ಇಒ ವಿರುದ್ಧ ಅಸಮಾಧಾನ: ಸಭೆಗೆ ಗೈರು


Team Udayavani, Sep 8, 2019, 12:28 PM IST

rn-tdy-2

ರಾಮನಗರ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆಗೆ ಸದಸ್ಯರ ಗೈರು ಹಾಜರಿಯಿಂದಾಗಿ ಬಣಗುಡುತ್ತಿರುವ ಸಭಾಂಗಣ.

ರಾಮನಗರ: ತಾಪಂ ಇಒ ಧೋರಣೆಗೆ ಬಗ್ಗೆ ಬೇಸತ್ತ ತಾಪಂ ಸದಸ್ಯರು ಶನಿವಾರ ನಡೆಯಬೇಕಿದ್ದ ತಾಪಂ ಸಾಮಾನ್ಯ ಸಭೆಗೆ ಗೈರಾಗಿದ್ದರಿಂದ ಸದರಿ ಸಭೆಯನ್ನು ಮುಂದೂಡಲ್ಪಟ್ಟಿದೆ.

ಶನಿವಾರ ತಾಪಂ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ತಾಪಂ ಅಧ್ಯಕ್ಷ ಗಾಣಕಲ್ ನಟರಾಜು ಅಧ್ಯಕ್ಷತೆಯಲ್ಲಿ ನಡೆಯಬೇಕಿತ್ತು. ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ತಾಪಂ ಇಒ ಅವರು ಸಹ ವೇದಿಕೆಯಲ್ಲಿದ್ದರು. ಆದರೆ, ತಾಪಂ ಚುನಾಯಿತ ಪ್ರತಿನಿಧಿಗಳೇ ಸಭೆಗೆ ಆಗಮಿಸಲಿಲ್ಲ.

ಜೆಡಿಎಸ್‌ ಸದಸ್ಯರು ತಾಪಂ ಅಧ್ಯಕ್ಷ ಗಾಣಕಲ್ ನಟರಾಜು ಹಾಗೂ ಇಒ ಅವರ ಧೋರಣೆಗಳಿಂದಾಗಿ ಸಭೆಗೆ ಹಾಜರಾಗುತ್ತಿಲ್ಲ ಎಂದು ಪ್ರತಿಕ್ರಿಯಿಸಿದರು. ಇನ್ನೊಂದೆಡೆ ಕಾಂಗ್ರೆಸ್‌ ಸದಸ್ಯ ಇಒ ಅವರ ವರ್ತನೆಗೆ ಬೇಸತ್ತು ಸಭೆಗೆ ಹಾಜರಾಗೋಲ್ಲ ಎಂದರು. ಕಾಂಗ್ರೆಸ್‌ ಸದಸ್ಯರ ಮನವೊಲಿಸುವಲ್ಲಿ ನಿರತರಾದ ಅಧ್ಯಕ್ಷರು ಸಹ ಸಭಾಂಗಣದ ಕಡೆಗೆ ಬರಲಿಲ್ಲ.

2 ಕೋಟಿ ರೂ. ಅನುದಾನದ ಬಗ್ಗೆ ಚರ್ಚೆಯಾಗಬೇಕಿತ್ತು: ಸಭೆಯಲ್ಲಿ ಪ್ರಮುಖವಾಗಿ ತಾಪಂಗೆ ಸರ್ಕಾರದಿಂದ ಬಂದಿರುವ 2 ಕೋಟಿ ರೂ. ಅನುದಾನಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಬೇಕಿತ್ತು. 2018-19ನೇ ಸಾಲಿನ ಲಿಂಕ್‌ ಡಾಕ್ಯೂಮೆಂಟ್ ಅನುಗುಣವಾಗಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಬಗ್ಗೆ ಚರ್ಚೆಯಾಗಿ ಅನುಮೋದನೆ ಪಡೆಯಬೇಕಿತ್ತು. ಆದರೆ, ಚುನಾಯಿತ ಪ್ರತಿನಿಧಿಗಳು ತಾಪಂ ಇಒ ಬಾಬು ಅವರ ಬಗ್ಗೆ ಸಿಡಿಮಿಡಿಗೊಂಡಿದ್ದು, ಇಒ ಅವರ ಬದಲಾವಣೆ ಆಗದ ಹೊರತು ಸಭೆಗೆ ಹಾಜರಾಗುವುದಿಲ್ಲ ಎಂದು ಶಪಥ ಮಾಡಿದಂತಿತ್ತು. ಮಧ್ಯಾಹ್ನ ಸುಮಾರು 1.30ರ ವರೆಗೆ ಕಾದು ಕುಳಿತ ಅಧಿಕಾರಿಗಳು ನಂತರ ನಿರ್ಗಮಿಸಿದರು.

ಸಭೆಗೆ ಅಗೌರವ ತೋರಿದರೇ ಅಧ್ಯಕ್ಷರು?: ಸದಸ್ಯರು ಬರಲಿ, ಬಿಡಲಿ ಅಧ್ಯಕ್ಷರು ಸಭೆಗೆ ಹಾಜರಾಗಬೇಕಿತ್ತು. ಸಭೆಯಲ್ಲಿ ಕಾದು ಕುಳಿತಿದ್ದ ಅಧಿಕಾರಿಗಳೊಂದಿಗೆ ಮಾಹಿತಿ ಪಡೆಯಬಹುದಿತ್ತು. ಕೋರಂ ಕೊರತೆ ಇದ್ದರೆ ಸಭೆ ರದ್ದಾಗಿದೆಯೇ, ಮುಂದೂಡಲ್ಪಟ್ಟಿದೆಯೇ ಎಂಬುದನ್ನಾದರು ತಿಳಿಸಬೇಕಿತ್ತು. ಆದರೆ, ಸದಸ್ಯರೊಂದಿಗೆ ಅಧ್ಯಕ್ಷರು ಸಹ ಸಭೆಗೆ ಗೈರಾಗಿದ್ದರು ಎಂದು ಕೆಲವು ಅಧಿಕಾರಿಗಳು ಮತ್ತು ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸದಸ್ಯರ ನಿರ್ಧಾರಕ್ಕೆ ಗೌರವ: ತಾಲೂಕು ಪಂಚಾಯ್ತಿ ಇಒ ಅವರ ಬಗ್ಗೆ ಸದಸ್ಯರಲ್ಲಿ ಅಸಮಾಧಾನವಿರುವುದು ನಿಜ. ಸಾರ್ವಜನಿಕರ ಕೆಲಸ ಮತ್ತು ಕಚೇರಿ ಆಡಳಿತ ಕಾರ್ಯನಿರ್ವಹಿಸುವಲ್ಲಿ ಬೇಜವಾಬ್ದಾರಿ ತೋರಿಸುತ್ತಿರುವ ಬಗ್ಗೆ ದೂರುಗಳಿವೆ. ಸಭೆಗಳಲ್ಲಿ ಆದ ನಿರ್ಣಯಗಳನ್ನು ಜಾರಿ ಮಾಡುತ್ತಿಲ್ಲ. ಸದಸ್ಯರಿಗೆ ಗೌರವಿಸಲ್ಲ. ಸದಸ್ಯರು ಹೇಳುವ ಸಲಹೆಗಳನ್ನು ಪಾಲಿಸುತ್ತಿಲ್ಲ. ಹೀಗಾಗಿ ಎಲ್ಲಾ ಸದಸ್ಯರು ಇಒ ಅವರ ಬದಲಾವಣೆಗೆ ಆಗ್ರಹಿಸುತ್ತಿದ್ದಾರೆ ಎಂದು ತಾಲೂಕು ಪಂಚಾಯ್ತಿ ಅಧ್ಯಕ್ಷ ಗಾಣಕಲ್ ನಟರಾಜು ಪ್ರತಿಕ್ರಿಯಿಸಿದ್ದಾರೆ.

ಸಿಇಒ ಭೇಟಿ: ತಾಪಂ ಸದಸ್ಯರ ಒಟ್ಟಾರೆ ಅಭಿಪ್ರಾಯ ಇಒ ಅವರನ್ನು ಬದಲಾಯಿಸುವುದು. ಹೀಗಾಗಿ ತಾವು ಕೆಲವು ಸದಸ್ಯರೊಂದಿಗೆ ಜಿಲ್ಲಾ ಪಂಚಾಯ್ತಿ ಸಿಇಒ ಜಯ ವಿಭವ ಸ್ವಾಮಿ ಅವರನ್ನು ಭೇಟಿ ಮಾಡಿ, ಇಒ ಅವರು ಸಾರ್ವಜನಿಕ ಕೆಲಸ ಮತ್ತು ಕಚೇರಿ ಆಡಳಿತ ಕಾರ್ಯನಿರ್ವಹಿಸದೇ ಅಸಡ್ಡೆ ಮತ್ತು ಬೇಜವಾಬ್ದಾರಿ ತೋರುತ್ತಿರುವ ಬಗ್ಗೆ ಲಿಖೀತ ಮನವಿ ನೀಡಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.