ಪ್ರಾಣ ತ್ಯಾಗ ಮಾಡಿದ ಯೋಧರನ್ನು ಸ್ಮರಿಸಿ
ಕಾರ್ಗಿಲ್ನಲ್ಲಿ ಆಕ್ರಮಣಕಾರರನ್ನು ಸದೆಬಡಿದ ಯೋಧರು • ವಿವಿಧೆಡೆ ಕಾರ್ಗಿಲ್ ವಿಜಯೋತ್ಸವ
Team Udayavani, Jul 27, 2019, 11:58 AM IST
ರಾಮನಗರದ ಪಟೇಲ್ ಆಂಗ್ಲ ಶಾಲೆಯಲ್ಲಿ ನಡೆದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಪಟೇಲ್ ಆಂಗ್ಲ ಶಾಲೆಯ ಕಾರ್ಯದರ್ಶಿ ಪಟೇಲ್ ಸಿ ರಾಜು ಉದ್ಘಾಟಿಸಿದರು.
ರಾಮನಗರ: ದೇಶಕ್ಕಾಗಿ, ದೇಶದ ಜನರ ರಕ್ಷಣೆಗಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಯೋಧರನ್ನು ಸ್ಮರಿಸಿಸುವುದರ ಮೂಲಕ ಅವರಿಗೆ ಕೃತಜ್ಞತೆ ಅರ್ಪಿಸುವುದು ದೇಶವಾಸಿಗಳ ಕರ್ತವ್ಯ ಎಂದು ಪಟೇಲ್ ಆಂಗ್ಲ ಶಾಲೆಯ ಕಾರ್ಯದರ್ಶಿ ಪಟೇಲ್ ಸಿ ರಾಜು ಅಭಿಪ್ರಾಯಪಟ್ಟರು.
ನಗರದ ಪಟೇಲ್ ಆಂಗ್ಲ ಶಾಲೆಯ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, 20 ವರ್ಷಗಳ ಹಿಂದೆ ನೆರೆ ರಾಷ್ಟ್ರ ಪಾಕಿಸ್ತಾನ ವಶಪಡಿಸಿಕೊಂಡಿದ್ದ ಭಾರತದ ಕಾರ್ಗಿಲ್ ಪ್ರದೇಶವನ್ನು ಭಾರತದ ಸುಮಾರು 500ಕ್ಕೂ ಹೆಚ್ಚು ಯೋಧರು ಪ್ರಾಣ ತೆತ್ತು ವಶಕ್ಕೆ ಪಡೆದುಕೊಂಡರು. ಕಡಿದಾದ ಕಾರ್ಗಿಲ್ ಬೆಟ್ಟವನ್ನು ಹತ್ತಿ ಪಾಕಿಸ್ತಾನದ ಆಕ್ರಮಣಕಾರರನ್ನು ಸದೆಬಡಿದು ದೇಶದ ಗಡಿಯನ್ನು ರಕ್ಷಿಸಿದ್ದಾರೆ. ಈ ಯುದ್ಧದಲ್ಲಿ ಮೇಜರ್ ಮನೋಜ್ ಕುಮಾರ್ ಪಾಂಡೆ, ಕ್ಯಾಪ್ಟನ್ ವಿಕ್ರಮ್ ಮುಂತಾದ ಯೋಧರ ಶ್ರಮ ಸಾರ್ಥಕವಾಗಿದೆ ಎಂದು ಸ್ಮರಿಸಿದರು.
ಆರೋಗ್ಯ ಭಾರತಿ ಸಂಘಟನೆಯ ನಗರ ಸಂಘಟನಾ ಕಾರ್ಯದರ್ಶಿ ಸತೀಶ್ ಕಾರ್ಗಿಲ್ ಯುದ್ಧ, ಭಾರತದ ನಿಲುವು, ಭಾರತೀಯ ಸೇನೆಯ ಹೋರಾಟ ಮುಂತಾದ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳ ಗಮನ ಸೆಳೆದರು.
ಪರಿಸರ ಮಾಲಿನ್ಯದಿಂದ ರಕ್ಷಣೆ ಅನಿವಾರ್ಯ: ಆರೋಗ್ಯ ಭಾರತಿ ತುಮಕೂರು ವಿಭಾಗದ ಪ್ರಮುಖರಾದ ಮಂಜುನಾಥ್ ಮಾತನಾಡಿ, ಪರಿಸರವನ್ನು ಉಳಿಸಿಕೊಳ್ಳವ ಮೂಲಕವೂ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಕೃತಜ್ಞತೆ ಸಲ್ಲಿಸಬಹುದು ಎಂದರು.
ಭಯೋತ್ಪಾದಕರಿಂದ ದೇಶ ರಕ್ಷಸಿಕೊಳ್ಳುವ ಜೊತೆಗೆ ಪರಿಸರ ಮಾಲಿನ್ಯದಿಂದ ರಕ್ಷಿಸಿಕೊಳ್ಳುವುದು ಅನಿವಾರ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಿಷ್ಠ ಒಂದು ಗಿಡವನ್ನಾದರು ನೆಟ್ಟು ಪೋಷಿಸಬೇಕು ಎಂದು ಹೇಳಿದರು. ಈ ವೇಳೆ ವಿದ್ಯಾರ್ಥಿಗಳಿಗೆ ಸೀಡ್ಬಾಲ್ಗಳನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಭಾರತಿಯ ಅಧ್ಯಕ್ಷ ಎಂ.ಡಿ.ಶಿವಕುಮಾರ್ ಮತ್ತು ಮುಖ್ಯಶಿಕ್ಷಕರಾದ ವಿನೋದ್ ಜಿ.ಆರ್. ಮತ್ತು ರತ್ನ, ಸಹ ಶಿಕ್ಷಕಿಯಾದ ನಾಗಲಕ್ಷ್ಮಮ್ಮ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ