ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ

ಇಂದಿನಿಂದ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ • ಪೊಲೀಸ್‌ ಇಲಾಖೆಯಿಂದ ಸಾರ್ವಜನಿಕರಿಗೆ ಜಾಗೃತಿ

Team Udayavani, Aug 17, 2019, 12:57 PM IST

rn-tdy-1

ಕುದೂರು ಮುಖ್ಯ ರಸ್ತೆಯಲ್ಲಿ ಪೊಲೀಸರು ಸಾರ್ವಜನಿಕರಿಗೆ ಸಂಚಾರ ನಿಯಮದ ಜಾಗೃತಿ ಮೂಡಿಸಿದರು.

ಕುದೂರು: ಸಂಚಾರ ನಿಯಮಗಳ ಉಲ್ಲಂಘನೆ ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಶನಿವಾರದಿಂದ ನಿಯಮ ಪಾಲನೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು ಎಂದು ಪಿಎಸ್‌ಐ ಕಿರಣ್‌ ತಿಳಿಸಿದರು.

ಕುದೂರು ಗ್ರಾಮದ ಬಸ್‌ ನಿಲ್ದಾಣ ಮತ್ತು ಮುಖ್ಯ ರಸ್ತೆಯಲ್ಲಿ ಪೊಲೀಸರು ಹೆಲ್ಮೆಟ್ ಧರಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಬೈಕ್‌ ಸವಾರರು ಮಾತ್ರವಲ್ಲ ಹಿಂಬದಿ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯ. ಈಗಾಗಲೇ ರಾಮನಗರ ಜಿಲ್ಲೆಯಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್‌ ವರಿಷ್ಠಧಿಕಾರಿಗಳೇ ಅಖಾಡಕ್ಕೆ ಇಳಿದಿದ್ದಾರೆ. ಈವರೆವಿಗೂ ಸಂಚಾರ ನಿಯಮಗಳನ್ನು ಗಾಳಿಗೆ ತೂರಿದ್ದ ವಾಹನ ಸವಾರರಿಗೆ ದಂಡ ಪ್ರಯೋಗಿಸಲಾಗಿದೆ. ರಸ್ತೆ ಅಪಘಾತದಿಂದ ಮೃತಪಡುವವರ ಸಂಖ್ಯೆ ಇಳಿಮುಖಗೊಳಿಸುವ ಸಲುವಾಗಿ ಸಂಚಾರ ನಿಯಮಗಳನ್ನು ಬಿಗಿಗೊಳಿಸಲಾಗುತ್ತಿದೆ ಎಂದು ಹೇಳಿದರು.

ಮೊದಲು ಅರಿವಿನ ಪಾಠ: ದ್ವಿಚಕ್ರ ವಾಹನ ಸವಾರರ ಮೇಲೆ ಪೊಲೀಸರು ದಂಡ ಪ್ರಯೋಗಿಸುವುದಿಲ್ಲ. ಮೊದಲಿಗೆ ಗ್ರಾಮೀಣ ಪ್ರದೇಶಗಳಲ್ಲಿ ಹೆಲ್ಮೆಟ್ ಜಾಗೃತಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಹೆಲ್ಮೆಟ್ ಬಳಕೆ ಕಡ್ಡಾಯಗೊಳಿಸಿ ನ್ಯಾಯಾಲಯ ಮೂರು ವರ್ಷಗಳೇ ಕಳೆದರೂ ಇದುವರೆವಿಗೂ ಸರಿಯಾಗಿ ಅನುಷ್ಠಾನ ಗೊಂಡಿಲ್ಲ. ವಾಹನ ಸವಾರರಿಗೆ ಅಪಘಾತ ಸಂದರ್ಭ ದಲ್ಲಿ ಹೆಲ್ಮೆಟ್ ಧರಿಸದಿದ್ದರೆ ಅವರಿಗೆ ವಿಮಾ ಸೌಲಭ್ಯ ನೀಡದಿರಲು ವಿಮಾ ಕಂಪನಿಗಳು ನಿರ್ಧರಿಸಿದ್ದವು. ಅದರೂ ಹೆಲ್ಮೆಟ್ ಬಗ್ಗೆ ವಾಹನ ಸವಾರರು ನಿರ್ಲಕ್ಷ್ಯ ವಹಿಸಿದ್ದರು. ಇದನ್ನು ನಿವಾರಿಸಲು ಇಲಾಖೆ ಮುಂದಾ ಗಿದೆ ಎಂದು ಹೇಳಿದರು.

ವಾಹನ ಸವಾರರಿಗೆ ಎಚ್ಚರಿಕೆ: ಹೆಲ್ಮೆಟ್, ಸೀಟ್ ಬೆಲ್r ಧರಿಸದೇ ವಾಹನ ಚಾಲನೆ, ಮಿತಿಮೀರಿದ ವೇಗ, ಅಡ್ಡಾದಿಡ್ಡಿ ವಾಹನ ನಿಲುಗಡೆ, ಎಲ್ಲಂದರಲ್ಲಿ ವಾಹನ ನಿಲ್ಲಿಸುವುದು, ದಾಖಲೆಗಳಿಲ್ಲದೇ ವಾಹನ ಚಾಲನೆ, ವಾಹನಗಳಿಗೆ ವಿಮೆ ಇಲ್ಲದೇ ಚಾಲನೆ ಹೀಗೆ ಎಲ್ಲಾ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿ ಸುವ ಜೊತೆಗೆ ಇನ್ನೊಮ್ಮೆ ಉಲ್ಲಂಘಿಸಿದರೆ ಪರವಾನಗಿ ರದ್ದು ಪಡಿಸಲಾಗುವುದು ಎಂದರು.

ಅಡ್ಡಾದಿಡ್ಡಿ ಪಾರ್ಕಿಂಗ್‌ಗೆ ಕಡಿವಾಣ: ಗ್ರಾಮದ ಮುಖ್ಯ ರಸ್ತೆಗಳಲ್ಲಿ ಅಕ್ಕಪಕ್ಕದಲ್ಲಿ ಎಲ್ಲೆಂದರಲ್ಲಿ ಅಡ್ಡಾ ದಿಡ್ಡಿಯಾಗಿ ವಾಹನ ನಿಲುಗಡೆ ಮಾಡಿದರೆ, ಮುಂದಿನ ದಿನಗಳಲ್ಲಿ ಕಡಿವಾಣ ಹಾಕಲಾಗುವುದು.

ದಂಡದ ಪ್ರಮಾಣ: ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡಿದರೆ 500 ರೂ., 2ನೇ ಬಾರಿಗೆ 1000 ರೂ., ಚಾಲನೆ ವೇಳೆ ಮೊಬೈಲ್ ಬಳಸಿದರೆ 1000 ರೂ., ಎರಡನೇ ಬಾರಿಗೆ 2000 ರೂ., ವಿಮಾ ಇಲ್ಲದೇ ವಾಹನೆ ಚಾಲನೆ 1000 ರೂ., ನೋಂದಣಿ ಮಾಡಿ ಸದೇ ವಾಹನ ಚಲಾಯಿಸಿದರೆ 5000 ರೂ., 2ನೇ ಬಾರಿಗೆ 10.000 ಸಾವಿರ ದಂಡ, ಎಫ್‌ಸಿ ಪ್ರಮಾಣ ಪತ್ರ ಇಲ್ಲದಿದ್ದರೆ 2000 ರೂ., 2ನೇ ಬಾರಿಗೆ 5000 ರೂ., ನಿಷೇಧಿತ ಪ್ರದೇಶದಲ್ಲಿ ವಾಹನ ನಿಲ್ಲಿಸಿದರೆ 1000 ರೂ., ಅದಕ್ಕೂ ಮೀರಿದರೆ ಚಾಲನಾ ಪರ ವಾನಗಿ ರದ್ದು ಪಡಿಸಲು ಆರ್‌ಟಿಒ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದರು.

ಪ್ರತಿಯೊಬ್ಬರ ಜೀವ ಅಮೂಲ್ಯವಾ ಗಿದ್ದು, ಅಪಘಾತವನ್ನು ತಪ್ಪಿಸಲು ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ನಗರ ವೃತ್ತ ನಿರೀಕ್ಷಕ ಗೋವಿಂದರಾಜು ಸಲಹೆ ನೀಡಿದರು.

ಪಟ್ಟಣದ ಪುರ ಪೊಲೀಸ್‌ ಠಾಣೆಯ ಮುಂಭಾಗ ಆಯೋಜಿಸಲಾಗಿದ್ದ ದ್ವಿಚಕ್ರ ವಾಹನ ಸವಾರರ ಹೆಲ್ಮೆಟ್ ಕಡ್ಡಾಯ ಸಂಬಂಧ ಪೊಲೀಸರ ಬೈಕ್‌ ಅಭಿಯಾನಕ್ಕೆ ಚಾಲನೆ ನೀಡಿದ ಅವರು ಮಾತನಾಡಿ, ಯಾವುದೇ ಅಪಘಾತಗಳಲ್ಲಿ ದ್ವಿಚಕ್ರ ವಾಹನ ಸವಾರರು ಸಾವಿನ ಪ್ರಕರಣಗಳೇ ಹೆಚ್ಚಾಗಿವೆ. ಅದರಲ್ಲಿಯೂ ಹೆಲ್ಮೆಟ್ ಧರಿಸದೇ ಸಾವನಪ್ಪಿರುವರ ಸಂಖ್ಯೆಯ ಹೆಚ್ಚಾಗಿದೆ. ಹಾಗಾಗಿ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎಂದರು.

ಹೆಲ್ಮೆಟ್ ಬಿಸಿಲು, ಮಳೆಗೂ ಅಸರೆ: ಹೆಲ್ಮೆಟ್ ಬಿಸಿಲು, ಮಳೆಗೂ ಅಸರೆಯಾಗುವುದಲ್ಲದೇ ನಿಮ್ಮ ಪ್ರಾಣವನ್ನು ಉಳಿಸಲು ಸಹಾಯ ಮಾಡುತ್ತದೆ. ನಿಮ್ಮನ್ನು ನಂಬಿ ಕುಟುಂಬ ಇರುತ್ತದೆ ಎಂಬುದನ್ನು ಮರೆಯಬಾರದು. ನಿಮ್ಮವರಿಗಾಗಿ ನೀವು ಹೆಲ್ಮೆಟ್ ಧರಿಸಲೇಬೇಕು ಎಂದು ಮನವಿ ಮಾಡಿದರು.

ತಲೆಗೆ ಪೆಟ್ಟಾದರೆ ಬದುಕುವುದೇ ಕಷ್ಟ: ಸಂಚಾರ ಪೊಲೀಸ್‌ ಠಾಣೆಯ ಎಸ್‌ಐ ಶಿವಕುಮಾರ್‌ ಮಾತನಾಡಿ, ಅಪಘಾತಗಳು ನಡೆದ ಸಂದರ್ಭದಲ್ಲಿ ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಅದನ್ನು ಗುಣಪಡಿಸಬಹುದು. ಆದರೆ, ತಲೆಗೆ ಪೆಟ್ಟಾದರೆ ಬದುಕುವುದೇ ಕಷ್ಟ. ಸಾವು ಸಂಭವಿಸುವ ಜತೆಗೆ, ಶಾಶ್ವತವಾಗಿ ಮಾನಸಿಕ ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ. ಹೀಗಾಗಿ ಪ್ರತಿಯೊಬ್ಬರು ದ್ವಿಚಕ್ರ ವಾಹನ ಚಾಲನೆ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಪ್ರಾಣ ಹೋದರೆ ಮತ್ತೂಮ್ಮೆ ಬರುವುದಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು. ಪೊಲೀಸರ ಬೈಕ್‌ ರ್ಯಾಲಿ ಮಹಾತ್ಮ ಗಾಂಧಿ ರಸ್ತೆ, ಜೆ.ಸಿ. ರಸ್ತೆ, ಅಂಚೆ ಕಚೇರಿ ರಸ್ತೆ, ಕೋರ್ಟ್‌ ರಸ್ತೆ, ರೈಲ್ವೆ ನಿಲ್ದಾಣ ರಸ್ತೆ, ಶೇರ್ವಾ ಹೋಟೆಲ್ ರಸ್ತೆ, ಬೆಂಗಳೂರು- ಮೈಸೂರು ರಸ್ತೆ, ಸಾತನೂರು ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನಡೆಯಿತು.

ಪೂರ್ವ ಪೊಲೀಸ್‌ ಠಾಣೆಯ ಎಸ್‌ಐ ಹೇಮಂತ್‌ಕುಮಾರ್‌ ಮಾತನಾಡಿದರು. ಈ ಸಂದರ್ಭದಲ್ಲಿ ಪುರ ಹಾಗೂ ಸಂಚಾರ ಪೊಲೀಸ್‌ ಠಾಣೆಯ ಪೊಲೀಸ್‌ ಸಿಬ್ಬಂದಿ ಹಾಜರಿದ್ದರು.

ಅಪಘಾತ ತಪ್ಪಿಸಲು ಸಂಚಾರ ನಿಯಮ ಪಾಲಿಸಿ:

 ಪ್ರತಿಯೊಬ್ಬರ ಜೀವ ಅಮೂಲ್ಯವಾ ಗಿದ್ದು, ಅಪಘಾತವನ್ನು ತಪ್ಪಿಸಲು ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ನಗರ ವೃತ್ತ ನಿರೀಕ್ಷಕ ಗೋವಿಂದರಾಜು ಸಲಹೆ ನೀಡಿದರು. ಪಟ್ಟಣದ ಪುರ ಪೊಲೀಸ್‌ ಠಾಣೆಯ ಮುಂಭಾಗ ಆಯೋಜಿಸಲಾಗಿದ್ದ ದ್ವಿಚಕ್ರ ವಾಹನ ಸವಾರರ ಹೆಲ್ಮೆಟ್ ಕಡ್ಡಾಯ ಸಂಬಂಧ ಪೊಲೀಸರ ಬೈಕ್‌ ಅಭಿಯಾನಕ್ಕೆ ಚಾಲನೆ ನೀಡಿದ ಅವರು ಮಾತನಾಡಿ, ಯಾವುದೇ ಅಪಘಾತಗಳಲ್ಲಿ ದ್ವಿಚಕ್ರ ವಾಹನ ಸವಾರರು ಸಾವಿನ ಪ್ರಕರಣಗಳೇ ಹೆಚ್ಚಾಗಿವೆ. ಅದರಲ್ಲಿಯೂ ಹೆಲ್ಮೆಟ್ ಧರಿಸದೇ ಸಾವನಪ್ಪಿರುವರ ಸಂಖ್ಯೆಯ ಹೆಚ್ಚಾಗಿದೆ. ಹಾಗಾಗಿ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎಂದರು. ಹೆಲ್ಮೆಟ್ ಬಿಸಿಲು, ಮಳೆಗೂ ಅಸರೆ: ಹೆಲ್ಮೆಟ್ ಬಿಸಿಲು, ಮಳೆಗೂ ಅಸರೆಯಾಗುವುದಲ್ಲದೇ ನಿಮ್ಮ ಪ್ರಾಣವನ್ನು ಉಳಿಸಲು ಸಹಾಯ ಮಾಡುತ್ತದೆ. ನಿಮ್ಮನ್ನು ನಂಬಿ ಕುಟುಂಬ ಇರುತ್ತದೆ ಎಂಬುದನ್ನು ಮರೆಯಬಾರದು. ನಿಮ್ಮವರಿಗಾಗಿ ನೀವು ಹೆಲ್ಮೆಟ್ ಧರಿಸಲೇಬೇಕು ಎಂದು ಮನವಿ ಮಾಡಿದರು. ತಲೆಗೆ ಪೆಟ್ಟಾದರೆ ಬದುಕುವುದೇ ಕಷ್ಟ: ಸಂಚಾರ ಪೊಲೀಸ್‌ ಠಾಣೆಯ ಎಸ್‌ಐ ಶಿವಕುಮಾರ್‌ ಮಾತನಾಡಿ, ಅಪಘಾತಗಳು ನಡೆದ ಸಂದರ್ಭದಲ್ಲಿ ದೇಹದ ಯಾವುದೇ ಭಾಗಕ್ಕೆ ಪೆಟ್ಟಾದರೂ ಅದನ್ನು ಗುಣಪಡಿಸಬಹುದು. ಆದರೆ, ತಲೆಗೆ ಪೆಟ್ಟಾದರೆ ಬದುಕುವುದೇ ಕಷ್ಟ. ಸಾವು ಸಂಭವಿಸುವ ಜತೆಗೆ, ಶಾಶ್ವತವಾಗಿ ಮಾನಸಿಕ ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ. ಹೀಗಾಗಿ ಪ್ರತಿಯೊಬ್ಬರು ದ್ವಿಚಕ್ರ ವಾಹನ ಚಾಲನೆ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಪ್ರಾಣ ಹೋದರೆ ಮತ್ತೂಮ್ಮೆ ಬರುವುದಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು. ಪೊಲೀಸರ ಬೈಕ್‌ ರ್ಯಾಲಿ ಮಹಾತ್ಮ ಗಾಂಧಿ ರಸ್ತೆ, ಜೆ.ಸಿ. ರಸ್ತೆ, ಅಂಚೆ ಕಚೇರಿ ರಸ್ತೆ, ಕೋರ್ಟ್‌ ರಸ್ತೆ, ರೈಲ್ವೆ ನಿಲ್ದಾಣ ರಸ್ತೆ, ಶೇರ್ವಾ ಹೋಟೆಲ್ ರಸ್ತೆ, ಬೆಂಗಳೂರು- ಮೈಸೂರು ರಸ್ತೆ, ಸಾತನೂರು ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನಡೆಯಿತು. ಪೂರ್ವ ಪೊಲೀಸ್‌ ಠಾಣೆಯ ಎಸ್‌ಐ ಹೇಮಂತ್‌ಕುಮಾರ್‌ ಮಾತನಾಡಿದರು. ಈ ಸಂದರ್ಭದಲ್ಲಿ ಪುರ ಹಾಗೂ ಸಂಚಾರ ಪೊಲೀಸ್‌ ಠಾಣೆಯ ಪೊಲೀಸ್‌ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.