ರಾಯಣ್ಣ ಅಪ್ರತಿಮ ವೀರ
Team Udayavani, Jan 27, 2020, 5:41 PM IST
ಮಾಗಡಿ: ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಜೀವ ತೆತ್ತ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಸ್ಮರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ರಾಜ್ಯ ಕುರುಬರ ಸಂಘದ ನಿರ್ದೇಶಕ ಹಾಗೂ ತಾಲೂಕು ಅಧ್ಯಕ್ಷ ಎಂ.ಸಿ.ರಾಜಣ್ಣ ತಿಳಿಸಿದರು.
ಮಾಗಡಿ ಪಟ್ಟಣದ ಕುರುಬರ ಸಂಘದ ಕಚೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹುತ್ಮಾತ ದಿನದ ಪ್ರಯುಕ್ತ ಸಂಗೊಳ್ಳಿ ರಾಯಣ್ಣ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ರಕ್ತದ ಕಣಕಣದಲ್ಲಿ ದೇಶ ಪ್ರೇಮ, ದೇಶಭಕ್ತಿ ತುಂಬಿತ್ತು. ಕಿತ್ತೂರು ರಾಣಿ ಚೆನ್ನಮ್ಮ ಸೇನೆಯ ಅಧಿಪತಿ ಸಂಗೊಳ್ಳಿ ರಾಯಣ್ಣ ಅಪ್ರತಿಮ ವೀರ. ಬೆಳಗಾವಿ ಜಿಲ್ಲೆ ಬೈರಹೊಂಗಲ ತಾಲೂಕಿನ ಸಂಗೊಳ್ಳಿ ರಾಯಣ್ಣ ಕುರುಬ ಸಮಾಜದಲ್ಲಿ ಹುಟ್ಟಿದವನು. ಕೇವಲ 32 ವರ್ಷಗಳ ಕಾಲ ಬದುಕಿ ವೀರ ಮರಣ ಹೊಂದಿದ್ದು, ನಮ್ಮೆಲ್ಲರ ದುರಂತ. ಅವರಂತೆ ನಾವೆಲ್ಲರೂ ದೇಶಭಕ್ತಿ, ದೇಶಪ್ರೇಮ ಬೆಳೆಸಿಕೊಂಡು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸುಭದ್ರ ರಾಷ್ಟ್ರ ಕಟ್ಟೋಣ ಎಂದರು.
ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಶಿವಕುಮಾರ್ ಮಾತನಾಡಿ, ಬಡವರ ಭೂಮಿಯನ್ನು ಕಸಿದು ಕೊಳ್ಳುತ್ತಿದ್ದ ಬ್ರಿಟಿಷರ ವಿರುದ್ಧವೇ ಸಿಡಿದು ನಿಂತ ಕ್ರಾಂತಿಕಾರ ವೀರ ಸಂಗೊಳ್ಳಿ ರಾಯಣ್ಣ, ಗೆರಿಲ್ಲಾ ಯುದ್ಧ ದ ಹರಿಕಾರ ಎಂದೇ ಖ್ಯಾತಿಹೊಂದಿದ್ದ ರಾಯಣ್ಣನ ಸಾಧನೆ, ದೇಶ ಸೇವೆ ಅಪ್ರತಿಮವಾದುದು ಎಂದು ಹೇಳಿದರು.
ಸಂಘದ ಕಾರ್ಯಾಧ್ಯಕ್ಷ ಹಾಗೂ ಪುರಸಭೆ ಮಾಜಿ ಅಧ್ಯಕ್ಷ ಎಚ್.ಆರ್. ಮಂಜುನಾಥ್, ನಿರ್ದೇಶಕರಾದ ಯಶೋಧಮ್ಮ, ರಾಜಣ್ಣ, ಚೆನ್ನರಾಜು, ಬಿರೇಶ್, ನಿರಂಜನ್ ಉಮಾಶೆಂಕರ್, ಶಿವರಾಜು, ಬಲರಾಮು, ರಕ್ಷಿತ್, ಶಿವ ಪ್ರಸಾದ್, ವಕೀಲ ರಾಜಯ್ಯ, ಎಚ್. ಆರ್.ರುದ್ರೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ