ವೈಜ್ಞಾನಿಕ ಕೃಷಿಯತ್ತ ಮುಖಮಾಡಿ
ಕೃಷಿ ಅಭಿಯಾನದಲ್ಲಿ ಪ್ರಭಾರ ಸಹಾಯಕ ಕೃಷಿ ನಿರ್ದೇಶಕ ರಾಧಾಕೃಷ್ಣ ಸಲಹೆ
Team Udayavani, Jun 20, 2019, 2:47 PM IST
ಕಲ್ಲಹಳ್ಳಿಯಲ್ಲಿ ಸಮಗ್ರ ಕೃಷಿ ಅಭಿಯಾನದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಕಾರ್ಯಕ್ರಮವನ್ನು ಪ್ರಭಾರ ಸಹಾಯಕ ಕೃಷಿ ನಿರ್ದೇಶಕ ರಾಧಾಕೃಷ್ಣ ಉದ್ಘಾಟಿಸಿದರು.
ಕನಕಪುರ: ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡಲು ಮತ್ತು ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರ ಉದ್ಪಾದನೆಯ ಸವಾಲು ಎದುರಾಗಿದೆ. ಅದಕ್ಕೆ ಲಭ್ಯವಿರುವ ಸಾಗುವಳಿ ಜಮೀನಿನಲ್ಲಿ ಗರಿಷ್ಠ ಕೃಷಿ ಉತ್ಪಾದನೆ ಮಾಡಬೇಕಿದೆ. ರೈತರು ವೈಜ್ಞಾನಿಕ ಕೃಷಿಯತ್ತ ಮುಖ ಮಾಡಬೇಕು ಎಂದು ಪ್ರಭಾರ ಸಹಾಯಕ ಕೃಷಿ ನಿರ್ದೇಶಕ ರಾಧಾಕೃಷ್ಣ ತಿಳಿಸಿದರು.
ತಾಲೂಕಿನಲ್ಲಿ ಕಸಬಾ ಹೋಬಳಿ ಕಲ್ಲಹಳ್ಳಿ ಗ್ರಾಮದಲ್ಲಿ ನಡೆಯುವ ಸಮಗ್ರ ಕೃಷಿ ಅಭಿಯಾನ -2019ದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಮಾತನಾಡಿ, ಮಳೆಗಾಲ ಪ್ರಾರಂಭವಾಗುತ್ತಿರು ವುದರಿಂದ ತಾಲೂಕಿನ ರೈತರು ಕೃಷಿ ಚಟುವಟಿಕೆಗಳಲ್ಲಿ ಸಮಗ್ರ ಕೃಷಿಯನ್ನು ಮಾಡಬೇಕಿದೆ. ಕೃಷಿ ವಲಯದ ಪ್ರಸ್ತುತ ಪರಿಸ್ಥಿತಿ ಮನಗಂಡು ಉತ್ಪಾದನೆಯನ್ನು ಹೆಚ್ಚಿಸಲು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕಿದೆ ಎಂದರು.
ಜಾಗೃತಿಗಾಗಿ ಕೃಷಿ ಅಭಿಯಾನ: ಸಮಗ್ರ ಕೃಷಿ ಮಾಹಿತಿಯನ್ನು ವಿವಿಧ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಸಮೂಹ ಜಾಗೃತಿ ಕಾರ್ಯಕ್ರಮವಾಗಿ ಸಮಗ್ರ ಕೃಷಿ ಅಭಿಯಾನದ ಮೂಲಕ ತಾಲೂಕಿನ ರೈತರಿಗೆ ತಿಳಿಸಿಕೊಡಲಾಗುತ್ತಿದೆ. ಕೃಷಿ ಮಾಹಿತಿ ರಥವು ತಾಲೂಕಿನ 6 ಹೋಬಳಿ ಕೇಂದ್ರಗಳಾದ ಕಸಬಾ ಹೋಬಳಿ, ಕೋಡಿಹಳ್ಳಿ, ದೊಡ್ಡ ಆಲಹಳ್ಳಿ, ಸಾತನೂರು, ಮರಳವಾಡಿ, ಹಾರೋಹಳ್ಳಿ ಹೋಬಳಿ ಕೇಂದ್ರ ವ್ಯಾಪ್ತಿಯ ಗ್ರಾಪಂಗಳಲ್ಲಿ ಸಂಚರಿಸಲಿದೆ ಎಂದು ತಿಳಿಸಿದರು.
ಕಲ್ಲಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಫರೀನಾ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸೋಮಶೇಖರ್, ಕೃಷಿ ಅಧಿಕಾರಿ ಸುಂದರೇಶ್.ಬಿ.ಆರ್, ಸಹಾಯಕ ಕೃಷಿ ಅಧಿಕಾರಿ ವೆಂಕಟೇಶ್.ಎಂ, ಬಿಟಿಎಂ ಅರ್ಜುನೇಗೌಡ ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ