ಸಾರ್ವಜನಿಕ ಇ-ಗ್ರಂಥಾಲಯಕ್ಕೆ ನೋಂದಾಯಿಸಿಕೊಳ್ಳಿ


Team Udayavani, Nov 18, 2020, 1:57 PM IST

ಸಾರ್ವಜನಿಕ ಇ-ಗ್ರಂಥಾಲಯಕ್ಕೆ ನೋಂದಾಯಿಸಿಕೊಳ್ಳಿ

ರಾಮನಗರ: ರಾಜ್ಯದ ಸಾರ್ವಜನಿಕ ಗ್ರಂಥಾಲಯ ಆರಂಭಿಸಿರುವ ಇ-ಗ್ರಂಥಾಲಯಕ್ಕೆ ಜಿಲ್ಲೆಯ ಬಹಳಷ್ಟು ಮಂದಿ ಆಸಕ್ತರು ನೋಂದಾಯಿಸಿಕೊಂಡಿದ್ದಾರೆ, ನೋಂದಣಿಗೆಇನ್ನುಅವಕಾಶವಿದ್ದು,ಜಿಲ್ಲೆಯ ನಾಗರಿಕರು ಇ-ಗ್ರಂಥಾಲಯ ವ್ಯವಸ್ಥೆ ಬಳಸಿಕೊಳ್ಳಬೇಕು ಎಂದು ಜಿಲ್ಲಾ ಮುಖ್ಯ ಗ್ರಂಥಾಲಯ ಅಧಿಕಾರಿ ಮಮತಾಕರೆ ನೀಡಿದರು.

ನಗರದ ಜಿಲ್ಲಾ ಗ್ರಂಥಾಲಯದಲ್ಲಿ ಮಂಗಳವಾರ ರಾಷ್ಟ್ರೀಯ ಗ್ರಂಥ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿ, ಕೋವಿಡ್‌ ಲಾಕ್‌ಡೌನ್‌ ಕಾರಣ ಗ್ರಂಥಾಲಯಗಳು ಸಹ ಬಾಗಿಲು ಮುಚ್ಚಿದ್ದವು. ಆದರೆ ಈ ಸಮಯದಲ್ಲಿ ಓದುಗರಿಗೆ ಪುಸ್ತಕಗಳನ್ನು ಓದುವ ಆಸಕ್ತಿಯನ್ನು ಹಿಡಿದಿಟ್ಟುಕೊಳ್ಳಲು ತಮ್ಮ ಇಲಾಖೆ ಇ-ಗ್ರಂಥಾಲಯ ವ್ಯವಸ್ಥೆ ಆರಂಭಿಸಿತ್ತು. ಇ-ಗ್ರಂಥಾಲಯ ನೋಂದಣಿಆಂದೋಲನ ಇನ್ನು ಜಾರಿಯಲ್ಲಿದೆ ಎಂದು ತಿಳಿಸಿದರು.

ಗ್ರಂಥಾಲಯ ಸಪ್ತಾಹದ ಪ್ರಾಮುಖ್ಯತೆ ಬಗ್ಗೆ ತಿಳಿಸಿದ ಅವರು ಗ್ರಂಥಾಲಯ ಸೇವೆಗಳ ಬಗ್ಗೆ ಮಾಹಿತಿ, ಪುಸ್ತಕ ಓದುವ ಹವ್ಯಾಸವನ್ನು ರೂಢಿಸುವ ಸಲುವಾಗಿಯೇ 1968ರಿಂದ ಗ್ರಂಥಾಲಯ ಸಪ್ತಾಹ ಆಚರಿಸಲಾಗುತ್ತಿದೆ. ನ.20 ರವರೆಗೆ ಈ ಸಪ್ತಾಹ ನಡೆಯಲಿದೆ. ಜಿಲ್ಲಾ ಕೇಂದ್ರ ಸೇರಿದಂತೆ ಇತರೆ ಗ್ರಂಥಾಲಯಗಳಲ್ಲಿ ಲಭ್ಯವಿರುವ ಪುಸ್ತಕ ದಾಸ್ತಾನು, ಸಾರ್ವಜನಿಕರ ಸ್ಪಂದನೆ, ಓದುಗರ ಅಭಿಪ್ರಾಯ ಸಂಗ್ರಹಣೆ ಮುಂತಾದ ವಿಚಾರಗಳಲ್ಲಿ ಮಾಹಿತಿಯನ್ನು ಕಲೆ ಹಾಕಲಾಗುವುದು ಎಂದರು.

ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿಯೂ ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ಸಾರ್ವಜನಿಕರಿಗೆಉಪಯೋಗವಾಗಲಿರುವ ಪುಸ್ತಕಗಳುಇವೆ.ಇವುಗಳನ್ನು ಎಲ್ಲರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡರು. ಓದುಗ ಹರೀಶ್‌ ಮಾತನಾಡಿ, ರಾಮನಗರ ಜಿಲ್ಲಾ ಗ್ರಂಥಾಲಯಹೆಸರಿಗೆಜಿಲ್ಲಾಕೇಂದ್ರ ಗ್ರಂಥಾಲಯ, ಆದರೆ ಇದಕ್ಕೆ ತಕ್ಕ ಅನುಕೂಲಗಳು ಇಲ್ಲಿಲ್ಲ. ಗ್ರಂಥಾಲಯ ಇಲಾಖೆ ಈ ಬಗ್ಗೆ ಗಮನ ಹರಿಸಬೇಕು. ಸರ್ಕಾರಿ ಗ್ರಂಥಾಲಯಗಳನ್ನು ಬಳಸುವವರು ಬಡವರ್ಗದವರೇ ಹೆಚ್ಚಾಗಿದ್ದಾರೆ.

ಕೋವಿಡ್‌ ನಿಯಮಾನುಸಾರ ಬಳಕೆ ಮಾಡಲು ಹೆಚ್ಚು ಉತ್ತೇಜನ ನೀಡಬೇಕು ಎಂದು ಮನವಿಮಾಡಿದರು. ನೆರೆದಿದ್ದ ಗ್ರಂಥಾಲಯ ಬಳಕೆದಾರರು ಶೌಚಾಲಯ ಸಮಸ್ಯೆ ನೀಗಿಸುವಂತೆ ಮತ್ತು ಕೆಲವು ಪುಸ್ತಕಗಳ ಅಗತ್ಯವನ್ನು ಮುಂದಿಟ್ಟರು. ಗ್ರಂಥಾಲಯ ಸಿಬ್ಬಂದಿ ಜಯರಾಮು, ಸದಾಶಿವ, ಮಹದೇವ ಸ್ವಾಮಿ, ಸುಮಲತಾ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.