ಪಡಿತರ ವಂಚನೆ: ಪರಿಶೀಲನೆ
Team Udayavani, Oct 26, 2022, 5:23 PM IST
ಕನಕಪುರ: ಪಡಿತರ ವಿತರಣೆಯಲ್ಲಿ ವಂಚನೆ ಮಾಡುತ್ತಿರುವ ಬೂದಿಗುಪ್ಪೆ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲಿಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ತಾಲೂಕು ಅಧ್ಯಕ್ಷ ಸುರೇಶ್ ಆಹಾರ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ನಗರದ ಹೊರ ಹೊಲಯದಲ್ಲಿರುವ ಬೂದಿಗುಪ್ಪೆ ಗ್ರಾಮದ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಯಲ್ಲಿ ಪಡಿತರ ಫಲಾನುಭವಿಗಳಿಗೆ ವಂಚನೆ ಮಾಡುತ್ತಿದ್ದಾರೆ. ಬಿಪಿಎಲ್ ಪಡಿತರ ಹೊಂದಿರುವ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರ ನಿಗದಿಪಡಿಸಿದೆ. ಆದರೆ, ಬೂದಿಗುಪ್ಪೆ ನ್ಯಾಯಬೆಲೆ ಅಂಗಡಿಯಲ್ಲಿ 10 ಕೆಜಿ ಬದಲು ತಲಾ ಎಂಟು ಕೆಜಿ ವಿತರಣೆ ಮಾಡಿ, ಪಡಿತರದಾರರಿಗೆ ವಂಚನೆ ಮಾಡುತ್ತಿರುವುದು ಅಲ್ಲದೆ, ಪಡಿತರ ಫಲಾನುಭವಿಗಳಿಂದ ನಿಯಮ ಬಾಹಿರವಾಗಿ 10 ರೂ.ಲಂಚ ಪಡೆಯುತ್ತಿದ್ದಾರೆ ಎಂದು ದೂರಿದ್ದಾರೆ.
ಪಡಿತರ ವಿತರಣೆಯಲ್ಲಿ ಕುಟುಂಬ ಒಂದಕ್ಕೆ 10 ಕೆ.ಜಿಯಷ್ಟು ಪಡಿತರ ವಂಚಿಸಲಾಗುತ್ತಿದೆ. ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಯಲ್ಲಿ ಯಾವ ಪದಾರ್ಥಗಳನ್ನು ವಿತರಣೆ ಮಾಡಲಾಗುತ್ತಿದೆ ಎಂಬ ಯಾವುದೇ ನಾಮಫಲಕವನ್ನು ಹಾಕದೆ, ಜನರನ್ನು ವಂಚಿಸಲಾಗುತ್ತಿದೆ. ನ್ಯಾಯಬೆಲೆ ಅಂಗಡಿ ಮಾಲಿಕರ ವಿರುದ್ಧ ಸೂಕ್ತ ತನಿಖೆ ನಡೆಸಿ, ಕಾನೂನು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Sandalwood: ಗಾಡ್ ಪ್ರಾಮಿಸ್ಗೆ ಸ್ಕ್ರಿಪ್ಟ್ ಪೂಜೆ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ