ಜನಸಾಮಾನ್ಯರ ಎಲ್ಲಾ ಸಮಸ್ಯೆಗಳಿಗೂ ಸ್ಪಂದಿಸಿ

ಯುವ ಶಕ್ತಿ ಯಿಂದಲೇ ಸಮಾಜದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ವೇದಿಕೆ ಸಿದ್ಧವಾಗಿದೆ.

Team Udayavani, Jul 15, 2022, 6:24 PM IST

ಜನಸಾಮಾನ್ಯರ ಎಲ್ಲಾ ಸಮಸ್ಯೆಗಳಿಗೂ ಸ್ಪಂದಿಸಿ

ಮಾಗಡಿ: ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಕಾನೂನು ಮತ್ತು ಹಕ್ಕುಗಳು ಸಿಗಬೇಕು ಎಂಬುದೇ ಮಾನವ ಹಕ್ಕುಗಳ ಪ್ರಚಾರ ವೇದಿಕೆ ಧ್ಯೇಯವಾಗಿದೆ ಎಂದು ರಾಜ್ಯ ಮಾನವ ಹಕ್ಕುಗಳ ಪ್ರಚಾರ ವೇದಿಕೆ ಅಧ್ಯಕ್ಷ ಮುನಿಕೃಷ್ಣ ತಿಳಿಸಿದರು.

ತಾಲೂಕಿನ ಮರಳುದೇವನಪುರದ ನರಸಿಂಹ ಮೂರ್ತಿ ಅವರ ತೋಟದ ಮನೆಯಂಗಳಲಿ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಮಾನವ ಹಕ್ಕುಗಳ ಪ್ರಚಾರ ವೇದಿಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಅವರಿಗೆ ಕಾರ್ಯಾಗಾರ ನಡೆಸಿ ಮಾತನಾಡಿ, ಸಮಾಜದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಅವರಿಗೆ ಕಾನೂನು ಅರಿವು ನೀಡುವ ಮೂಲಕ ಜಾಗೃತಿಗೊಳಿಸ ಲಾಗುವುದು ಎಂದು ಹೇಳಿದರು.

ಸೇವೆ ಸಲ್ಲಿಸಲು ಸಂಕಲ್ಪ: ರಾಜ್ಯದಲ್ಲಿ ಸುಮಾರು 38 ಲಕ್ಷ ಸದಸ್ಯರಿದ್ದು, ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರ ತೊಡೆದು ಹಾಕಬೇಕು. ಸಾಮಾನ್ಯರಿಗೆ ಉತ್ತಮ ಸೇವೆ ಕಲ್ಪಿಸಬೇಕು. ಈ ಮೂಲಕ ಸಮಾಜದಲ್ಲಿ ಬದಲಾವಣೆಗೆ ಉನ್ನತ ಮಟ್ಟದ ಅಧಿಕಾರಿಗಳ ಸಲಹೆ ಪಡೆದು, ಎಲ್ಲೆಡೆ ಜಾಗೃತಿಗೊಳಿಸಲಾಗುವುದು. ಜನರಲ್ಲಿ ನವ ಹಕ್ಕುಗಳ ವಿಚಾರ ವೇದಿಕೆ ಮೂಲಕ ವಿಶ್ವಾಸ ಮೂಡಿಸುವ ಮೂಲಕ ಉತ್ತಮ ಸೇವೆ ಸಲ್ಲಿಸಲು ಸಂಕಲ್ಪ ಮಾಡಲಾಗಿದೆ. ತಾಲೂಕು, ಹೋಬಳಿ,
ಗ್ರಾಮ ಮಟ್ಟದಲ್ಲಿನ ಪದಾಧಿಕಾರಿಗಳ ಯೋಗಕ್ಷೇಮಕ್ಕೂ ಹೆಚ್ಚಿನ ಜವಾಬ್ದಾರಿ ವೇದಿಕೆ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಸರ್ಕಾರಿ ಸೌಲಭ್ಯಕ್ಕೆ ಪ್ರಾಮಾಣಿಕ ಪ್ರಯತ್ನ: ರಾಜ್ಯ ಉಪಾಧ್ಯಕ್ಷ ಬಸವರಾಜು ಮಾತನಾಡಿ, ಸಮಾಜದಲ್ಲಿ ಸಂವಿಧಾನದ ಉಲ್ಲಂಘನೆಯಾದರೆ ಅವರನ್ನು ಕಾನೂನು ಮತ್ತು ಹಕ್ಕುಗಳ ಕುರಿತು ಜಾಗೃತಿಗೊಳಿಸಲಾಗುವುದು. ರಾಜ್ಯದಲ್ಲಿ ಶೈಕ್ಷಣಿಕ ವಾಗಿ ಪ್ರಗತಿ ಸಾಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯ ನೀಡಲು ಪ್ರಾಮಾಣಿಕವಾಗಿ ವೇದಿಕೆ ಪ್ರಯತ್ನಿಸುತ್ತದೆ ಎಂದು ತಿಳಿಸಿದರು.

ವೇದಿಕೆಯ ರಾಮಕೃಷ್ಣ ಮಾತನಾಡಿ, ಅರಮನೆ, ಗುರುಮನೆ, ನೆರೆಮನೆಯನ್ನು ಪ್ರೀತಿಸೋಣ, ಸಂಸ್ಕಾರವಂತರಾಗೋಣ, ಸಮಾಜ ಮುಖೀ ಸೇವೆಯೇ ನಮ್ಮ ಧ್ಯೇಯ ವಾಕ್ಯವಾಗಬೇಕಿದೆ ಎಂದರು.

ಭ್ರಷ್ಟಾಚಾರ ತಡೆಗೆ ಸಿದ್ಧ: ಜಿಲ್ಲಾಧ್ಯಕ್ಷ ಕೆ.ವಿ. ನರಸಿಂಹಮೂರ್ತಿ ಮಾತನಾಡಿ, ಯುವ ಶಕ್ತಿ ಯಿಂದಲೇ ಸಮಾಜದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ವೇದಿಕೆ ಸಿದ್ಧವಾಗಿದೆ. ಯುವಕರು, ಮಹಿಳೆಯರು ಸೇವಾ ಮನೋಭಾವದಿಂದ ವೇದಿಕೆ ಸೇರುವ ಮೂಲಕ ಸದಸ್ಯತ್ವ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ನಟರಾಜ್‌, ತ್ಯಾಗರಾಜ್‌, ರತ್ನಮ್ಮ ಮಾತನಾಡಿದರು.

ತಾಲೂಕು ಪದಾಧಿಕಾರಿಗಳ ಆಯ್ಕೆ: ನೂತನ ಆಧ್ಯಕ್ಷರಾಗಿ ಸಂತೋಷ್‌, ಪ್ರಧಾನ ಕಾರ್ಯದರ್ಶಿ ಕುಮಾರ್‌, ಉಪಾಧ್ಯಕ್ಷ ಡಿ.ಜಿ.ಗಂಗಧಾರ್‌, ಜಯ ಶೀಲ, ಖಜಾಂಚಿಯಾಗಿ ದೀಪು, ಸಂಘಟನಾ ಕಾರ್ಯದರ್ಶಿಗಳಾದ ನಾಗೇಶ್‌, ಸತೀಶ್‌, ಚಂದ್ರಶೇಖರ್‌ ಅವರಿಗೆ ಗುರುತಿನ ಚೀಟಿ ಹಾಗೂ ಪ್ರಮಾಣ ಪತ್ರವನ್ನು ರಾಜ್ಯಾಧ್ಯಕ್ಷ ಮುನಿಕೃಷ್ಣ ವಿತರಿಸಿದರು.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi; Mother-son passed away due to gas leak from geyser

Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

1-train

Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ

HD-Kumaraswamy

Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್‌ಡಿಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.