ವೈಜ್ಞಾನಿಕ ಕೃಷಿಯತ್ತ ಮುಖಮಾಡಿ

ಕೃಷಿ ಅಭಿಯಾನದಲ್ಲಿ ಪ್ರಭಾರ ಸಹಾಯಕ ಕೃಷಿ ನಿರ್ದೇಶಕ ರಾಧಾಕೃಷ್ಣ ಸಲಹೆ

Team Udayavani, Jun 20, 2019, 2:47 PM IST

rn-tdy-2..

ಕಲ್ಲಹಳ್ಳಿಯಲ್ಲಿ ಸಮಗ್ರ ಕೃಷಿ ಅಭಿಯಾನದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಕಾರ್ಯಕ್ರಮವನ್ನು ಪ್ರಭಾರ ಸಹಾಯಕ ಕೃಷಿ ನಿರ್ದೇಶಕ ರಾಧಾಕೃಷ್ಣ ಉದ್ಘಾಟಿಸಿದರು.

ಕನಕಪುರ: ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡಲು ಮತ್ತು ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರ ಉದ್ಪಾದನೆಯ ಸವಾಲು ಎದುರಾಗಿದೆ. ಅದಕ್ಕೆ ಲಭ್ಯವಿರುವ ಸಾಗುವಳಿ ಜಮೀನಿನಲ್ಲಿ ಗರಿಷ್ಠ ಕೃಷಿ ಉತ್ಪಾದನೆ ಮಾಡಬೇಕಿದೆ. ರೈತರು ವೈಜ್ಞಾನಿಕ ಕೃಷಿಯತ್ತ ಮುಖ ಮಾಡಬೇಕು ಎಂದು ಪ್ರಭಾರ ಸಹಾಯಕ ಕೃಷಿ ನಿರ್ದೇಶಕ ರಾಧಾಕೃಷ್ಣ ತಿಳಿಸಿದರು.

ತಾಲೂಕಿನಲ್ಲಿ ಕಸಬಾ ಹೋಬಳಿ ಕಲ್ಲಹಳ್ಳಿ ಗ್ರಾಮದಲ್ಲಿ ನಡೆಯುವ ಸಮಗ್ರ ಕೃಷಿ ಅಭಿಯಾನ -2019ದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಮಾತನಾಡಿ, ಮಳೆಗಾಲ ಪ್ರಾರಂಭವಾಗುತ್ತಿರು ವುದರಿಂದ ತಾಲೂಕಿನ ರೈತರು ಕೃಷಿ ಚಟುವಟಿಕೆಗಳಲ್ಲಿ ಸಮಗ್ರ ಕೃಷಿಯನ್ನು ಮಾಡಬೇಕಿದೆ. ಕೃಷಿ ವಲಯದ ಪ್ರಸ್ತುತ ಪರಿಸ್ಥಿತಿ ಮನಗಂಡು ಉತ್ಪಾದನೆಯನ್ನು ಹೆಚ್ಚಿಸಲು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕಿದೆ ಎಂದರು.

ಜಾಗೃತಿಗಾಗಿ ಕೃಷಿ ಅಭಿಯಾನ: ಸಮಗ್ರ ಕೃಷಿ ಮಾಹಿತಿಯನ್ನು ವಿವಿಧ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಸಮೂಹ ಜಾಗೃತಿ ಕಾರ್ಯಕ್ರಮವಾಗಿ ಸಮಗ್ರ ಕೃಷಿ ಅಭಿಯಾನದ ಮೂಲಕ ತಾಲೂಕಿನ ರೈತರಿಗೆ ತಿಳಿಸಿಕೊಡಲಾಗುತ್ತಿದೆ. ಕೃಷಿ ಮಾಹಿತಿ ರಥವು ತಾಲೂಕಿನ 6 ಹೋಬಳಿ ಕೇಂದ್ರಗಳಾದ ಕಸಬಾ ಹೋಬಳಿ, ಕೋಡಿಹಳ್ಳಿ, ದೊಡ್ಡ ಆಲಹಳ್ಳಿ, ಸಾತನೂರು, ಮರಳವಾಡಿ, ಹಾರೋಹಳ್ಳಿ ಹೋಬಳಿ ಕೇಂದ್ರ ವ್ಯಾಪ್ತಿಯ ಗ್ರಾಪಂಗಳಲ್ಲಿ ಸಂಚರಿಸಲಿದೆ ಎಂದು ತಿಳಿಸಿದರು.

ಕಲ್ಲಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಫರೀನಾ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸೋಮಶೇಖರ್‌, ಕೃಷಿ ಅಧಿಕಾರಿ ಸುಂದರೇಶ್‌.ಬಿ.ಆರ್‌, ಸಹಾಯಕ ಕೃಷಿ ಅಧಿಕಾರಿ ವೆಂಕಟೇಶ್‌.ಎಂ, ಬಿಟಿಎಂ ಅರ್ಜುನೇಗೌಡ ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ವಿವಿಧೆಡೆ ಕೃಷಿ ರಥ ಸಂಚಾರ, ಸಂವಾದ:

ಜೂ.20ರಂದು ಕಲ್ಲಹಳ್ಳಿ, ಟಿ.ಬೇಕುಪ್ಪೆ, ಬೂದುಗುಪ್ಪೆ, ಚಾಕನಹಳ್ಳಿ, ನಾರಾಯಣಪುರ, ಶಿವನಹಳ್ಳಿ, ಅಳ್ಳಿಮಾರನಹಳ್ಳಿ, ಚಿಕ್ಕಮುದುವಾಡಿ, ಸೋಮಂದ್ಯಾಪನಹಳ್ಳಿ, ಕಲ್ಲಹಳ್ಳಿ ಗ್ರಾಪಂನಲ್ಲಿ ಸಂಚರಿಸಿಲಿದೆ. ಚಿಕ್ಕಮುದುವಾಡಿ ದೇವಸ್ಥಾನದ ಆವರಣದಲ್ಲಿ ರೈತರ ಸಂವಾದ ಕಾರ್ಯಕ್ರಮ ಹಾಗೂ ವಸ್ತು ಪ್ರದರ್ಶನ ನಡೆಯಲಿದೆ. ಜೂ.21 ಮತ್ತು 22 ರವರೆಗೆ ಅರಕೆರೆ, ಹೇರಿಂದ್ಯಾಪನಹಳ್ಳಿ, ಕೊಳಗೊಂಡನಹಳ್ಳಿ, ಹುಣಸನಹಳ್ಳಿ, ಬನ್ನಿಮುಕ್ಕೋಡ್ಲು, ಹೊಸದುರ್ಗ ಗ್ರಾಮಗಳಲ್ಲಿ ಕೃಷಿ ರಥ ಯಾತ್ರೆ ನಡೆದು, ಕೋಡಿಹಳ್ಳಿ ಬಸ್‌ ನಿಲ್ದಾಣದ ಹಿಂಭಾಗದ ಆವರಣದಲ್ಲಿ ಜೂ.21ರಂದು ರೈತರ ಸಂವಾದ ಹಾಗೂ ವಸ್ತು ಪ್ರದರ್ಶನ ನಡೆಯಲಿದೆ. ಜೂ.23- 24ರವರೆಗೆ ದೊಡ್ಡ ಆಲಹಳ್ಳಿ, ಉಯ್ಯಂಬಳ್ಳಿ, ಮರಳೇಬೇಕುಪ್ಪೆ, ನಲ್ಲಹಳ್ಳಿ, ಮುಳ್ಳಹಳ್ಳಿ, ಐ.ಗೊಲ್ಲಹಳ್ಳಿ, ಹೂಕುಂದ ಗ್ರಾಪಂನಲ್ಲಿ ರಥಯಾತ್ರೆ ನಡೆಯಲಿದೆ. ಜೂ.24ರಂದು ಹೂಕುಂದ ಗ್ರಾಮದಲ್ಲಿ ರೈತರ ಸಂವಾದ ಕಾರ್ಯಕ್ರಮ ಹಾಗೂ ವಸ್ತು ಪ್ರದರ್ಶನ ನಡೆಯುತ್ತದೆ. ಜೂ.25ರಿಂದ 26ರ ವರೆಗೆ ಸಾತನೂರು, ಅಚ್ಚಲು, ಚೂಡಹಳ್ಳಿ, ಕಬ್ಟಾಳು, ಅರೆಕಟ್ಟೆದೊಡ್ಡಿ ಗ್ರಾಪಂ ವ್ಯಾಪ್ತಿಯಲ್ಲಿ ಕೃಷಿ ರಥಯಾತ್ರೆ ನಡೆಸಿ, ಜೂ26ರಂದು ಕಬ್ಟಾಳಮ್ಮನ ದೇವಾಲಯದ ಆವರಣದಲ್ಲಿ ರೈತರ ಸಂವಾದ ಕಾರ್ಯಕ್ರಮ ಮತ್ತು ವಸ್ತು ಪ್ರದರ್ಶನ ನಡೆಯಲಿದೆ. ಜೂ.27ರಿಂದ 28ರ ವರೆಗೆ ಮರಳವಾಡಿ, ಯಲಚವಾಡಿ, ಬನವಾಸಿ, ತೋಕಸಂದ್ರ, ಟಿ.ಹೊಸಹಳ್ಳಿ, ಚೀಲೂರು ಗ್ರಾಪಂನಲ್ಲಿ ರಥಯಾತ್ರೆ ನಡೆಸಿ, ಜೂ.28ರಂದು ಮರಳವಾಡಿ ಎಂಇಎಸ್‌ ಶಾಲಾ ಆವರಣದಲ್ಲಿ ರೈತರ ಸಂವಾದ ಮತ್ತು ವಸ್ತು ಪ್ರದರ್ಶನ ನಡೆಯಲಿದೆ. ಜೂ.28ರಿಂದ 30ರವರೆಗೆ ಹಾರೋಹಳ್ಳಿ, ಕೊಟ್ಟಗಾಳು, ಕೊಳ್ಳಿಗನಹಳ್ಳಿ, ದೊಡ್ಡಮುದುವಾಡಿ, ಕಗ್ಗಲಹಳ್ಳಿ, ದ್ಯಾವಸಂದ್ರ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಕೃಷಿ ರಥಯಾತ್ರೆ ನಡೆಸಿ, ಹಾರೋಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರೈತರ ಸಂವಾದ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.