ರೇಷ್ಮೆ ನಗರಿಯಲ್ಲಿ ರಂಜಾನ್‌ ಸಂಭ್ರಮ


Team Udayavani, Jun 6, 2019, 11:17 AM IST

ramanagar-tdy-1..

ರಾಮನಗರದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ರಂಜಾನ್‌ ಪ್ರಯುಕ್ತ ಕುಮಾರಣ್ಣ ಅಭಿಮಾನಿ ಬಳಗ ಮುಸಲ್ಮಾನ ಬಂಧುಗಳಿಗೆ ಸಸಿಗಳನ್ನು ವಿತರಿಸಿ ಶುಭಾಶಯ ಕೋರಿತು.

ರಾಮನಗರ: ಜಿಲ್ಲಾದ್ಯಂತ ಬುಧವಾರ ಮುಸ್ಲಿಂ ಸಮುದಾಯದವರು ಶ್ರದ್ಧೆ, ಭಕ್ತಿ, ಸಡಗರದಿಂದ ರಂಜಾನ್‌ ಹಬ್ಬವನ್ನು ಆಚರಿಸಿದರು.

ಮನುಷ್ಯನ ಮನಸ್ಸಿನಲ್ಲಿ ಹುದುಗಿರುವ ದ್ವೇಷ ಭಾವನೆ ಕಡಿಮೆ ಮಾಡಿ, ಪ್ರೀತಿ ಹುಟ್ಟಿಸುವ ಪವಿತ್ರ ರಂಜಾನ್‌ ಹಬ್ಬವನ್ನು ಜಿಲ್ಲೆಯ ನಾಲ್ಕೂ ತಾಲೂಕು ಕೇಂದ್ರಗಳು, ಗ್ರಾಮೀಣ ಭಾಗಗಳಲ್ಲಿಯೂ ಆಚರಿಸಲಾಯಿತು.

ನಮಾಜ್‌: ರೇಷ್ಮೆ ನಗರಿ ರಾಮನಗರದಲ್ಲಿ ಬುಧವಾರ ಬೆಳಗ್ಗೆ ನಗರದ ಮಿನಿ ವಿಧಾನಸೌಧದ ಎದುರಿನಲ್ಲಿರುವ ಈದ್ಗಾ ಮೈದಾನಕ್ಕೆ ತಂಡೋಪತಂಡವಾಗಿ ಆಗಮಿಸಿದ ಸಾವಿರಾರು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಸಂಚಾರ ಬದಲಾಗಿತ್ತು:ಎಂದಿನಂತೆ ಈದ್ಗಾ ಮೈದಾ ನದಲ್ಲಿ ಸ್ಥಳಾವಕಾಶದ ಕೊರತೆ ಎದುರಾದ ಕಾರಣ ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆಯಲ್ಲಿಯೂ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಲು ಸ್ಥಳೀಯ ಆಡಳಿತ ಅವಕಾಶ ಮಾಡಿಕೊಟ್ಟಿತ್ತು. ಹೆದ್ದಾರಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿತ್ತು.

ಉಪವಾಸಕ್ಕೆ ಪ್ರಾಮುಖ್ಯತೆ: ಎಲ್ಲಾ ಧರ್ಮದಲ್ಲಿಯೂ ಉಪವಾಸಕ್ಕೆ ಪ್ರಾಮುಖ್ಯತೆ ಇದೆ. ದೇಹಾರೋಗ್ಯ ಉತ್ತಮ ಪಡಿಸಿಕೊಳ್ಳಲು ಹಾಗೂ ಸರಳ ಜೀÊನಕ್ಕೆ ಉಪವಾಸ ಪ್ರೋತ್ಸಾಹ ನೀಡುತ್ತದೆ. ರಂಜಾನ್‌ ಮಾಸದಲ್ಲಿ ಬಹುತೇಕ ಮುಸ್ಲಿಮರು ಬಡವ ಬಲ್ಲಿದ ಎನ್ನದೆ ಉಪವಾಸ ಆಚರಿಸುತ್ತಾರೆ. ತಿಂಗಳ ಕಾಲ ಶ್ರದ್ಧಾ ಭಕ್ತಿಯ ಉಪವಾಸ ನಡೆಸಿದ ನಂತರ ಮುಸಲ್ಮಾನರು ರಂಜಾನ್‌ ಹಬ್ಬದಂದು ಉಪವಾಸ ಅಂತ್ಯಗೊಳಿಸಿದರು.

ಈದ್ಗಾ ಮೈದಾನಕ್ಕೆ ಆಗಮಿಸಿದ್ದ ಮುಸ್ಲಿಮರು ಹೊಸ ಉಡುಗೆ ತೊಟ್ಟು, ಪರಸ್ಪರ ಆಲಂಗಿಸಿ ಶುಭಾಶಯ ವಿನಿಮಯ ಮಾಡಿಕೊಂಡರು. ಹಿರಿಯರೊಟ್ಟಿಗೆ ಆಗಮಿಸಿದ್ದ ಚಿಣ್ಣರೂ ಹಿರಿಯರನ್ನು ಅನುಕರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದು ವಿಶೇಷವಾಗಿತ್ತು. ಜಿಲ್ಲಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯದ್‌ ಜಿಯಾವುಲ್ಲಾ ಸೇರಿದಂತೆ ಗಣ್ಯರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

ದವಸದ ಕಿಟ್ ವಿತರಣೆ: ಕೆಲವು ರಾಜಕೀಯ ಪಕ್ಷಗಳ ಮುಖಂಡರು ಪ್ರಾರ್ಥನಾ ಸ್ಥಳಕ್ಕೆ ಆಗಮಿಸಿ ಮುಸಲ್ಮಾನ ಬಂಧುಗಳಿಗೆ ಹಬ್ಬದ ಶುಭಾಶಯ ಕೋರಿದರು. ರಂಜಾನ್‌ ಪ್ರಯುಕ್ತ ಪಾಪ್ಯೂಲರ್‌ ಫ್ರಂಟ್ ಆಫ್ ಇಂಡಿಯಾ ಕಮಿಟಿ ವತಿಯಿಂದ ಮುಸ್ಲಿಮರಿಗೆ ದವಸ ಧಾನ್ಯದ ಕಿಟ್ ವಿತರಿಸಲಾಯಿತು.ರಂಜಾನ್‌ ಪ್ರಯುಕ್ತ ನಡೆದ ಸಾಮೂಹಿಕ ಪ್ರಾರ್ಥನೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯುದಂತೆ ಪೊಲೀಸರು ವಿಶೇಷ ಬಂದೋಬಸ್ತ್ ಕೈಗೊಂಡಿದ್ದರು. ಸಸಿ ವಿತರ ಣೆಯಲ್ಲಿ ಜೆಡಿಎಸ್‌ ಕಾನೂನು ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್‌, ಜೆಡಿ ಎಸ್‌ ಯುವ ಘಟ ಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಸ್‌. ಜಯ ಕುಮಾರ್‌, ಜಿಲ್ಲಾ ಜೆಡಿಎಸ್‌ ಸೇವಾದಳ ವಿಭಾಗದ ಯೋಗೇಶ್‌ ಕುಮಾರ್‌, ಜಿಲ್ಲಾ ಆರ್‌ಟಿಐ ಕಾರ್ಯ ಕರ್ತರ ರಕ್ಷಣಾ ವೇದಿಕೆ ಉಪಾಧ್ಯಕ್ಷ ಅಸ್ಲಂ ಪಾಷಾ, ಬಳಗದ ಸಿ.ಎಸ್‌.ರಾಜು, ರವಿ ಮತ್ತಿತರರಿದ್ದರು.

ಕುಮಾರಣ್ಣ ಅಭಿಮಾನಿ ಬಳಗದಿಂದ ಸಸಿ ವಿತರಣೆ:

ರಂಜಾನ್‌ ಹಾಗೂ ವಿಶ್ವ ಪರಿಸರ ದಿನದ ಪ್ರಯುಕ್ತ ಕುಮಾರಣ್ಣ ಅಭಿಮಾನಿ ಬಳಗದ ಕಾರ್ಯಕರ್ತರು ಮುಸ್ಲಿಮರಿಗೆ ಸಸಿ ವಿತರಿಸುವುದರ ಮೂಲಕ ಗಮನ ಸೆಳೆದರು. ಸಿಹಿ ಹಂಚಿ ರಂಜಾನ್‌ ಹಬ್ಬದ ಶುಭಾಶಯ ಕೋರಿದ ಕುಮಾರಣ್ಣ ಅಭಿಮಾನಿಗಳು ಪರಿಸರ ಕಾಳಜಿ ಬಗ್ಗೆಯೂ ಜಾಗೃತಿ ಮೂಡಿಸಿದ್ದು ಇದೇ ಪ್ರಥಮ. ಹಬ್ಬದ ಸಂಭ್ರಮದಲ್ಲಿದ್ದ ಮುಸ್ಲಿಮರು ಸಸಿಗಳನ್ನು ಪ್ರೀತಿಯಿಂದಲೇ ಸ್ವೀಕರಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.