ಡಿಸಿಎಂ ತವರೂರಲ್ಲಿ ರಸ್ತೆಯದ್ದೇ ಸಮಸ್ಯೆ


Team Udayavani, Oct 20, 2019, 5:55 PM IST

rn-tdy-1

ಕುದೂರು: ತಿಪ್ಪಸಂದ್ರ ಹೋಬಳಿ ಸಮೀಪವಿರುವ ಡಿಸಿಎಂ ಅಶ್ವತ್ಥ ನಾರಾಯಣ್‌ ತವರೂರಾದ ಚಿಕ್ಕಕಲ್ಯಾ ಗ್ರಾಮದ ರಸ್ತೆಯಲ್ಲಿ ಮಳೆ ಬಂದರೆ ಸಾಕು ರಸ್ತೆಯಲ್ಲಿ ನೀರು ನಿಂತು ಕೆಸರು ಗದ್ದೆಯಾಗಿ ಓಡಾಡಲಾಗದ ಪರಿಸ್ಥಿತಿ ಎದುರಾಗುತ್ತದೆ.

ತಿಪ್ಪಸಂದ್ರ ಹೋಬಳಿ ಸಂಕೀಘಟ್ಟ ಗ್ರಾಪಂ ವ್ಯಾಪ್ತಿಯ ಚಿಕ್ಕಕಲ್ಯಾ ಗ್ರಾಮ ಕಂದಾಯ ದಾಖಲೆಗೆ ಸೇರಿದಾಗಿನಿಂದಲೂ ಡಾಂಬರು ಭಾಗ್ಯ ಕಾಣದೆ ದುರ್ಗತಿಗೆ ಬಂದಿದೆ. ಚಿಕ್ಕಕಲ್ಯಾ ಗ್ರಾಮದಿಂದ ಸುಮಾರು 3 ಕಿ.ಮೀ ರಸ್ತೆ ಸ್ಥಿತಿ ಚಿಂತಾಜನಕವಾಗಿದ್ದು ಇಲ್ಲಿನ ಜನರಿಗೆ ರಸ್ತೆ ಸವಾಲಾಗಿ ಮಾರ್ಪಟ್ಟಿದೆ.

ಹೈನುಗಾರಿಕೆ ಕಿರಿಕಿರಿ: ಹೆಚ್ಚಾಗಿ ಹೈನುಗಾರಿಕೆ ನೆಚ್ಚಿಕೊಂಡಿರುವ ಮಹಿಳೆಯರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಹಾಲು ಹಾಕಲು ಬರಬೇಕೆಂದರೆ ಕೆಸರು ರಸ್ತೆಯಲ್ಲೇ ಜೀವ ಬಿಗಿ ಹಿಡಿದುಕೊಂಡು ಬರಬೇಕಾದ ಪರಿಸ್ಥಿತಿ ಬಂದೋದಗಿದೆ. ತಲೆ ಮೇಲೆ ಹಾಲಿನ ಕ್ಯಾನ್‌ ಹಿಡಿದು ಒಂದೆರೆಡು ಕಿ.ಮೀ ನಡೆಯುವ ಮಹಿಳೆಯರು ಇಲ್ಲಿನ ರಸ್ತೆಗೆ ಮತ್ತು ಜನಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕುತ್ತಾರೆ. ಇನ್ನು ಬೇಸಿಗೆ , ಚಳಿಗಾಲದಲ್ಲೂ ಈ ರಸ್ತೆ ಗುಂಡಿಗಳದ್ದೇ ಕಾರು ಬಾರಾಗಿ ವಾಹನ ಸಂಚಾರಕ್ಕೆ ತಡೆ ತಂದಿದೆ.

ತಲೆ ಕೆಡಿಸಿಕೊಳ್ಳದ ನಾಯಕರು: ಇನ್ನು ರಾತ್ರಿ ವೇಳೆ ವಾಹನಗಳಿಂದ ಬಿದ್ದು ಸವಾರರು ಗಾಯಗೊಂಡಿರುವ ಘಟನೆ ಗಳು ಸಾಕಷ್ಟಿವೆ. ತುರ್ತು ವೇಳೆಯಲ್ಲಿ ಯಥಾಸ್ಥಿತಿ ಗರ್ಭೀಣಿಯರು , ವೃದ್ಧರು, ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ಯಲು ನರಕಯಾತನೆ ಪಡಬೇಕಾಗಿದೆ. ಇಲ್ಲಿಯವರೆಗೂ ಯಾವೊಬ್ಬ ಜನಪ್ರತಿನಿಧಿಗಳು ಇದರ ಬಗ್ಗೆ ತಲೆ ಕೆಡೆಸಿಕೊಂಡಿಲ್ಲ.

ಕಾಳಜಿಯೇ ಇಲ್ಲ: ಸಂಕೀಘಟ್ಟ ಗ್ರಾಪಂಗೆ ಸೇರುವ ಈ ಹಳ್ಳಿ ರಸ್ತೆ ರಿಪೇರಿ ಮಾಡುವ ಗೋಜಿಗೆ ಸ್ಥಳೀಯ ಜನ ಪ್ರತಿನಿಧಿಗಳು ಹೋಗಿಲ್ಲ. ಇದೇ ಭಾಗದಿಂದ ಆಯ್ಕೆಯಾದ ಜಿಪಂ ಸದಸ್ಯರು ರಸ್ತೆಯಲ್ಲಿ ದಿನ ನಿತ್ಯ ಓಡಾಡುತ್ತಾರೆ. ಕನಿಷ್ಠ ಪಕ್ಷ ಈ ಭಾಗದಲ್ಲಿ ಜನರು ತನಗೆ ಮತ ಹಾಕಿ ಚುನಾಯಿಸಿದ್ದಾರೆ. ಈ ಭಾಗದ ಜನರ ಅಭಿವೃದ್ಧಿಗೆ ರಸ್ತೆ ಅಭಿವೃದ್ಧಿಪಡಿಸಬೇಕು ಎನ್ನುವ ಕಾಳಜಿಯೇ ಇಲ್ಲದಂತಾಗಿದೆ. ಥ್

ಜೀವ ಬಿಗಿ ಹಿಡಿದು ಸಂಚರಿಸಬೇಕು: ತಿಪ್ಪಸಂದ್ರ ಹೋಬಳಿ ಹಿಂದುಳಿದ ಹೋಬಳಿ ಕೇಂದ್ರ ಕುದೂರಿಗೆ ಹೋಲಿಸಿದ್ದಲ್ಲಿ ಅಷ್ಟೇನು ಪ್ರಗತಿಯಾಗಿಲ್ಲ. ಆದ ಕಾರಣ ಪ್ರತಿ ನಿತ್ಯ ಸಾವಿರಾರು ಮಂದಿ ಶಿಕ್ಷಣ, ವ್ಯಾಪಾರ, ವೈದ್ಯಕೀಯ ಸೌಲಭ್ಯಕ್ಕೆ ಕುದೂರನ್ನೇ ಅವಲಂಬಿಸಿದ್ದಾರೆ. ನಿತ್ಯ ಗುಂಡಿ ರಸ್ತೆಯಲ್ಲಿ ಜೀವ ಬಿಗಿ ಹಿಡಿದು ಸಂಚರಿಸುತ್ತಿದ್ದಾರೆ. ಇನ್ನಾದರೂ ಜಿಪಂ ಆಗಲಿ, ಲೋಕೋಪಯೋಗಿ ಇಲಾಖೆಯಾಗಲಿ ,ಜನ ಪ್ರತಿನಿಧಿಗಳು ಎಚ್ಚೆತ್ತುಕೊಂಡು ಈ ರಸ್ತೆಗೆ ಡಾಂಬರು ಹಾಕಿಸಿ ಮುಕ್ತಿ ಒದಗಿಸುವರೆ ಎಂದು ಕಾದು ನೋಡಬೇಕಾಗಿದೆ.

 

-ಕೆ.ಎಸ್‌.ಮಂಜುನಾಥ್

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.