ್ಟಿ ದೊಡ್ಡದಾಗಿದ್ದು, ಯಾರು ಹಿತವರು ಎಂಬ ಪ್ರಶ್ನೆ ಎದುರಾಗಿದೆ.

ದಿನಕ್ಕೊಂದು ಬಿಜೆಪಿ ಅಭ್ಯರ್ಥಿಗಳ ಹೆಸರು: ಇನ್ನು ದಿನಕ್ಕೊಂದು ಹೆಸರು ಬಿಜೆಪಿ ಅಭ್ಯರ್ಥಿಯಾಗಿ ಹೊರಬರುತ್ತಿದೆ, ಮೊದಲಿಗೆ ಕರ್ನಾಟಕ ರಾಜ್ಯ ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷ ಗೌತಮ್‌ ಗೌಡ ಹೆಸರು ಹರಿದಾಡುತ್ತಿದೆಯಾದರೂ, ಗ್ರೇಟರ್‌ ಬೆಂಗಳೂರು ಬಿಡದಿ ಸ್ಮಾರ್ಟ್‌ ಸಿಟಿ ಅಧ್ಯಕ್ಷ ವರದರಾಜ್‌ ಗೌಡ, ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಪ್ರಭಾವಿಯಾಗಿದ್ದು, ಅವರೇ ನಮ್ಮ ಎಂಎಲ್‌ಎ ಎಂಬ ಕರಪತ್ರಗಳ ಮೂಲಕ ಘೋಷಣೆ ಆರಂಭವಾಗಿದೆ. ಸಿಪಿವೈ ಅವರ ಕಟ್ಟಾ ಬೆಂಬಲಿಗ ಗೋವಿಂದರಾಜು ತೆರೆಮರೆಯಲ್ಲಿ ಪ್ರಯತ್ನ ನಡೆಸಿದ್ದಾರೆ. ನಂತರ ಬೆಂಗಳೂರಿನ ವೈದ್ಯೆ ಪುಣ್ಯವತಿ ಸದ್ದಿಲ್ಲದೆ ರಾಜ್ಯ ನಾಯಕರ ಸಮ್ಮುಖದಲ್ಲಿಯೇ ಬಿಜೆಪಿ ಸೇರ್ಪಡೆಗೊಂಡಿದ್ದು, ಟಿಕೆಟ್‌ಗಾಗಿ ಇನ್ನಿಲ್ಲದ ಕಸರತ್ತು ನಡೆಸಿ ತಮ್ಮ ಬೆಂಬಲಿಗರ ಮೂಲಕ ಪ್ರಭಾವ ಬೀರುತ್ತಿದ್ದಾರೆ.

ಇನ್ನು ತಿಗಳ ಸಮುದಾಯವೇ ಬೆನ್ನಿಗೆ ನಿಲ್ಲುವ ಮೂಲಕ ತಮ್ಮ ಸಮುದಾಯಕ್ಕೆ ಆದ್ಯತೆ ನೀಡಿ ರಾಜಕೀಯವಾಗಿ ಸ್ಥಾನಮಾನ ಒದಗಿಸಿಕೊಡಿ ಅದಕ್ಕಾಗಿ ಎಂಎಲ್‌ಎ ಟಿಕೆಟ್‌ ಬೇಕೇ ಬೇಕು ಎಂಬ ಹಕ್ಕೊತ್ತಾಯ ಮಂಡಿಸಿದ್ದು ಡಿ.ನರೇಂದ್ರ ಪಾಲಿಗೆ ಸಿಹಿ ಜೇನಾಗಿದೆ. ಇದೆಲ್ಲದರ ನಡುವೆ ಬಿಜೆಪಿ ತಾ.ಮಾಜಿ ಅಧ್ಯಕ್ಷ ಪ್ರವೀಣ್‌ ಗೌಡ ಪ್ರಬಲ ಆಕಾಂಕ್ಷಿಗಳಲ್ಲೊಬ್ಬರಾಗಿದ್ದು, ಪ್ರಾಧಿಕಾರದ ಅಧ್ಯಕ್ಷ ಶಿವಮಾದು ಸೇರಿ ಹಲವು ಮಂದಿ ಮುಂಚೂಣಿಯಲ್ಲಿದ್ದಾರೆ. ಕ್ಷೇತ್ರದಲ್ಲಿ ಓರ್ವ ಪ್ರಧಾನಿ ಮೂವರು ಮುಖ್ಯಮಂತ್ರಿಗಳನ್ನು ಕೊಡುಗೆ ನೀಡಿರುವ ಕ್ಷೇತ್ರದಲ್ಲಿ ಅದಿಪತ್ಯಕ್ಕಾಗಿ ಕಸರತ್ತು ಸಹಜವಾಗಿದ್ದು, ಬಿಜೆಪಿ ಅಭ್ಯರ್ಥಿ ಘೋಷಣೆ ಬಳಿಕವಷ್ಟೇ ರೇಷ್ಮೇನಗರಿ ರಾಮನಗರದ ಸ್ಪಷ್ಠ ಚಿತ್ರಣ ದೊರಕಲಿದೆ.

ಡಿ.ಕೆ.ಸುರೇಶ್‌ ಸ್ಪರ್ಧೆ ! : ರಾಮನಗರ ವಿಧಾನಸಭಾ ಕ್ಷೇತ್ರದಿಂದ ಡಿ.ಕೆ. ಸುರೇಶ್‌ ಸ್ಪರ್ಧೆ ಬಗ್ಗೆ ಹೈಮಾಂಡ್‌ ಒಲವು ತೋರಿದ್ದು, ಕೆಪಿಸಿಸಿಗೆ ಸೂಚಿಸಿದೆ ಎನ್ನಲಾಗಿದ್ದು, ನಿಖೀಲ್‌ ವಿರುದ್ಧ ಪ್ರಬಲ ಪೈಪೋಟಿ ನೀಡುವ ಮೂಲಕ ಎಚ್‌ ಡಿಕೆಯನ್ನು ಜಿಲ್ಲೆಯಲ್ಲಿ ಕಟ್ಟಿಹಾಕುವ ಕೆಲಸಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ಅಧಿಕೃತ ಘೋಷಣೆಯಾಗದಿದ್ದರೂ ಊಹಾಪೋಹ ದಿಂದಾಗಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಉತ್ಸಾಹದ ಚಿಲುಮೆ ಹೆಚ್ಚಾಗಿದ್ದು, ಡಿಕೆ ಸುರೇಶ್‌ ಸ್ಪರ್ಧೆಗೆ ಒತ್ತಡ ಏರಲು ಮುಖಂಡರು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಗೇನಾದರೂ ಆದರೆ, ರಾಮನಗರ ವಿಧಾನಸಭಾ ಕ್ಷೇತ್ರ ಹೈವೋಲ್ಟೆàಜ್‌ ಕ್ಷೇತ್ರವಾಗುವುದರಲ್ಲಿ ಅಚ್ಚರಿಯಿಲ್ಲ.

-ಎಂ.ಎಚ್‌.ಪ್ರಕಾಶ

ಟಾಪ್ ನ್ಯೂಸ್

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.